March 2024

ಬಸವೇಶ್ವರನಗರದ ಗ್ಯಾರೇಜ್‌ನಲ್ಲಿ ಅಗ್ನಿ ಅವಘಡ: ನಾಲ್ವರಿಗೆ ಗಾಯ

ಸಮಗ್ರ ನ್ಯೂಸ್:ಬೆಂಗಳೂರಿನ ಬಸವೇಶ್ವರನಗರದ ಗ್ಯಾರೇಜ್‌ನಲ್ಲಿ ಇಂದು ಸಂಜೆ ಅಗ್ನಿ ಅವಘಡ ಸಂಭವಿಸಿದು, ಗ್ಯಾರೇಜ್ ಮಾಲೀಕ ಜಾರ್ಜ್ ಹಾಗೂ ಕೆಲಸಗಾರ ಶಿವು ಸೇರಿದಂತೆ ನಾಲ್ವರಿಗೆ ಗಾಯವಾಗಿದೆ. ಸ್ಫೋಟದಿಂದ 2 ಅಂತಸ್ತಿನ ಮನೆಗೂ ಹಾನಿಯಾಗಿದ್ದು, ಸ್ವಿಫ್ಟ್ ಡಿಸೈರ್ ಕಾರು, ದ್ವಿಚಕ್ರ ವಾಹನ ಸಂಪೂರ್ಣ ಹಾನಿಯಾಗಿದೆ. ಬೆಂಕಿ ಆವರಿಸಿದರಿಂದ ರಸ್ತೆಯಲ್ಲಿ ಹೋಗ್ತಿದ್ದ ಇಬ್ಬರಿಗೂ ಗಾಯವಾಗಿದೆ. ಘಟನೆ ಹಿನ್ನಲೆ ಗ್ಯಾರೇಜ್ ಪಕ್ಕದ ಮನೆ ಹಾಗೂ ನಿರ್ಮಾಣ ಹಂತದ ಕಟ್ಟಡಕ್ಕೂ ಹಾನಿಯಾಗಿದ್ದು, ಸ್ಥಳಕ್ಕೆ ಪಶ್ಚಿಮ ವಿಭಾಗದ ಡಿಸಿಪಿ ಎಸ್.ಗಿರೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. […]

ಬಸವೇಶ್ವರನಗರದ ಗ್ಯಾರೇಜ್‌ನಲ್ಲಿ ಅಗ್ನಿ ಅವಘಡ: ನಾಲ್ವರಿಗೆ ಗಾಯ Read More »

ಲೋಕಸಭಾ ಚುನಾವಣೆ ಹೊತ್ತಲ್ಲೆ ದಿಢೀರ್ ರಾಜೀನಾಮೆ ಕೊಟ್ಟ ಕೇಂದ್ರ ಚುನಾವಣಾ ಆಯುಕ್ತ ಅರುಣ್ ಗೋಯಲ್

ಸಮಗ್ರ ನ್ಯೂಸ್: ಕೇಂದ್ರ ಚುನಾವಣಾ ಆಯುಕ್ತ ಅರುಣ್ ಗೋಯಲ್ ಶನಿವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇನ್ನು ಕೆಲವೇ ವಾರಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿರುವ ಇದೇ ಸಂದರ್ಭದಲ್ಲಿ ಚುನಾವಣಾ ಆಯುಕ್ತರು ರಾಜೀನಾಮೆ ನೀಡಿದ್ದಾರೆ ಅರುಣ್ ಗೋಯಲ್ ಅಧಿಕಾರಾವಧಿ 2027ರವರೆಗೆ ಇತ್ತು. ಸದ್ಯ ಗೋಯಲ್ ಅವರ ರಾಜೀನಾಮೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಗೀಕರಿಸಿದ್ದಾರೆ. ಹೀಗಾಗಿ ಗೋಯಲ್​ ಅವರ ರಾಜೀನಾಮೆಯಿಂದಾಗಿ ಇದೀಗ ಚುನಾವಣಾ ಸಮಿತಿಯಲ್ಲಿ ಎರಡು ಚುನಾವಣಾ ಆಯುಕ್ತ ಸ್ಥಾನಗಳು ಖಾಲಿಯಾಗಿವೆ. ಇದೀಗ ಚುನಾವಣಾ ವ್ಯವಸ್ಥೆಯ ಸಂಪೂರ್ಣ ಜವಾಬ್ದಾರಿ

