March 2024

ಪುತ್ತೂರು – ನಿಂತಿದ್ದ ಗೂಡ್ಸ್ ಲಾರಿಗೆ ಕಾರು ಢಿಕ್ಕಿ – ನಾಲ್ವರು ಗಂಭೀರ

ಸಮಗ್ರ ನ್ಯೂಸ್ : ರಸ್ತೆ ಬದಿ ನಿಲ್ಲಿಸಿದ್ದ ಗೂಡ್ಸ್ ಲಾರಿಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಪುತ್ತೂರು ತಾಲೂಕಿನ ಮರೀಲ್ ನ ಕ್ಯಾಂಪ್ಕೋ ಚಾಕೊಲೇಟ್ ಫ್ಯಾಕ್ಟರಿ ಬಳಿ ನಡೆದಿದೆ. ಗುಲಾಬಿ (55), ಕೃಷ್ಣಪ್ಪ ನಾಯ್ಕ್ (60) ಇಬ್ಬರಿಗೆ ಗಂಭೀರ ಗಾಯ, ರೋಹಿಣಿ (32), ಗನ್ಯ (2) ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಕಾಸರಗೋಡು ಜಿಲ್ಲೆಯ ಪೈವಳಿಕೆ ಗ್ರಾಮದ ಸುಳ್ಳಿಮಲೆಯ ಒಂದೇ ಕುಟುಂಬದ ನಿವಾಸಿಗಳು ಕಾರಿನಲ್ಲಿ ಬರುತ್ದಿದ್ದ ವೇಳೆ ಎದುರಿಗೆ […]

ಪುತ್ತೂರು – ನಿಂತಿದ್ದ ಗೂಡ್ಸ್ ಲಾರಿಗೆ ಕಾರು ಢಿಕ್ಕಿ – ನಾಲ್ವರು ಗಂಭೀರ Read More »

ಟಾಟಾ ಮೋಟಾರ್ಸ್ ಎಲೆಕ್ಟ್ರಿಕ್ ಕಾರುಗಳ ಮೇಲೆ ಭಾರೀ ರಿಯಾಯಿತಿ! ಬೇಗ ಶೋ ರೂಮ್ ಗೆ ಹೋಗಿ

ನೀವು ಎಲೆಕ್ಟ್ರಿಕ್ ಕಾರು ಖರೀದಿಸಲು ಯೋಚಿಸುತ್ತಿದ್ದರೆ, ಇದೀಗ ಸರಿಯಾದ ಸಮಯ. ಟಾಟಾ ಮೋಟಾರ್ಸ್ ರಿಯಾಯಿತಿ ಕೊಡುಗೆಗಳನ್ನು ನೋಡೋಣ. ಮಾರುತಿ ಸುಜುಕಿ ಕಾರುಗಳಿಗೆ ಹೋಲಿಸಿದರೆ ಟಾಟಾ ಮೋಟಾರ್ಸ್ ಕಾರುಗಳು ಪ್ರಯಾಣಿಕರ ಸುರಕ್ಷತೆಯ ವಿಷಯದಲ್ಲಿ ಮುಂದಿವೆ. ಆದ್ದರಿಂದ, ಜನರು ಈ ಕಂಪನಿಯ ಕೊಡುಗೆಗಳನ್ನು ಆಸಕ್ತಿಯಿಂದ ನೋಡುತ್ತಿದ್ದಾರೆ. ಇತ್ತೀಚೆಗೆ ಈ ಕಂಪನಿಯು ಎಲೆಕ್ಟ್ರಿಕ್ ವಾಹನಗಳ ಮೇಲೆ ಕೆಲವು ರಿಯಾಯಿತಿ ಕೊಡುಗೆಗಳನ್ನು ಘೋಷಿಸಿದೆ. 2023 ರ ಮಾದರಿಗಳ ಜೊತೆಗೆ, ನೆಕ್ಸಾನ್ ಮತ್ತು ಟಿಯಾಗೊದ 2024 EV ಮಾದರಿಗಳಲ್ಲಿಯೂ ಸಹ ಕೊಡುಗೆಗಳಿವೆ. ಟಾಟಾ ನೆಕ್ಸಾನ್

ಟಾಟಾ ಮೋಟಾರ್ಸ್ ಎಲೆಕ್ಟ್ರಿಕ್ ಕಾರುಗಳ ಮೇಲೆ ಭಾರೀ ರಿಯಾಯಿತಿ! ಬೇಗ ಶೋ ರೂಮ್ ಗೆ ಹೋಗಿ Read More »

