March 2024

ಬಜಪೆ: ಶಾರದೋತ್ಸವ ನಡೆಸುತ್ತಿದ್ದ ಮೈದಾನದಲ್ಲಿ ಇಂದಿರಾ ಕ್ಯಾಂಟೀನ್ ತೆರೆಯಲು ಸಿದ್ಧತೆlಸಾರ್ವಜನಿಕರಿಂದ ವಿರೋಧ

ಸಮಗ್ರ ನ್ಯೂಸ್ : ಬಜಪೆ ಪೇಟೆಯಲ್ಲಿ ಐತಿಹಾಸಿಕ ಶಾರದೋತ್ಸವ ಸಹಿತ ಹಲವು ಕಾರ್ಯಕ್ರಮಗಳು ನಡೆಯುತ್ತಿದ್ದ ಸಾರ್ವಜನಿಕ ಮೈದಾನದಲ್ಲಿ ಇಂದಿರಾ ಕ್ಯಾಂಟೀನ್ ತೆರೆಯಲು ಸಿದ್ಧತೆ ನಡೆಸಲಾಗುತ್ತಿದೆ ಎಂಬ ಆರೋಪ ಸಾರ್ವಜನಿಕರಿಂದ ಕೇಳಿಬಂದಿದ್ದು ಇದಕ್ಕೆ ವಿರೋಧ ವ್ಯಕ್ತವಾಗಿದೆ. ಸಾರ್ವಜನಿಕರು ಇದನ್ನು ವಿರೋಧಿಸಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿ ವಿರೋಧ ವ್ಯಕ್ತಪಡಿಸುತ್ತಿದ್ದು, ಇಂದಿರಾ ಕ್ಯಾಂಟೀನ್ ಅನ್ನು ಬೇರೆ ಸ್ಥಳದಲ್ಲಿ ನಿರ್ಮಿಸುವಂತೆ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಇಂದಿರಾ ಕ್ಯಾಂಟಿನ್‍ಗೆ ತಾಲ್ಲೂಕು ಪಂಚಾಯಿತಿಯ ಜಾಗ ತೋರಿಸಿದರು ಆ ಜಾಗ ಬೇಡ ಕೇಂದ್ರ ಮೈದಾನದ ಬದಿಯಲ್ಲೇ […]

ಬಜಪೆ: ಶಾರದೋತ್ಸವ ನಡೆಸುತ್ತಿದ್ದ ಮೈದಾನದಲ್ಲಿ ಇಂದಿರಾ ಕ್ಯಾಂಟೀನ್ ತೆರೆಯಲು ಸಿದ್ಧತೆlಸಾರ್ವಜನಿಕರಿಂದ ವಿರೋಧ Read More »

ಕಾಜಿರಂಗ ಉದ್ಯಾನದಲ್ಲಿ ಪ್ರಧಾನಿ: ಸಫಾರಿ ಮತ್ತು ಜೀಪ್ ಸವಾರಿ ಮಾಡಿದ ನಮೋ

ಸಮಗ್ರ ನ್ಯೂಸ್: ಅಸ್ಸಾಂನ ಕಾಜಿರಂಗ ರಾಷ್ಟ್ರೀಯ ಉದ್ಯಾನ ಮತ್ತು ಹುಲಿ ಸಂರಕ್ಷಿತ ಪ್ರದೇಶದಲ್ಲಿ ಇಂದು ಬೆಳಗ್ಗೆ ಪ್ರಧಾನಿ ನರೇಂದ್ರ ಮೋದಿಯವರು ಸಫಾರಿ ಮತ್ತು ಜೀಪ್ ಸವಾರಿ ಮಾಡಿದ್ದಾರೆ. ಇದು ಯುನೆಸ್ಕೋ ವಿಶ್ವ ಪಾರಂಪರಿಕ ತಾಣವಾಗಿದ್ದು, ಸೆಂಟ್ರಲ್ ಖೇರಾ ವಲಯದ ಮಿಹಿಮುಖ್ ವಲಯದಲ್ಲಿ ಮೊದಲು ಆನೆ ಸಫಾರಿ ಮಾಡಿ ಇದೇ ವಲಯದಲ್ಲಿ ಪ್ರಧಾನಿ ಜೀಪ್ ಸವಾರಿಯನ್ನು ಮಾಡಿದ್ದರು. ಎರಡು ದಿನದ ಅಸ್ಸಾಂ ಪ್ರವಾಸದಲ್ಲಿ ಪ್ರಧಾನಿ ಮೋದಿ ಇದ್ದು, ಉದ್ಯಾನದಲ್ಲಿ ಪ್ರಧಾನಿಗೆ ಉದ್ಯಾನದ ನಿರ್ದೇಶಕಿ, ಅರಣ್ಯ ಅಧಿಕಾರಿಗಳು ಸಾತ್ ನೀಡಿದ್ದರು.