ಲೋಕಸಭಾ ಚುನಾವಣೆ ಹೊತ್ತಲ್ಲೆ ದಿಢೀರ್ ರಾಜೀನಾಮೆ ಕೊಟ್ಟ ಕೇಂದ್ರ ಚುನಾವಣಾ ಆಯುಕ್ತ ಅರುಣ್ ಗೋಯಲ್ Read More »

ಬೆಳ್ತಂಗಡಿ : ಉಜಿರೆ ಖಾಸಗಿ ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ

ಸಮಗ್ರ ನ್ಯೂಸ್ : ಉಜಿರೆ ಖಾಸಗಿ ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ಧರ್ಮಸ್ಥಳದ ಕಜೋಡಿ ಮೂಲಿಕ್ಕಾರ್‌ನಲ್ಲಿ ನಡೆದಿದೆ. ಧರ್ಮಸ್ಥಳ ಗ್ರಾಮದ ಮೂಲಿಕ್ಕಾರ್ ನಿವಾಸಿ ರಾಮಣ್ಣ ಹಾಗೂ ಗೀತಾ ದಂಪತಿಗಳ ಪುತ್ರ ವಿಘ್ನೇಶ್ (19 ) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಮನೆಯ ಕೊಟ್ಟಿಗೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ಆತ್ಮಹತ್ಯೆ ದಾಖಲಾಗಿದೆ.

ಬೆಳ್ತಂಗಡಿ : ಉಜಿರೆ ಖಾಸಗಿ ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ Read More »

ಸಿಲಿಕಾನ್ ಸಿಟಿಯಲ್ಲಿ ನೀರಿಗಾಗಿ ಹಾಹಾಕಾರ: ರಾಜ್ಯ ಸರ್ಕಾರದ ವಿರುದ್ಧ ಸೋಮವಾರ ಬಿಜೆಪಿ ಪ್ರತಿಭಟನೆ

ಸಮಗ್ರ ನ್ಯೂಸ್: ಬೆಂಗಳೂರಿನ ನಗರದಲ್ಲಿ ನೀರಿಗಾಗಿ ಹಾಹಾಕಾರ ಶುರುವಾಗಿದೆ. ಜನರಿಗೆ ಕುಡಿಯಲು ನೀರಿಗೆ ಪರದಾಡುವ ಪರಿಸ್ಥಿತಿ ಈಗ ಬಂದೊದಗಿದೆ. ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಟ್ಯಾಂಕರ್ ಮೂಲಕ ನೀರು ಹಾಕಲಾಗುತ್ತಿದೆ. ನಗರದಲ್ಲಿ ನೀರಿನ ಸಮಸ್ಯೆ ಹಿನ್ನೆಲೆ ರಾಜ್ಯ ಸರ್ಕಾರದ ವಿರುದ್ಧ ಸೋಮವಾರ ಬಿಜೆಪಿ ಪ್ರತಿಭಟನೆಗೆ ಮುಂದಾಗಿದೆ. ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ಸೋಮವಾರ ಬೆಳಗ್ಗೆ 11 ಗಂಟೆಗೆ ಧರಣಿ ಮಾಡಲಿದೆ. ಇನ್ನೂ ಈ ವಿಚಾರವಾಗಿ ಬೆಂಗಳೂರಿನಲ್ಲಿ ವಿಪಕ್ಷ ನಾಯಕ ಆರ್. ಅಶೋಕ್​ ಪ್ರತಿಕ್ರಿಯಿಸಿದ್ದು, ಕಾಂಗ್ರೆಸ್ ಮಾಡಿದ ತಪ್ಪಿನಿಂದ ಬೆಂಗಳೂರಲ್ಲಿ ನೀರಿನ ಸಮಸ್ಯೆ

ಸಿಲಿಕಾನ್ ಸಿಟಿಯಲ್ಲಿ ನೀರಿಗಾಗಿ ಹಾಹಾಕಾರ: ರಾಜ್ಯ ಸರ್ಕಾರದ ವಿರುದ್ಧ ಸೋಮವಾರ ಬಿಜೆಪಿ ಪ್ರತಿಭಟನೆ Read More »