ಕರ್ನಾಟಕ ನಗರ ನೀರು ಸರಬರಾಜು & ಒಳಚರಂಡಿ ಮಂಡಳಿಯಲ್ಲಿ ಉದ್ಯೋಗವಕಾಶ! ಹೀಗೆ ಅರ್ಜಿ ಹಾಕಿ

ಸಮಗ್ರ ಉದ್ಯೋಗ: Karnataka Urban Water Supply and Drainage Board ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 64 ಅಸಿಸ್ಟೆಂಟ್ ಎಂಜಿನಿಯರ್, ಫಸ್ಟ್ ಡಿವಿಶನ್ ಅಕೌಂಟ್ಸ್​ ಅಸಿಸ್ಟೆಂಟ್​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಹುದ್ದೆಯ ಮಾಹಿತಿ:ಅಸಿಸ್ಟೆಂಟ್ ಎಂಜಿನಿಯರ್(ಸಿವಿಲ್)- 50ಫಸ್ಟ್ ಡಿವಿಶನ್ ಅಕೌಂಟ್ಸ್​ ಅಸಿಸ್ಟೆಂಟ್ (ಗ್ರೂಪ್-ಸಿ)- 14 ವಿದ್ಯಾರ್ಹತೆ:ಅಸಿಸ್ಟೆಂಟ್ ಎಂಜಿನಿಯರ್(ಸಿವಿಲ್)- ಸಿವಿಲ್​​ನಲ್ಲಿ ಬಿಇ/ಬಿ.ಟೆಕ್ಫಸ್ಟ್ ಡಿವಿಶನ್ ಅಕೌಂಟ್ಸ್​ ಅಸಿಸ್ಟೆಂಟ್ (ಗ್ರೂಪ್-ಸಿ)- ಬಿ.ಕಾಂ ವಯೋಮಿತಿ:ಕರ್ನಾಟಕ ನಗರ ನೀರು ಸರಬರಾಜು &

ಕರ್ನಾಟಕ ನಗರ ನೀರು ಸರಬರಾಜು & ಒಳಚರಂಡಿ ಮಂಡಳಿಯಲ್ಲಿ ಉದ್ಯೋಗವಕಾಶ! ಹೀಗೆ ಅರ್ಜಿ ಹಾಕಿ Read More »

ಶೋಭಾ ಕರಂದ್ಲಾಜೆಗೆ ಟಿಕೆಟ್ ಕೊಡದಂತೆ ಬಿಜೆಪಿ ಕಾರ್ಯಕರ್ತರ ಆಕ್ರೋಶ

ಸಮಗ್ರ ನ್ಯೂಸ್ : ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ವಿಚಾರವಾಗಿ ಇಂದು ಕಾರ್ಯಕರ್ತರು ಅಸಮಾಧಾನ ವ್ಯಕ್ತಪಡಿಸಿದ್ದು, ಹಾಲಿ ಸಂಸದೆ ಮತ್ತು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಗೆ ಈ ಬಾರಿ ಟಿಕೆಟ್ ಕೊಡದಂತೆ ಚಿಕ್ಕಮಗಳೂರು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಯಡಿಯೂರಪ್ಪ ಅವರು ಟಿಕೆಟ್ ಫೈನಲ್ ಆಗುವ ಮೊದಲೇ ಶೋಭಾ ಕರಂದ್ಲಾಜೆಗೆ ಟಿಕೆಟ್ ಎಂದು ಹೇಳಿದ್ದು, ಯಡಿಯೂರಪ್ಪ ಅವರು ಯಾವ ಆಧಾರದ ಮೇಲೆ ಹೇಳಿದ್ದಾರೆ ಎಂದು ಕಾರ್ಯಕರ್ತರು ಪ್ರಶ್ನೆ ಮಾಡಿದ್ದಾರೆ. ಉಡುಪಿ ಭಾಗದವರಿಗೇ

ಶೋಭಾ ಕರಂದ್ಲಾಜೆಗೆ ಟಿಕೆಟ್ ಕೊಡದಂತೆ ಬಿಜೆಪಿ ಕಾರ್ಯಕರ್ತರ ಆಕ್ರೋಶ Read More »

