March 2024

ಮಂಗಳೂರು: ಲಂಚ ಸ್ವೀಕರಿಸುತ್ತಿದ್ದ ಸರ್ವೆಯರ್ ಪೊಲೀಸರ ವಶ

ಸಮಗ್ರ ನ್ಯೂಸ್ : ಜಮೀನಿನ ನಕ್ಷೆ ನೀಡಲು ಸರ್ವೆಯರ್ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಆರೋಪಿ ಸರ್ವೆಯರ್ ಶೀತಲ್‌ರಾಜ್ (38) ಎಂದು ಗುರುತಿಸಲಾಗಿದೆ. ನೀರುಮಾರ್ಗದ ವ್ಯಕ್ತಿಯೊಬ್ಬರು ಸಂಬಂಧಿ ಲಿಲ್ಲಿ ಪೀಟರ್ ವಾಸ್ ಇವರ ಪರವಾಗಿ ಸ್ಟೆಲ್ಲಾ ಜಾನೆಟ್ ವಾಸ್ ಇವರ ಹೆಸರಿಗೆ ತತ್ಕಾಲ್ ಪೋಡಿ ಮಾಡಿಕೊಡುವ ಬಗ್ಗೆ ಜಿಲ್ಲಾಧಿಕಾರಿ ಕಚೇರಿಯ ಪಹಣಿ ವಿಭಾಗದಲ್ಲಿ ಆನ್‌ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಿದ್ದು, ಈ ಸಮಯ ಸರಕಾರಿ ಶುಲ್ಕ 1500 […]

ಮಂಗಳೂರು: ಲಂಚ ಸ್ವೀಕರಿಸುತ್ತಿದ್ದ ಸರ್ವೆಯರ್ ಪೊಲೀಸರ ವಶ Read More »

ಉಡುಪಿ: ನಿಯಂತ್ರಣ ತಪ್ಪಿ ಬೈಕ್ ಸ್ಕಿಡ್| ಯುವಕ ಮೃತ್ಯು

ಸಮಗ್ರ ನ್ಯೂಸ್: ನಿಯಂತ್ರಣ ತಪ್ಪಿ ಬೈಕ್ ಸ್ಕಿಡ್ ಆಗಿ ಸವಾರ ಸಾವನ್ನಪ್ಪಿದ ಘಟನೆ ಉಡುಪಿಯ ನಿಟ್ಟೂರು ಬಳಿ ನಿನ್ನೆ ತಡರಾತ್ರಿ ನಡೆದಿದೆ. ಭೀಕರ ಅಪಘಾತದಲ್ಲಿ 21 ವರ್ಷದ ಯುವಕನೊಬ್ಬ ಪ್ರಾಣ ಕಳೆದುಕೊಂಡಿದ್ದಾನೆ. ಮೃತನನ್ನು ಸ್ವಸ್ತಿಕ್ ಎಂದು ಗುರುತಿಸಲಾಗಿದ್ದು, ಇಲ್ಲಿನ ನಿಟ್ಟೂರಿನ ಕಾಂಚನಾ ಹುಂಡೈ ಕಾರ್ ಶೋ ರೂಂ ಬಳಿ ಅಪಘಾತ ಸಂಭವಿಸಿದೆ. ಮಾರ್ಚ್ 08 ರ ನಸುಕಿನ ವೇಳೆ ಸ್ವಸ್ತಿಕ್ ತನ್ನ ಮೋಟಾರು ಬೈಕನ್ನು ಚಲಾಯಿಸಿಕೊಂಡು ಉಡುಪಿ ಕಡೆಗೆ ಬರುವ ಸಂಧರ್ಭದಲ್ಲಿ, ನಿಟ್ಟೂರಿನ ಹುಂಡೈ ಶೋರೂಮ್ ಬಳಿ

ಉಡುಪಿ: ನಿಯಂತ್ರಣ ತಪ್ಪಿ ಬೈಕ್ ಸ್ಕಿಡ್| ಯುವಕ ಮೃತ್ಯು Read More »