ಕಾಣಿಯೂರು: ಬೈಕ್‌ಗಳ ನಡುವೆ ಅಪಘಾತ- ಪಾದಾಚಾರಿ ಮಹಿಳೆ ಸಾವು

ಸಮಗ್ರ ನ್ಯೂಸ್ : ಬೈಕ್‌ಗಳ ನಡುವೆ ಅಪಘಾತ ಸಂಭವಿಸಿ ಹಾಲಿನ ಡೈರಿಗೆ ಹೋಗುತ್ತಿದ್ದ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಕಾಣಿಯೂರು ಸಮೀಪದ ಬರೆಪ್ಪಾಡಿ ಎಂಬಲ್ಲಿ ನಡೆದಿದೆ. ಮೃತಪಟ್ಟ ಮಹಿಳೆ ಬರೆಪ್ಪಾಡಿ ನಿವಾಸಿ ನಾರಾಯಣ ಭಟ್ ಎಂಬವರ ಪತ್ನಿ ವೈಶಾಲಿ (45) ಎಂದು ಗುರುತಿಸಲಾಗಿದೆ. ತನ್ನ ಮನೆಯಿಂದ ಹಾಲಿನ ಡೈರಿಗೆಂದು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಬೈಕ್‌ಗಳೆರಡು ಅಪಘಾತವಾಗಿದೆ. ಒಂದು ಬೈಕ್ ರಸ್ತೆಯಂಚಿನಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಗೆ ಢಿಕ್ಕಿಯಾಗಿದೆ ಎನ್ನಲಾಗಿದೆ. ಅಪಘಾತದ ರಭಸಕ್ಕೆ ಪಾದಾಚಾರಿ ಮಹಿಳೆ ಮೃತಪಟ್ಟಿರುವುದಾಗಿ ಮಾಹಿತಿ ತಿಳಿದು

ಕಾಣಿಯೂರು: ಬೈಕ್‌ಗಳ ನಡುವೆ ಅಪಘಾತ- ಪಾದಾಚಾರಿ ಮಹಿಳೆ ಸಾವು Read More »

ಹೆಬ್ರಿ: ಮಹಿಳೆ ನೇಣು ಬಿಗಿದು ಆತ್ಮಹತ್ಯೆ

ಸಮಗ್ರ ನ್ಯೂಸ್: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ಜೀವನದಲ್ಲಿ ಜಿಗುಪ್ಸೆಗೊಂಡು ನೇಣಿಗೆ ಶರಣಾದ ಘಟನೆ ಹೆಬ್ರಿ ತಾಲೂಕಿನ ಜರುವತ್ತು ಎಂಬಲ್ಲಿ ಶುಕ್ರವಾರ ನಡೆದಿದೆ. ಹೆಬ್ರಿ ತಾಲೂಕಿನ ಜರುವತ್ತು ನಿವಾಸಿ ಶಕುಂತಳಾ ಪೂಜಾರಿ(53) ಎಂಬವರು ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಶಕುಂತಳಾ ಎಂಬವರಿಗೆ ನೆನಪಿನ ಶಕ್ತಿ ಕಡಿಮೆಯಾಗಿದ್ದು ಈ ಹಿನ್ನಲೆಯಲ್ಲಿ ಉಡುಪಿ ಬಾಳಿಗಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಪಡೆಯುತ್ತಿದ್ದರೂ ಮಾನಸಿಕ ಖಿನ್ನತೆ ಕಡಿಮೆಯಾಗದ ಹಿನ್ನಲೆಯಲ್ಲಿ ಜೀವನದಲ್ಲಿ ಜಿಗುಪ್ಸೆಗೊಂಡು ಶುಕ್ರವಾರ ಮನೆಯ ಸಮೀಪದ ಹಾಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ

ಹೆಬ್ರಿ: ಮಹಿಳೆ ನೇಣು ಬಿಗಿದು ಆತ್ಮಹತ್ಯೆ Read More »