ಜರ್ಮನಿಯಿಂದ ಪಾರ್ಸೆಲ್ ಕಳುಹಿಸಿರುವುದಾಗಿ ನಂಬಿಸಿ ಮಹಿಳೆಗೆ 54 ಲಕ್ಷ ರೂ. ವಂಚನೆ

ಸಮಗ್ರ ನ್ಯೂಸ್ : ಜರ್ಮನಿಯಿಂದ ಪಾರ್ಸೆಲ್ ಕಳುಹಿಸಿರುವುದಾಗಿ ನಂಬಿಸಿ ಮಹಿಳೆಯೊಬ್ಬರಿಗೆ ಅರ್ಧ ಕೋಟಿಗೂ ಹೆಚ್ಚು ವಂಚಿಸಿರುವ ಪ್ರಕರಣ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಮಿಹಿಯಾಲ್ ನಿಲ್ಜೆನ್ ಎಂಬಾತ ತಾನು ಜರ್ಮನಿಯಲ್ಲಿ ಮಿಲಿಟರಿ ಅಧಿಕಾರಿ ಎಂಬುದಾಗಿ ನಂಬಿಸಿ ಫೆ.10ರಂದು ಫೇಸ್‍ಬುಕ್‍ನಲ್ಲಿ ಪೇತ್ರಿಯ ಲವೀನಾ ಸ್ಟೆಫನಿ ಕ್ರಾಸ್ಟೊ(42) ಎಂಬವರನ್ನು ಪರಿಚಯ ಮಾಡಿಕೊಂಡಿದ್ದನು. ನಂತರ ವಾಟ್ಸಪ್ ಮೂಲಕ ಇವರು ಚಾಟಿಂಗ್ ನಡೆಸಿ ಸ್ನೇಹಿತರಾಗಿದ್ದರು. ಆತ ಲವೀನಾಗೆ ಗಿಫ್ಟ್ ಕಳುಹಿಸುವುದಾಗಿ ನಂಬಿಸಿದ್ದು ಫೆ.15ರಂದು ಲವೀನಾಗೆ ದೆಹಲಿಯ ಪಾರ್ಸೆಲ್ ಕಚೇರಿ ಎಂಬುದಾಗಿ

ಜರ್ಮನಿಯಿಂದ ಪಾರ್ಸೆಲ್ ಕಳುಹಿಸಿರುವುದಾಗಿ ನಂಬಿಸಿ ಮಹಿಳೆಗೆ 54 ಲಕ್ಷ ರೂ. ವಂಚನೆ Read More »

ಉಡುಪಿ : ಶ್ರಾದ್ದ ಪೂಜೆಯ ಕೆಲಸ ತನಗೆ ನೀಡಿಲ್ಲ ಎಂದು ಮನೆಗೆ ನುಗ್ಗಿ ಗಲಾಟೆ ಮಾಡಿದ ಅರ್ಚಕ

ಸಮಗ್ರ ನ್ಯೂಸ್: ಶ್ರಾದ್ದ ಕಾರ್ಯದ ಪೂಜೆ ತನಗೆ ನೀಡಿಲ್ಲ ಎಂದು ಸಿಟ್ಟುಗೊಂಡ ಅರ್ಚಕರೊಬ್ಬರು ಮೃತರ ಮನೆಗೆ ತೆರಳಿ ಗಲಾಟೆ ಮಾಡಿದ ಘಟನೆಯೊಂದು ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಹೊಸೂರು ಗ್ರಾಮದಲ್ಲಿ ನಡೆದಿದೆ. ರಾಘವೇಂದ್ರ ಎಂಬುವವರ ಮನೆಯಲ್ಲಿ ಕೆಲವು ದಿನಗಳ ಹಿಂದೆ ತಾಯಿ ಮೃತ ಪಟ್ಟಿದ್ದರು. ಮಾರ್ಚ್ 6 ರಂದು ರಾಘವೇಂದ್ರ ಅವರ ಮನೆಯಲ್ಲಿ ಮೃತರ ಶ್ರಾದ್ಧಕಾರ್ಯ ನಡೆದಿತ್ತು. ಈ ಕಾರ್ಯಕ್ರಮ ನಡೆದ ಬಳಿಕ ರಾಘವೇಂದ್ರ ಅವರ ಮನೆಗೆ ಅತಿಕ್ರಮವಾಗಿ ಪ್ರವೇಶ ಮಾಡಿದ್ದ ಅರ್ಚಕ ರಾಮಕೃಷ್ಣ ಪೂಜೆಯನ್ನು ಬೇರೆಯವರಿಗೆ