ವಿಟ್ಲ: ಅಡ್ಯನಡ್ಕ ಬ್ಯಾಂಕ್ ದರೋಡೆ ಪ್ರಕರಣ- ಹೂತಿಟ್ಟ ಚಿನ್ನ ಪತ್ತೆ

ಸಮಗ್ರ ನ್ಯೂಸ್: ಅಡ್ಯನಡ್ಕ ಕರ್ಣಾಟಕ ಬ್ಯಾಂಕ್ ಕಳ್ಳತನ ಪ್ರಕರಣ ತಿಂಗಳಾಗುತ್ತ ಬಂದಿದ್ದು, ಪೊಲೀಸರು ತನಿಖೆಯಲ್ಲಿ ಪ್ರಗತಿಯನ್ನು ಸಾಧಿಸಿ. ಈಗಾಗಲೇ ನಾಲ್ವರು ಪ್ರಮುಖ ಆರೋಪಿಗಳನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಈ ನಡುವೆ ದರೋಡೆಕೋರರು ದರೋಡೆಗೈದ ಕೋಟ್ಯಾಂತರ ರೂ. ಮೌಲ್ಯದ ಚಿನ್ನಾಭರಣವನ್ನು ಪತ್ತೆ ಮಾಡಲಾಗಿದೆ. ಕೇರಳದ ಪೈವಳಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಾಯಾರ್ ಸಜಂಕಿಲ ಎಂಬಲ್ಲಿ ಹೂತಿಟ್ಟಿದ್ದ ಏಳು ಕೆಜಿ ಚಿನ್ನಾಭರಣ ಪತ್ತೆಯಾಗಿದೆ. ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ಕೈಗೊಂಡ ಕರ್ನಾಟಕ ಪೊಲೀಸರಿಗೆ ಚಿನ್ನವನ್ನು ಹೂತಿಟ್ಟಿರುವುದು ಪತ್ತೆಯಾಗಿದೆ. ಅಡ್ಯಡ್ಕದಲ್ಲಿರುವ

ವಿಟ್ಲ: ಅಡ್ಯನಡ್ಕ ಬ್ಯಾಂಕ್ ದರೋಡೆ ಪ್ರಕರಣ- ಹೂತಿಟ್ಟ ಚಿನ್ನ ಪತ್ತೆ Read More »

ಪುತ್ತೂರು:ರಾಧಸ್ ಫ್ಯಾಮಿಲಿ ಶೋ ರೂಂನಲ್ಲಿ ಸ್ಪೆಷಲ್ ಆಫರ್| ಆಕರ್ಷಕ ಆಯ್ಕೆ ನಿಮ್ಮದಾಗಿಸಲು ಈಗಲೇ ಭೇಟಿ ನೀಡಿ

ಸಮಗ್ರ ನ್ಯೂಸ್: ರಾಧಸ್ ಫ್ಯಾಮಿಲಿ ಶೋ ರೂಂನಲ್ಲಿ ಪುತ್ತೂರು ಜಾತ್ರೆ, ಯುಗಾದಿ, ವಿಷು, ಗುಡ್ ಫ್ರೈಡೆ, ರಂಜಾನ್ ಹಾಗೂ ಮದುವೆ ಸಂಭ್ರಮದ ಪ್ರಯುಕ್ತ ಹೊಚ್ಚ ಹೊಸ ಸಂಗ್ರಹದೊಂದಿಗೆ ಮತ್ತೊಮ್ಮೆ ಸ್ಪೆಷಲ್ ಆಫರ್ ಆರಂಭಗೊಂಡಿದೆ. ಬ್ರಾಂಡೆಡ್ ವಸ್ತ್ರಗಳ ಆಕರ್ಷಕ ಸಂಗ್ರಹವೇ ಇದ್ದು, ಸಮಾರಂಭಗಳಿಗೆ ಬೇಕಾದ ಮಾನಮೆಚ್ಚುವ ಕಲೆಕ್ಷನ್ ಗಳೇ ಇಲ್ಲಿದೆ. ಸಮಗ್ರ ಕುಟುಂಬಕ್ಕೆ ಸಮೃದ್ಧ ವಸ್ತ್ರ ಮಳಿಗೆಗೆ ಈಗಲೇ ಭೇಟಿ ನೀಡಿ ಉತ್ತಮ ಗುಣಮಟ್ಟದ ವಸ್ತ್ರಗಳ ಆಯ್ಕೆ ನಿಮ್ಮದಾಗಿಸಿ.