ಕಾಜಿರಂಗ ಉದ್ಯಾನದಲ್ಲಿ ಪ್ರಧಾನಿ: ಸಫಾರಿ ಮತ್ತು ಜೀಪ್ ಸವಾರಿ ಮಾಡಿದ ನಮೋ Read More »

ಕರ್ನಾಟಕದ ಮೀನುಗಾರಿಕಾ ಬೋಟ್ ವಶ|25 ಲಕ್ಷ ರೂ. ದಂಡ

ಸಮಗ್ರ ನ್ಯೂಸ್ : ಕಾಸರಗೋಡು ಜಿಲ್ಲೆಯ ಸಮುದ್ರ ಕಿನಾರೆಯಲ್ಲಿ ರಾತ್ರಿ ವೇಳೆ ಅನಧಿಕೃತವಾಗಿ ಮೀನುಗಾರಿಕೆ ನಡೆಸುತ್ತಿದ್ದ ಕರ್ನಾಟಕದ ಯಾಂತ್ರೀಕೃತ ಬೋಟನ್ನು ಕುಂಬಳೆ-ಬೇಕಲ- ಅಳಿತ್ತಲ ಕರಾವಳಿ ಪೊಲೀಸ್ ಠಾಣೆಗಳ ಪೊಲೀಸರು ಮತ್ತು ಮರೈನ್ ಎನ್‌ಫೋರ್ಸ್ಮೆಂಟ್ ವಿಭಾಗ ಸಂಯುಕ್ತವಾಗಿ ನಡೆಸಿದ ಕಾರ್ಯಾಚರಣೆಯಲ್ಲಿ ವಶಪಡಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಸ್ತುತ ಬೋಟ್‌ಗೆ 25 ಲಕ್ಷ ರೂ. ದಂಡ ವಿಧಿಸಲಾಗಿದೆ ಎಂಬ ಮಾಹಿತಿ ತಿಳಿದು ಬಂದಿದೆ.

ಕರ್ನಾಟಕದ ಮೀನುಗಾರಿಕಾ ಬೋಟ್ ವಶ|25 ಲಕ್ಷ ರೂ. ದಂಡ Read More »

ಕಟಪಾಡಿ: ಚಾಲಕನ ನಿರ್ಲಕ್ಷ್ಯದಿಂದ ಮೋರಿಗೆ ಬಿದ್ದ ಕಾರು

ಸಮಗ್ರ ನ್ಯೂಸ್ : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಮೋರಿಗೆ ಬಿದ್ದು, ಕಾರು ಚಾಲಕ ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದು, ಕಾರು ಜಖಂಗೊಂಡಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕಲ್ಲಾಪು ಬಳಿ ಮಾ.9ರ ಶನಿವಾರ ನಡೆದಿದೆ. ಉಡುಪಿಯಿಂದ ಮಂಗಳೂರಿನತ್ತ ತೆರಳುತ್ತಿದ್ದ ಗುಜರಾತ್ ನೋಂದಣಿಯ ಕಾರು ನಿಯಂತ್ರಣ ಕಳೆದುಕೊಂಡು ಡಿವೈಡರ್ ಹಾರಿ ಹೆದ್ದಾರಿಯ ಪಶ್ಚಿಮ ಪಾಶ್ರ್ವದ ಹೆದ್ದಾರಿಗೆ ಧುಮುಕಿದ್ದು ಬಳಿಕ ಹೆದ್ದಾರಿ ಬದಿಯ ಮೋರಿಗೆ ಬಿದ್ದಿದೆ. ಈ ಸಂದರ್ಭದಲ್ಲಿ ಯಾವುದೇ ವಾಹನ ಅಥವಾ ಜನ ಸಂಚಾರವಿಲ್ಲದ ಕಾರಣ

