ಕಾಪು : ಉಸಿರಾಟದ ತೊಂದರೆ: ವ್ಯಕ್ತಿ ಸಾವು
ಸಮಗ್ರ ನ್ಯೂಸ್ : ಎದೆನೋವು ಕಾಣಿಸಿಕೊಂಡು ಉಸಿರಾಟದ ತೊಂದರೆಯಿಂದ ಕಾಪು ಇನ್ನಂಜೆ ನಿವಾಸಿ ಪ್ರಶಾಂತ್ (44) ಅವರು ಇತ್ತೀಚೆಗೆ ಮೃತಪಟ್ಟ ಘಟನೆ ನಡೆದಿದೆ. ವಿಪರೀತ ಮದ್ಯ ಸೇವನೆ ಅಭ್ಯಾಸ ಹೊಂದಿದ್ದ ಅವರು ಮದ್ಯಸೇವನೆಯನ್ನು ಬಿಡಲು 3 ವರ್ಷಗಳ ಹಿಂದೆ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಒಂದು ವಾರದ ಹಿಂದೆ ಕಾಲು ಊತ ಕಾಣಿಸಿಕೊಂಡಿದ್ದರಿಂದ ಅಜ್ಜರಕಾಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು ಎಂಬ ಮಾಹಿತಿ ತಿಳಿದು ಬಂದಿದೆ.
ಕಾಪು : ಉಸಿರಾಟದ ತೊಂದರೆ: ವ್ಯಕ್ತಿ ಸಾವು Read More »