ಬಂಟ್ವಾಳ: ಕಾರು ಢಿಕ್ಕಿ- ಗಲ್ಫ್ ಉದ್ಯೋಗಿ ಮೃತ್ಯು

ಸಮಗ್ರ ನ್ಯೂಸ್ : ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಕಾರು ಢಿಕ್ಕಿ ಹೊಡೆದು ಸಾವನ್ನಪ್ಪಿರುವ ಘಟನೆ ಮುಡಿಪು ಜಂಕ್ಷನ್‌ನಲ್ಲಿ ಶುಕ್ರವಾರ ಮಧ್ಯಾಹ್ನ ವೇಳೆ ಸಂಭವಿಸಿದೆ. ಬAಟ್ವಾಳ ಕರೋಪಾಡಿ ನಿವಾಸಿ ಸಿದ್ದಿಖ್ (48) ಮೃತಪಟ್ಟವರು. ಗಲ್ಫ್ ರಾಷ್ಟçದಲ್ಲಿ ಉದ್ಯೋಗದಲ್ಲಿದ್ದ ಅವರು ಎರಡು ತಿಂಗಳ ಹಿಂದೆಯಷ್ಟೇ ಊರಿಗೆ ಬಂದಿದ್ದರು. ದೇರಳಕಟ್ಟೆ ಫ್ಲಾಟ್ ನಲ್ಲಿ ನೆಲೆಸಿರುವ ಸಿದ್ದೀಖ್ ಶುಕ್ರವಾರದ ಜುಮಾ ನಮಾಝ್ ಅನ್ನು ಕರೋಪಾಡಿ ಮಸೀದಿಯಲ್ಲಿ ನಡೆಸಿದ್ದರು. ಅಲ್ಲಿಂದ ವಾಪಸ್ಸು ದೇರಳಕಟ್ಟೆಗೆ ಬರುವ ದಾರಿ ಮಧ್ಯೆ ಮುಡಿಪು ಜಂಕ್ಷನ್‌ನಲ್ಲಿ ಇಳಿದು, ಎಟಿಎಂ ಹಣ

ಬಂಟ್ವಾಳ: ಕಾರು ಢಿಕ್ಕಿ- ಗಲ್ಫ್ ಉದ್ಯೋಗಿ ಮೃತ್ಯು Read More »

ಬ್ಯಾಂಕ್ ನಲ್ಲಿ ಕೆಲಸ ಮಾಡುವವರಿಗೆ ಗುಡ್ ನ್ಯೂಸ್, ಹೈಕ್ ಜೊತೆಗೆ ಡಬಲ್ ವೀಕ್ ಆಫ್

ಭಾರತೀಯ ಬ್ಯಾಂಕ್‌ಗಳ ಸಂಘ ಮತ್ತು ಬ್ಯಾಂಕ್ ಉದ್ಯೋಗಿಗಳ ಒಕ್ಕೂಟಗಳು ಶುಕ್ರವಾರದಂದು ಶೇ.17 ರಷ್ಟು ವಾರ್ಷಿಕ ವೇತನ ಹೆಚ್ಚಳಕ್ಕೆ ಒಪ್ಪಿಗೆ ನೀಡಿದ್ದು, ಇದರಿಂದ ಸಾರ್ವಜನಿಕ ವಲಯದ ಬ್ಯಾಂಕ್‌ಗಳಿಗೆ ವಾರ್ಷಿಕ ಸುಮಾರು 8,284 ಕೋಟಿ ರೂ ಹೆಚ್ಚುವರಿ ಹೊರಹೋಗುವಿಕೆಗೆ ಕಾರಣವಾಗಲಿದೆ. ನವೆಂಬರ್ 2022 ರಿಂದ ಜಾರಿಗೆ ಬರಲಿರುವ ವೇತನ ಹೆಚ್ಚಳದಿಂದ ಸುಮಾರು 8 ಲಕ್ಷ ಬ್ಯಾಂಕ್ ಉದ್ಯೋಗಿಗಳು ಪ್ರಯೋಜನ ಪಡೆಯಲಿದ್ದಾರೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸೇರಿದಂತೆ ಎಲ್ಲಾ ಬ್ಯಾಂಕ್‌ಗಳಿಗೆ ವೇತನ ಪರಿಷ್ಕರಣೆಗಾಗಿ ಒಟ್ಟು 12,449 ಕೋಟಿ ರೂ ಬಿಡುಗಡೆ

ಬ್ಯಾಂಕ್ ನಲ್ಲಿ ಕೆಲಸ ಮಾಡುವವರಿಗೆ ಗುಡ್ ನ್ಯೂಸ್, ಹೈಕ್ ಜೊತೆಗೆ ಡಬಲ್ ವೀಕ್ ಆಫ್ Read More »

ಕೊನೇ ಕ್ಷಣದ ಬದಲಾವಣೆ ನಡೆಯದಿದ್ದರೆ ನಳಿನ್ ಕುಮಾರ್ ಕಟೀಲ್‌ಗೆ ಎಂಪಿ ಟಿಕೆಟ್ ಫಿಕ್ಸ್!