ಕಟಪಾಡಿ: ಚಾಲಕನ ನಿರ್ಲಕ್ಷ್ಯದಿಂದ ಮೋರಿಗೆ ಬಿದ್ದ ಕಾರು Read More »

ಕಾಂಗ್ರೆಸ್ ಹಣಕಾಸಿನ ವಿಚಾರದಲ್ಲಿ ವಿಫಲ: ಪ್ರತಾಪ್ ಸಿಂಹ ನಾಯಕ್

ಸಮಗ್ರ ನ್ಯೂಸ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ರಾಜ್ಯ ಬಜೆಟ್‌ನಲ್ಲಿ 5 ಖಾತ್ರಿ ಯೋಜನೆಗಳ ಅನುಷ್ಠಾನಕ್ಕೆ ಆದಾಯ ತರುವ ಕ್ರಮಗಳನ್ನು ಹೊರತುಪಡಿಸಿದರೆ ರಾಜ್ಯದ ಅಭಿವೃದ್ಧಿಗೆ ಸಂಬಂಧಿಸಿದಂತೆ ಯಾವುದೇ ಯೋಜನೆಗಳನ್ನು ನೀಡುವುದಿಲ್ಲ ಎಂದು ಎಂಎಲ್‌ಸಿ ಪ್ರತಾಪಸಿಂಹ ನಾಯಕ್ ಹೇಳಿದರು. ಅವರು ಮಾರ್ಚ್ 8 ರಂದು ಶುಕ್ರವಾರ ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ನಾಯಕ್, ಕಾಂಗ್ರೆಸ್ ಹಣಕಾಸಿನ ವಿಚಾರದಲ್ಲಿ ವಿಫಲವಾಗಿದೆ ಮತ್ತು ಅಧಿಕಾರಕ್ಕೆ ಬರಲು ಐದು ಭರವಸೆಗಳನ್ನು ಘೋಷಿಸಿದೆ. ಅಭಿವೃದ್ಧಿ ಯೋಜನೆಗಳು ಮತ್ತು ಕಾರ್ಯಕ್ರಮಗಳಿಗೆ ಹಣ ಮಂಜೂರು ಮಾಡಿಲ್ಲ ಎಂದರು.

ಕಾಂಗ್ರೆಸ್ ಹಣಕಾಸಿನ ವಿಚಾರದಲ್ಲಿ ವಿಫಲ: ಪ್ರತಾಪ್ ಸಿಂಹ ನಾಯಕ್ Read More »

ಭಯೋತ್ಪಾದನೆ ಗೀಚುಬರಹ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿ ವಿರುದ್ಧ ಎನ್‍ಐಎ ಆರೋಪ ಪಟ್ಟಿ ಸಲ್ಲಿಕೆ

ಸಮಗ್ರ ನ್ಯೂಸ್: ಮಂಗಳೂರಿನಲ್ಲಿ ಭಯೋತ್ಪಾದಕರ ಪರ ಗೀಚುಬರಹ ಬರೆದಿದ್ದಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ಐಸಿಸ್ ಸಂಚು ಪ್ರಕರಣದ ಮತ್ತೊಬ್ಬ ಆರೋಪಿ ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‍ಐಎ) ಗುರುವಾರ ಆರೋಪಪಟ್ಟಿ ಸಲ್ಲಿಸಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ. ಕೇಂದ್ರೀಯ ಭಯೋತ್ಪಾದನಾ ವಿರೋಧಿ ತನಿಖಾ ಸಂಸ್ಥೆಯು ಇತರ ಇಬ್ಬರ ವಿರುದ್ಧ ಹೆಚ್ಚುವರಿ ಆರೋಪಗಳನ್ನು ದಾಖಲಿಸಿದೆ. ತನ್ನ ಎರಡನೇ ಪೂರಕ ಚಾರ್ಜ್‍ಶೀಟ್‍ನಲ್ಲಿ, ಎನ್‍ಐಎ ಆರೋಪಿ ಅರಾಫತ್ ಅಲಿ ವಿರುದ್ಧ ಆರೋಪ ಹೊರಿಸಿದೆ ಮತ್ತು ಮೊಹಮ್ಮದ್ ಶಾರಿಕ್ ಮತ್ತು ಮಾಜ್ ಮುನೀರ್ ಅಹ್ಮದ್