ಪುತ್ತೂರು:ರಾಧಸ್ ಫ್ಯಾಮಿಲಿ ಶೋ ರೂಂನಲ್ಲಿ ಸ್ಪೆಷಲ್ ಆಫರ್| ಆಕರ್ಷಕ ಆಯ್ಕೆ ನಿಮ್ಮದಾಗಿಸಲು ಈಗಲೇ ಭೇಟಿ ನೀಡಿ Read More »

ಕನ್ನಡ ನಾಮಫಲಕ ಅಳವಡಿಕೆ ಕಡ್ಡಾಯಕ್ಕೆ ತುಳುನಾಡಿನಲ್ಲಿ ವಿರೋಧ

ಸಮಗ್ರ ನ್ಯೂಸ್ : ರಾಜ್ಯದಲ್ಲಿ ಶೇ.60ರಷ್ಟು ಕನ್ನಡ ಇರುವ ನಾಮಫಲಕ ಅಳವಡಿಕೆ ಕಡ್ಡಾಯಕ್ಕೆ ತುಳುನಾಡಿನಲ್ಲಿ ವಿರೋಧ ವ್ಯಕ್ತವಾಗುತ್ತಿದೆ. ಕನ್ನಡೇತರ ನಾಮಫಲಕ ಧ್ವಂಸಗೊಳಿಸಿ ಹೋರಾಟ ನಡೆಯುತ್ತಿರುವ ಹಿನ್ನೆಲೆ ಆಕ್ರೋಶಗೊಂಡಿರುವ ತುಳು ಭಾಷೆ ಹೋರಾಟಗಾರರು ತುಳುನಾಡಿನಲ್ಲಿ ಯಾವುದೇ ಬೋರ್ಡ್ಗೆ ಕೈ ಹಾಕದಂತೆ ಎಚ್ಚರಿಕೆ ನೀಡಿದೆ. ಪ್ರೀತಿಯಿಂದ ಭಾಷೆಗಳನ್ನು ಬಳಸಬೇಕೇ ಹೊರತು ಒತ್ತಾಯದ ಹೇರಿಕೆ ಸರಿಯಲ್ಲ ಎಂದು ತುಳು ಹೋರಾಟಗಾರ ರೋಷನ್ ರೇನಾಲ್ಡ್ ಹೇಳಿದ್ದಾರೆ. ಸರ್ಕಾರದ ಕಡತಗಳಲ್ಲೇ ಇಂಗ್ಲೀಷ್ ಇದೆ. ಇವರು ಮೊದಲು ಅದನ್ನೆಲ್ಲಾ ತೆಗೆಯಲಿ ಎಂದರು. ಬೋರ್ಡ್ಗಳನ್ನು ಒಡೆಯುವುದು ಒಂದು

ಕನ್ನಡ ನಾಮಫಲಕ ಅಳವಡಿಕೆ ಕಡ್ಡಾಯಕ್ಕೆ ತುಳುನಾಡಿನಲ್ಲಿ ವಿರೋಧ Read More »

ಮಹಿಳಾ , ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಜಾಬ್ ಆಫರ್!

ಸಮಗ್ರ ಉದ್ಯೋಗ: Women and Child Development Department Kalaburagi ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 2 ಜಿಲ್ಲಾ ಮಿಷನ್ ಕೋಆರ್ಡಿನೇಟರ್, ಸ್ಪೆಷಲಿಸ್ಟ್​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಮಾರ್ಚ್​ 14, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಆಫ್​​ಲೈನ್ ಮೂಲಕ ಅಪ್ಲೈ ಮಾಡಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಕಲಬುರಗಿಯಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ರಾಜ್ಯ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಸ್ಥಳೀಯ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.

ಮಹಿಳಾ , ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಜಾಬ್ ಆಫರ್! Read More »

Bank of Baroda ದಲ್ಲಿ ಉದ್ಯೋಗಕ್ಕೆ ಆಹ್ವಾನ, ತಿಂಗಳಿಗೆ 89,000 ಸಂಬಳ!