ಉಡುಪಿ : ಶ್ರಾದ್ದ ಪೂಜೆಯ ಕೆಲಸ ತನಗೆ ನೀಡಿಲ್ಲ ಎಂದು ಮನೆಗೆ ನುಗ್ಗಿ ಗಲಾಟೆ ಮಾಡಿದ ಅರ್ಚಕ Read More »

ಮಂಗಳೂರು : ತೆಂಗಿನಕಾಯಿ ತೆಗೆಯಲು ನದಿ ನೀರಿಗೆ ಇಳಿದು ಯುವಕ ಮೃತ್ಯು

ಸಮಗ್ರ ನ್ಯೂಸ್: ತೆಂಗಿನಕಾಯಿ ತೆಗೆಯಲು ನದಿ ನೀರಿಗಿಳಿದ ಯುವಕನೋರ್ವ ಮುಳುಗಿ ಸಾವನ್ನಪ್ಪಿದ ಘಟನೆ ಕಟೀಲು ಎಂಬಲ್ಲಿ ನಡೆದಿದೆ. ಮೃತ ಯುವಕನನ್ನು ಕಟೀಲು ಮೂಲದ ಅಶೋಕ್ (35) ಎಂದು ಗುರುತಿಸಲಾಗಿದೆ. ಅಶೋಕ್ ತೆಂಗಿನಕಾಯಿ ತೆಗೆಯಲು ನದಿ ನೀರಿಗೆ ಇಳಿದಿದ್ದು, ಈ ಸಂದರ್ಭ ಆಯತಪ್ಪಿ ನೀರಿಗೆ ಬಿದ್ದು ಮುಳುಗಿದ್ದಾರೆ. ಜೊತೆಯಲ್ಲಿದ್ದ ಇನ್ನೊಬ್ಬ ಯುವಕ ನೀಡಿದ ಮಾಹಿತಿಯಂತೆ ಸ್ಥಳಕ್ಕಾಗಮಿಸಿದ ಗೂಡಿನಬಳಿ ನಿವಾಸಿ, ಇಲ್ಲಿನ ಈಜುಪಟು ಜೀವರಕ್ಷಕ ತಂಡದವರು ಮೃತದೇಹವನ್ನು ಮೇಲಕ್ಕೆತ್ತುವಲ್ಲಿ ಯಶಸ್ವಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ಬಜ್ಪೆ ನಗರ ಠಾಣಾ ಪೊಲೀಸರು ಭೇಟಿ

ಮಂಗಳೂರು : ತೆಂಗಿನಕಾಯಿ ತೆಗೆಯಲು ನದಿ ನೀರಿಗೆ ಇಳಿದು ಯುವಕ ಮೃತ್ಯು Read More »

ಬೆಳ್ತಂಗಡಿ: ಪೊಲೀಸರ ಮೇಲೆ ಹಲ್ಲೆ- ಪ್ರಕರಣ ದಾಖಲು

ಸಮಗ್ರ ನ್ಯೂಸ್ : ಪೊಲೀಸರ ಮೇಲೆ ಹತ್ತಕ್ಕೂ ಹೆಚ್ಚು ಮಂದಿಯ ತಂಡವೊಂದು ಹಲ್ಲೆ ನಡೆಸಿದ ಘಟನೆ ತೆಂಕ ಕಾರಂದೂರು ಗ್ರಾಮದ ಪೆರಾಲ್ಡಕಟ್ಟೆ ಸಮೀಪ ಸಂಭವಿಸಿದ್ದು ಘಟನೆಯ ಬಗ್ಗೆ ಮೂವರ ವಿರುದ್ಧ ಹಾಗೂ ಇತರ ಅಪರಿಚಿತರ ವಿರುದ್ಧ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂಬ ಮಾಹಿತಿ ತಿಳಿದು ಬಂದಿದೆ. ಮಹೇಶ್, ಸುರೇಶ್, ಅರುಣ್ ಹಾಗೂ ಇತರ ಹತ್ತಕ್ಕೂ ಹೆಚ್ಚು ಮಂದಿ ಪೊಲೀಸರ ಮೇಲೆ ಹಲ್ಲೆ ನಡೆಸಿರುವುದಾಗಿ ಆರೋಪಿಸಲಾಗಿದೆ. ವೇಣೂರು ಪೊಲೀಸ್ ಠಾಣೆಯ ಎ.ಎಸ್.ಐ ರಾಮಯ್ಯ ಹೆಗ್ಡೆ ಅವರು ಯುವಕರ

ಬೆಳ್ತಂಗಡಿ: ಪೊಲೀಸರ ಮೇಲೆ ಹಲ್ಲೆ- ಪ್ರಕರಣ ದಾಖಲು Read More »

