ಹೈದರಾಬಾದ್ : ಕೆಮಿಕಲ್‌ ಫ್ಯಾಕ್ಟರಿ ಭೀಕರ ಸ್ಫೋಟಕ್ಕೆ ಐವರು ಬಲಿ

ಸಮಗ್ರ ನ್ಯೂಸ್‌ :‌ ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಇಂದು ಭೀಕರ ಸ್ಫೋಟ ಸಂಭವಿಸಿದ್ದು, ಐವರು ಕಾರ್ಮಿಕರು ಮೃತಪಟ್ಟಿರುವ ಘಟನೆ ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯಲ್ಲಿರುವ ಚಂದಾಪುರ ಗ್ರಾಮದ ಎಸ್‌ಬಿಆರ್‌ ಆರ್ಗಾನಿಕ್ಸ್‌ ಕಾರ್ಖಾನೆಯಲ್ಲಿ ನಡೆದಿದೆ.

Ad Widget ... ..

ರಾಸಾಯನಿಕ ಸೋರಿಕೆಯ ಬಳಿಕ ಭೀಕರವಾಗಿ ಸ್ಫೋಟ ಸಂಭವಿಸಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸುವ ವೇಳೆಗೆ ಐವರು ಸುಟ್ಟು ಭಸ್ಮವಾಗಿದ್ದರು ಎಂದು ಮೂಲಗಳು ತಿಳಿಸಿವೆ. ಸ್ಫೋಟಕ್ಕೆ ನಿಖರ ಕಾರಣ ತಿಳಿದುಬಂದಿದೆ.

Ad Widget

ಭೀಕರ ಸ್ಫೋಟದಿಂದಾಗಿ ಸುತ್ತಮುತ್ತಲಿನ ಪ್ರದೇಶದಲ್ಲಿ ಭೀಕರ ಹೊಗೆ ಆವರಿಸಿಕೊಂಡಿದೆ. ಅಗ್ನಿ ಶಾಮಕ ದಳದ ಸಿಬ್ಬಂದಿಯು ತೀವ್ರ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದು, ಇನ್ನೂ 8-10 ಕಾರ್ಮಿಕರು ಕಾರ್ಖಾನೆಯಲ್ಲಿಯೇ ಸಿಲುಕಿದ್ದಾರೆ ಎಂಬ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ.

ಇದುವರೆಗೆ ಮೃತರು ಹಾಗೂ ಗಾಯಾಳುಗಳ ಕುರಿತು ನಿಖರ ಮಾಹಿತಿ ತಿಳಿದು ಬಂದಿಲ್ಲ. ಪೊಲೀಸರು ಕೂಡ ಸ್ಥಳಕ್ಕೆ ಆಗಮಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

Leave a Comment

Your email address will not be published. Required fields are marked *