ಸಮಗ್ರ ಉದ್ಯೋಗ: ಬ್ಯಾಂಕ್ ಆಫ್ ಬರೋಡಾ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಒಟ್ಟು 22 ಫೈರ್ ಆಫೀಸರ್, ಮ್ಯಾನೇಜರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಮಾರ್ಚ್​​ 10, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಆನ್​​ಲೈನ್ ಮೂಲಕ ಅರ್ಜಿ ಹಾಕಬೇಕು. ಉದ್ಯೋಗಾಂಕ್ಷಿಗಳು ತಡಮಾಡದೇ ಈ ಕೂಡಲೇ ಅಪ್ಲಿಕೇಶನ್ ಹಾಕಿ. ಹುದ್ದೆಯ ಮಾಹಿತಿ:ಫೈರ್ ಆಫೀಸರ್- 2ಮ್ಯಾನೇಜರ್-

Bank of Baroda ದಲ್ಲಿ ಉದ್ಯೋಗಕ್ಕೆ ಆಹ್ವಾನ, ತಿಂಗಳಿಗೆ 89,000 ಸಂಬಳ! Read More »

ಬಿಎಂಆರ್​ಸಿಎಲ್ ನಿಂದ ಮಹತ್ತರ ಕಾರ್ಯ|ಬೆಂಗಳೂರಿನಲ್ಲಿ ಚಾಲಕ ರಹಿತ ಮೆಟ್ರೋ ರೈಲಿನ ಟ್ರಯಲ್ ಆರಂಭ

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ಬಿಎಂಆರ್​ಸಿಎಲ್ ಒಂದು ಮಹತ್ತರ ಬೆಳವಣಿಗೆಯತ್ತ ಕಾಲಿಡುತ್ತಿದೆ. ಹೌದು ಹಳದಿ ಮಾರ್ಗದಲ್ಲಿ ಮೆಟ್ರೋ ರೈಲು ಸಂಚಾರ ಪರೀಕ್ಷೆಯು ಮುಂದಿನ ದಿನಗಳಲ್ಲಿ ನಡೆಯಲಿದು. ನಿನ್ನೆಯಿಂದ ಸಿಗ್ನಲಿಂಗ್ ಪರೀಕ್ಷೆ ನಡೆಯುತ್ತಿದೆ. ಈ ನಡುವೆ, ಬಿಎಂಆರ್​ಸಿಎಲ್​ನ ಬಹು ನಿರೀಕ್ಷಿತ ಚಾಲಕ ರಹಿತ ಮೆಟ್ರೋ ರೈಲಿನ ಪ್ರಾಯೋಗಾರ್ಥ ಸಂಚಾರ ನಿನ್ನೆ ಸಂಜೆಯಿಂದ ಹಳದಿ ಮಾರ್ಗದಲ್ಲಿ ಆರಂಭಗೊಂಡಿದೆ. ಇದು ಆರ್.ವಿ.ರಸ್ತೆಯಿಂದ ಬೊಮ್ಮಸಂದ್ರ ಮಾರ್ಗವಾಗಿ ಚಲಿಸುವ ರೈಲಾಗಿದೆ. ಒಟ್ಟು 18.82 ಕಿ.ಮೀ ಇರುವ ಹಳದಿ ಮಾರ್ಗದಲ್ಲಿ ಚಾಲಕ ರಹಿತ ಮೆಟ್ರೋ ಸಂಚರಿಸಲಿದ್ದು, ಈ

ಬಿಎಂಆರ್​ಸಿಎಲ್ ನಿಂದ ಮಹತ್ತರ ಕಾರ್ಯ|ಬೆಂಗಳೂರಿನಲ್ಲಿ ಚಾಲಕ ರಹಿತ ಮೆಟ್ರೋ ರೈಲಿನ ಟ್ರಯಲ್ ಆರಂಭ Read More »