ಭಯೋತ್ಪಾದನೆ ಗೀಚುಬರಹ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿ ವಿರುದ್ಧ ಎನ್‍ಐಎ ಆರೋಪ ಪಟ್ಟಿ ಸಲ್ಲಿಕೆ Read More »

ಬಸ್​ನಿಂದ ಆಯತಪ್ಪಿ ಬಿದ್ದು ನಿರ್ವಾಹಕ ಸಾವು

ಸಮಗ್ರ ನ್ಯೂಸ್: ಚಲಿಸುತ್ತಿದ್ದ KSRTC ಬಸ್​ನಿಂದ ಆಯತಪ್ಪಿ ಬಿದ್ದು ನಿರ್ವಾಹಕ ಮೃತಪಟ್ಟಿರುವ ಘಟನೆ ನಂಜನಗೂಡು ತಾಲೂಕಿನ ಮಲ್ಲನಮೂಲೆ ಮಠದ ಬಳಿ ನಡೆದಿದೆ. ಚಾಮರಾಜನಗರ ತಾಲೂಕಿನ ಹಳೇಪುರ ನಿವಾಸಿ ಮಹದೇವಸ್ವಾಮಿ (35) ಮೃತ ನಿರ್ವಾಹಕ. ನಿರ್ವಾಹಕ ಮಹದೇವಸ್ವಾಮಿ ಕೆಎಸ್​ಆರ್​ಟಿಸಿ ಬಸ್​ನ ಫುಟ್​ ಬೋರ್ಡ್​​ನಲ್ಲಿ ನಿಂತಿದ್ದರು. ಈ ವೇಳೆ ಆಯತಪ್ಪಿ ಬಿದ್ದು ಮೃತಪಟ್ಟಿದ್ದಾರೆ. ಸ್ಥಳಕ್ಕೆ ನಂಜನಗೂಡು ಡಿವೈಎಸ್​​ಪಿ ರಘು, ಸಂಚಾರಿ ಪೊಲೀಸರು ಭೇಟಿ ನೀಡಿದ್ದಾರೆ. ನಂಜನಗೂಡು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಸ್​ನಿಂದ ಆಯತಪ್ಪಿ ಬಿದ್ದು ನಿರ್ವಾಹಕ ಸಾವು Read More »

ಮಧ್ಯಪ್ರದೇಶದ ರಾಜ್ಯ ಸಚಿವಾಲಯದಲ್ಲಿ ಭಾರೀ ಅಗ್ನಿ ಅವಘಡ

ಸಮಗ್ರ ನ್ಯೂಸ್: ಇಂದು ಮಧ್ಯ ಪ್ರದೇಶದ ಭೋಪಾಲ್​ನಲ್ಲಿರುವ ರಾಜ್ಯ ಸಚಿವಾಲಯದಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಸಚಿವಾಲಯ ಕಟ್ಟಡ ವಲ್ಲಭ ಭವನದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿ ನಂದಿಸಲು ಹಲವು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿವೆ. ಬೆಂಕಿ ವೇಗಕ್ಕೆ ದಟ್ಟವಾದ ಹೊಗೆ ಆವರಿಸಿದೆ. ಅದೃಷ್ಟವಶಾತ್ ಯಾವುದೇ ಸಾವು-ನೋವು ಸಂಭವಿಸಿದ ಎಂಬ ವರದಿಯಾಗಿದೆ. ಈ ಕಟ್ಟಡದಲ್ಲಿ ಮುಖ್ಯಮಂತ್ರಿ ಸೇರಿದಂತೆ ಹಲವು ಮಂದಿ ಸಚಿವರ ಕಚೇರಿಗಳೂ ಇಲ್ಲಿವೆ. ಕಟ್ಟಡದ ಐದನೇ ಮಹಡಿಯಲ್ಲಿ ಮುಖ್ಯಮಂತ್ರಿ ಕಚೇರಿ ಇದೆ. ಬೆಂಕಿ ಅವಘಡದ ಕಾರಣ ಹಲವು

ಮಧ್ಯಪ್ರದೇಶದ ರಾಜ್ಯ ಸಚಿವಾಲಯದಲ್ಲಿ ಭಾರೀ ಅಗ್ನಿ ಅವಘಡ Read More »