ಸಮಗ್ರ ನ್ಯೂಸ್ : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ನಳಿನ್ ಕುಮಾರ್ ಕಟೀಲ್‌ಗೆ ಮತ್ತೆ ಟಿಕೆಟ್ ಸಿಗುವ ಸಾಧ್ಯತೆ ದಟ್ಟವಾಗಿದೆ. ಬಿಜೆಪಿ ರಾಷ್ಟ್ರೀಯ ನಾಯಕರ ಕೋರ್ ಕಮಿಟಿ ಸಭೆಯಲ್ಲಿ ನಳಿನ್‌ಗೆ ಮತ್ತೆ ಟಿಕೆಟ್ ಕೊಡಿಸುವ ಬಗ್ಗೆ ಪ್ರಸ್ತಾಪವಾಗಿದೆ ಎನ್ನಲಾಗಿದೆ. ಇಂದು ಸಂಜೆ ಮತ್ತೊಂದು ಸುತ್ತಿನ ಮಾತುಕತೆ ನಡೆಯಲಿದ್ದು, ಕೊನೆ ಹಂತದ ಬದಲವಾಣೆ ನಡೆಯದೇ ಇದ್ದರೆ ನಳಿನ್‌ಗೆ ಟಿಕೆಟ್ ಬಹುತೇಕ ಫಿಕ್ಸ್ ಆಗಿದೆ. ಆದರೆ ಕೊನೆ ಹಂತದಲ್ಲಿ ನಾಯಕರು ಬದಲಾವಣೆ ಬಯಸಿದರೆ ಮಾತ್ರ ಹೊಸ ಮುಖಗಳಿಗೆ ಮಣೆ ಹಾಕುವ

ಕೊನೇ ಕ್ಷಣದ ಬದಲಾವಣೆ ನಡೆಯದಿದ್ದರೆ ನಳಿನ್ ಕುಮಾರ್ ಕಟೀಲ್‌ಗೆ ಎಂಪಿ ಟಿಕೆಟ್ ಫಿಕ್ಸ್! Read More »

ಬೆಳಗಾವಿ: ನಿಪ್ಪಾಣಿಯ ರಾಮ ಮಂದಿರವನ್ನು ಸ್ಫೋಟಿಸುವುದಾಗಿ ಬೆದರಿಕೆ ಪತ್ರ

ಸಮಗ್ರ ನ್ಯೂಸ್: ಬೆಳಗಾವಿ ಜಿಲ್ಲೆಯ ನಿಪ್ಪಾಣಿಯ ಶ್ರೀರಾಮ ಮಂದಿರವನ್ನು ಸ್ಫೋಟಿಸುತ್ತೇವೆ, ಸುಧಾರಿಸಿಕೊಳ್ಳಿ ಎಂದು ಅಲ್ಲಾ ಹು ಅಕ್ಬರ್ ಹೆಸರಿನಲ್ಲಿ ದುಷ್ಕರ್ಮಿಗಳು ಬೆದರಿಕೆ ಪತ್ರ ಬರೆದಿದ್ದಾರೆ. ಕಳೆದ ತಿಂಗಳು ಫೆಬ್ರವರಿ 7 ಹಾಗೂ 28 ರಂದು ಹಿಂದಿ ಭಾಷೆಯಲ್ಲಿ ಎರಡು ಪತ್ರಗಳು ಬಂದಿದ್ದು, ಮುಂದಿನ 20, 21 ತಾರೀಖಿನ ಒಳಗಡೆ ರಾಮ‌ ಮಂದಿರವನ್ನ ದೊಡ್ಡ ಪ್ರಮಾಣದಿಂದ ಸ್ಪೋಟಿಸುತ್ತೇವೆ. ಎಂದು ಅನಾಮಧೇಯ ವ್ಯಕ್ತಿಗಳು ಪತ್ರ ಬರೆದಿದ್ದಾರೆ. ದುಷ್ಕರ್ಮಿಗಳ ಪತ್ರ ಸದ್ಯ ಸಂಚಲನ ಸೃಷ್ಟಿಸಿದು. ಆತಂಕ ಸೃಷ್ಟಿಯಾಗಿದೆ. 101 ವರ್ಷಗಳ ಇತಿಹಾಸ

ಬೆಳಗಾವಿ: ನಿಪ್ಪಾಣಿಯ ರಾಮ ಮಂದಿರವನ್ನು ಸ್ಫೋಟಿಸುವುದಾಗಿ ಬೆದರಿಕೆ ಪತ್ರ Read More »