ಬಂಟ್ವಾಳ: ಕಾನೂನು ಬಾಹಿರ ಆಟೋ ಚಾಲನೆ- ಚಾಲಕನಿಂದ ಆಕ್ರೋಶ
ಸಮಗ್ರ ನ್ಯೂಸ್ : ಕಾನೂನು ಬಾಹಿರವಾಗಿ ಆಟೋರಿಕ್ಷಾ ಓಡಿಸುತ್ತಿದ್ದ ವ್ಯಕ್ತಿಯೋರ್ವನನ್ನು ಟ್ರಾಫಿಕ್ ಪೊಲೀಸರು ತಡೆದು ದಂಡ ಹಾಕಿದ್ದಾರೆ. ಈ ಕಾರಣಕ್ಕೆ ಆವೇಶಕ್ಕೊಳಗಾದ ಚಾಲಕ ಟ್ರಾಫಿಕ್ ಎಸ್.ಐ.ಹಾಗೂ ಸರಕಾರಿ ವಾಹನಕ್ಕೆ ಮತ್ತು ಆಟೋ ರಿಕ್ಷಾಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲು ಮುಂದಾದ ಘಟನೆ ಬಂಟ್ವಾಳ ಬಿಸಿರೋಡಿನ ಕೈಕಂಬ ಎಂಬಲ್ಲಿ ಸೋಮವಾರ ನಡೆದಿದೆ. ಗೂಡಿನಬಳಿ ನಿವಾಸಿ ಮಹಮ್ಮದ್ ಅನ್ಸಾರ್ ಪ್ರಕರಣದ ಆರೋಪಿಯಾಗಿದ್ದು, ಸದ್ಯ ತಲೆಮರೆಸಿಕೊಂಡಿರುತ್ತಾನೆ. ಟ್ರಾಫಿಕ್ ಎಸ್ಐ. ಸುತೇಶ್ ಅವರು ಕೈಕಂಬದಲ್ಲಿ ವಾಹನಗಳ ತಪಾಸಣಾ ಕಾರ್ಯದಲ್ಲಿ ತೊಡಗಿದ್ದ ವೇಳೆ, ಯೂನಿಫಾರ್ಮ್ […]
ಬಂಟ್ವಾಳ: ಕಾನೂನು ಬಾಹಿರ ಆಟೋ ಚಾಲನೆ- ಚಾಲಕನಿಂದ ಆಕ್ರೋಶ Read More »