ಕೇಂದ್ರ ಸರ್ಕಾರದ ಬಂಪರ್ ಕೊಡುಗೆ/ ನೌಕರರ ತುಟ್ಟಿ ಭತ್ಯೆ ಶೇ.4ರಷ್ಟು ಏರಿಕೆ

ಸಮಗ್ರ ನ್ಯೂಸ್: ಕೇಂದ್ರ ಸರ್ಕಾರವು ನೌಕರರಿಗೆ ಬಂಪರ್ ಕೊಡುಗೆ ನೀಡಿದ್ದು, ಕೇಂದ್ರ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಶೇ.4ರಷ್ಟು ಏರಿಕೆ ಮಾಡಿದೆ. ಈಗ ನೌಕರರಿಗೆ ನೀಡುತ್ತಿರುವ ತುಟ್ಟಿಭತ್ಯೆಯು ಶೇ.50ರಷ್ಟು ಆಗಿದೆ. ಇದರ ಜತೆಗೆ ಕೇಂದ್ರ ಸರ್ಕಾರವು ಮನೆ ಬಾಡಿಗೆ ಅಲೋವನ್ಸ್ ಹೆಚ್ಚಳದ ಜೊತೆಗೆ ಗ್ರಾಚುಟಿ ಮೊತ್ತವನ್ನು 25 ಲಕ್ಷ ರೂಪಾಯಿಗೆ ಏರಿಕೆ ಮಾಡಲಾಗಿದೆ. 2024ರ ಜನವರಿ 1ರಿಂದಲೇ ತುಟ್ಟಿಭತ್ಯೆ ಹೆಚ್ಚಳವು ಅನ್ವಯವಾಗಲಿದೆ. ಕೇಂದ್ರ ಸರ್ಕಾರಕ್ಕೆ ವಾರ್ಷಿಕ 12,868 ಕೋಟಿ ರೂಪಾಯಿ ಹೆಚ್ಚುವರಿಯಾಗಿ ಖರ್ಚುವಾಗಲಿದೆ. ಏರುತ್ತಿರುವ ಬೆಲೆಗಳನ್ನು ಸರಿದೂಗಿಸಲು

ಕೇಂದ್ರ ಸರ್ಕಾರದ ಬಂಪರ್ ಕೊಡುಗೆ/ ನೌಕರರ ತುಟ್ಟಿ ಭತ್ಯೆ ಶೇ.4ರಷ್ಟು ಏರಿಕೆ Read More »

ಮತ್ತೆ ತೆರೆದುಕೊಂಡ ರಾಮೇಶ್ವರಂ ಕೆಫೆ

ಸಮಗ್ರ ನ್ಯೂಸ್: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಸಂಭವಿಸಿದ ನಂತರ ಇದೀಗ ಮತ್ತೆ ಸಾರ್ವಜನಿಕರಿಗಾಗಿ ತೆರೆದುಕೊಂಡಿದೆ. ಸದ್ಯ ಕೆಫೆ ಸುತ್ತಮುತ್ತ ಇದ್ದ ಬ್ಯಾರಿಕೇಡ್‍ಗಳನ್ನು ತೆರವು ಮಾಡಲಾಗಿದ್ದು, ಬೆಳಗ್ಗೆಯಿಂದಲೇ ಪೂಜೆ ನಡೆಯುತ್ತಿದೆ. ಪ್ರವೇಶ ದ್ವಾರದ ಬಳಿ ಮೆಟಲ್ ಡಿಕೆಕ್ಟರ್ ಅಳವಡಿಕೆ ಮಾಡಲಾಗಿದ್ದು, ಪ್ರತೀ ಗ್ರಾಹಕರೂ ಈ ದ್ವಾರದ ಮೂಲಕವೇ ಒಳಗೆ ಪ್ರವೇಶಿಸಬೇಕಿದೆ. ಮಾರ್ಚ್1 ರಂದು ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಬ್ಲಾಸ್ಟ್ ಸಂಭವಿಸಿದ್ದು, ಐದು ಮಂದಿ ಗಾಯಗೊಂಡಿದ್ದರು. ಪೊಲೀಸರು ಆರೋಪಿಗಾಗಿ ಹುಡುಕಾಟ ನಡೆಸಿದ್ದಾರೆ.

ಮತ್ತೆ ತೆರೆದುಕೊಂಡ ರಾಮೇಶ್ವರಂ ಕೆಫೆ Read More »