ಬೆಳ್ತಂಗಡಿ: ಆಶಾ ಕಾರ್ಯಕರ್ತೆ ಮೇಲೆ ಸುಳ್ಳು ಆರೋಪ, ಬೆದರಿಕೆ

ಸಮಗ್ರ ನ್ಯೂಸ್ : ಸುಳ್ಳು ಆರೋಪಗಳನ್ನು ಹೊರಿಸಿ, ಕರ್ತವ್ಯದ ಸಮಯ ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಒಡ್ಡಿದ ಕುರಿತು ಆಶಾ ಕಾರ್ಯಕರ್ತೆ ಒಬ್ಬರು ವೇಣೂರು ಠಾಣೆಯಲ್ಲಿ ದೂರು ದಾಖಲಿಸಿರುವ ಘಟನೆ ನಡೆದಿದೆ. ಶಿರ್ಲಾಲು ಗ್ರಾಮದ ಬಗ್ಯೋಟ್ಟು ಮನೆಯ ಮಾಧವ ಕುಲಾಲ್ ಶಿರ್ಲಾಲು ಪ್ರಾಥಮಿಕ ಆರೋಗ್ಯ ಕೇಂದ್ರದ ಆಶಾ ಕಾರ್ಯಕರ್ತೆ ಜಯ ಲಕ್ಷ್ಮೀ ಅವರ ಮೇಲೆ ಸುಳ್ಳು ಆರೋಪ ಹೊರಿಸಿ, ಮೇಲಾಧಿಕಾರಿಗಳಿಗೆ ದೂರು ನೀಡುತ್ತಿದ್ದು, ಕೆಲಸಕ್ಕೆ ತೆರಳುವ ಸಮಯ ಆತನ ಆಟೋರಿಕ್ಷಾದಲ್ಲಿ ಹಿಂಬಾಲಿಸುತ್ತ ತೊಂದರೆ ನೀಡುತ್ತಿದ್ದ ಎಂದು ದೂರಲಾಗಿದೆ.

ಬೆಳ್ತಂಗಡಿ: ಆಶಾ ಕಾರ್ಯಕರ್ತೆ ಮೇಲೆ ಸುಳ್ಳು ಆರೋಪ, ಬೆದರಿಕೆ Read More »

ಮದರಸಾಗಳೇ ಭಯೋತ್ಪಾದಕರ ಅಡಗು ತಾಣ: ಶರಣ್ ಪಂಪ್‍ವೆಲ್

ಸಮಗ್ರ ನ್ಯೂಸ್ : ರಾಜ್ಯದಲ್ಲಿ ಮುಸ್ಲಿಂ ಮಕ್ಕಳಿಗೆ ಧರ್ಮ ಶಿಕ್ಷಣ ಪ್ರಸಾರ ಮಾಡುವ ಮದರಸಾಗಳೇ ಭಯೋತ್ಪಾದಕರ ಅಡಗು ತಾಣಗಳಾಗಿವೆ ಎಂದು ಹಿಂದೂ ಮುಖಂಡ ಶರಣ್ ಪಂಪ್’ವೆಲ್ ಆರೋಪಿಸಿದ್ದಾರೆ. ಮದರಾಸಗಳಲ್ಲಿ ಭಯೋತ್ಪಾದಕರಿಗೆ ಮೌಲ್ವಿಗಳು ಆಸರೆ ನೀಡುತ್ತಿದ್ದಾರೆ, ಈ ಹಿನ್ನೆಲೆಯಲ್ಲಿ ರಾಷ್ಟ್ರೀಯ ತನಿಖಾ ದಳ ಮಸೀದಿ ಹಾಗೂ ಮದರಸಾಗಳಲ್ಲಿ ಹುಡುಕಿದರೆ ರಾಮೇಶ್ವರಂ ಕೆಫೆ ಬಾಂಬರ್ ಸಿಗುತ್ತಾನೆ ಎಂದು ಹಿಂದೂ ಮುಖಂಡ ಶರಣ್ ಪಂಪ್ ವೆಲ್ ಹೇಳಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನ ಕುಂದಲಹಳ್ಳಿಯಲ್ಲಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಬ್ಲಾಸ್ಟ್

ಮದರಸಾಗಳೇ ಭಯೋತ್ಪಾದಕರ ಅಡಗು ತಾಣ: ಶರಣ್ ಪಂಪ್‍ವೆಲ್ Read More »