ರಾಜ್ಯ ಸಭಾ ಸದಸ್ಯೆಯಾಗಿ ಸುಧಾ ಮೂರ್ತಿ/ ದೇಶದಲ್ಲೇ ಅತ್ಯಂತ ಶ್ರೀಮಂತ ಸಂಸದೆ

ಸಮಗ್ರ ನ್ಯೂಸ್: ರಾಜ್ಯ ಸಭಾ ಸದಸ್ಯೆಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ, ಸುಧಾಮೂರ್ತಿ ದೇಶದಲ್ಲೇ ಅತ್ಯಂತ ಶ್ರೀಮಂತ ಸಂಸದೆಯಾಗಲಿದ್ದಾರೆ. ಸದ್ಯ ಅವರು 5586 ಕೋಟಿ ರು.ಮೌಲ್ಯದ ಆಸ್ತಿ ಹೊಂದಿದ್ದಾರೆ. ಇನ್ಫೋಸಿಸ್‍ನಲ್ಲಿ ಅವರಿಗೆ 3.45 ಕೋಟಿ ಷೇರು ಇದೆ. ಗುರುವಾರ ಇನ್ಫೋಸಿಸ್‍ನ ಪ್ರತಿ ಷೇರಿನ ಬೆಲೆ 1617 ರು. ಇತ್ತು. ಅದರ ಆಧಾರದಲ್ಲಿ ಸುಧಾ ಅವರ ಒಟ್ಟು ಆಸ್ತಿ 5586 ಕೋಟಿ ರು. ಆಗಲಿದೆ. ಇನ್ನು ಇನ್ಫೋಸಿಸ್‍ನಲ್ಲಿ ಸಂಸ್ಥಾಪಕ ನಾರಾಯಣ ಮೂರ್ತಿ 2691 ಕೋಟಿ ರು. ಮೌಲ್ಯದ 1.66

ರಾಜ್ಯ ಸಭಾ ಸದಸ್ಯೆಯಾಗಿ ಸುಧಾ ಮೂರ್ತಿ/ ದೇಶದಲ್ಲೇ ಅತ್ಯಂತ ಶ್ರೀಮಂತ ಸಂಸದೆ Read More »

ಉಡುಪಿ : ಕಾರಿಗೆ ಬೈಕ್ ಢಿಕ್ಕಿ ಸವಾರ ಮೃತ್ಯು

ಸಮಗ್ರ ನ್ಯೂಸ್ : ಬೈಕೊಂದು ನಿಂತಿದ್ದ ಕಾರಿಗೆ ಢಿಕ್ಕಿ ಹೊಡೆದ ಪರಿಣಾಮ ಸವಾರರೊಬ್ಬರು ಮೃತಪಟ್ಟ ಘಟನೆ ನಿಟ್ಟೂರು ಕಾಂಚನ ಹುಂಡೈ ಕಾರಿನ ಶೋರೂಮ್ ಎದುರುಗಡೆ ಉಡುಪಿ ರಾಷ್ಟ್ರೀಯ ಹೆದ್ದಾರಿ-66ರಲ್ಲಿ ನಡೆದಿದೆ. ಸ್ವಸ್ತಿಕ್ ಮೃತ ಬೈಕ್ ಸವಾರ. ಇವರು ಮಾ.7ರಂದು ಮಧ್ಯರಾತ್ರಿ ವೇಳೆ ಬೈಕಿನಲ್ಲಿ ನಿಟ್ಟೂರು ಕಡೆಯಿಂದ ಉಡುಪಿ ಕರಾವಳಿ ಕಡೆಗೆ ಹೋಗುತ್ತಿದ್ದು, ಅತೀವೇಗದಿಂದ ಚಲಾಯಿಸಿದ ಪರಿಣಾಮ ಬೈಕ್, ಶೋರೂಮಿನ ಎದುರುಗಡೆ ಪಾರ್ಕಿಂಗ್ ಜಾಗದಲ್ಲಿ ನಿಲ್ಲಿಸಿದ ಕಾರಿಗೆ ಢಿಕ್ಕಿ ಹೊಡೆದಿದ್ದಾನೆ ಎಂಬ ಮಾಹಿತಿ ತಿಳಿದು ಬಂದಿದೆ. ಇದರ ಪರಿಣಾಮ

ಉಡುಪಿ : ಕಾರಿಗೆ ಬೈಕ್ ಢಿಕ್ಕಿ ಸವಾರ ಮೃತ್ಯು Read More »