ಶಿವಮೊಗ್ಗ: ಪಕ್ಷೇತರ ಅಭ್ಯರ್ಥಿಯಾಗಿ ಈಶ್ವರಪ್ಪ ನಾಮಪತ್ರ ಸಲ್ಲಿಕೆ

ಸಮಗ್ರ ನ್ಯೂಸ್‌ : ಬಿರು ಬಿಸಿಲನ್ನು ಲೆಕ್ಕಿಸದೇ ಭಾರೀ ಸಂಖ್ಯೆಯಲ್ಲಿ ಹೆಜ್ಜೆ ಹಾಕಿದ ಬೆಂಬಲಿಗರೊಂದಿಗೆ ಮೆರವಣಿಗೆಯಲ್ಲಿ ಇಂದು ನಗರದ ಜಿಲ್ಲಾಧಿಕಾರಿ ಕಚೇರಿಗೆ ಬಂದ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ, ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು.

. Ad Widget . Ad Widget . Ad Widget .

ರಾಮಣ್ಣ ಶೆಟ್ಟಿ ಪಾರ್ಕ್ ನಿಂದ ಮೆರವಣಿಗೆ ಆರಂಭವಾಯಿತು. ರಾಷ್ಟ್ರ ಭಕ್ತರ ಬಳಗದ ಹೆಸರಿನಲ್ಲಿ ಮೆರವಣಿಗೆಯಲ್ಲಿ ಸಾಗಿಬಂದ ಈಶ್ವರಪ್ಪ ಬೆಂಬಲಿಗರು ಕೇಸರಿ ಧ್ವಜಗಳನ್ನು ಪ್ರದರ್ಶಿಸಿದರು. ಜೈ ಶ್ರೀರಾಮ್, ಭಾರತ ಮಾತಾಕಿ ಜೈ, ರಾಷ್ಟಭಕ್ತರ ಬಳಗದ ಅಭ್ಯರ್ಥಿ ಈಶ್ವರಪ್ಪನವರಿಗೆ ಜೈ ಎಂಬ ಘೋಷಣೆಗಳನ್ನು ಕೂಗಿದರು.

. Ad Widget . Ad Widget . Ad Widget . Ad Widget . Ad Widget . Ad Widget . . Ad Widget . Ad Widget . Ad Widget . Ad Widget .

ಉರಿ ಬಿಸಿಲಿನಲ್ಲಿ ನಾಮಪತ್ರ ಸಲ್ಲಿಕೆಗೆ ತೆರೆದ ವಾಹನದಲ್ಲಿ ಹೊರಟ ಈಶ್ವರಪ್ಪನವರ ಮೆರವಣಿಗೆಗೆ ವಾದ್ಯ ಮೇಳ ರಂಗು ತುಂಬಿತು. ಈ ವೇಳೆ ಬೆಂಬಲಿಗರು ಹೂವಿನ ಮಳೆ ಸುರಿಸಿದರು.

ಮೆರವಣಿಗೆಯಲ್ಲಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿದ್ದರು. ಮೆರವಣಿಗೆಯಲ್ಲಿ ಹೆಜ್ಜೆ ಹಾಕಿದವರಿಗೆ ಮಜ್ಜಿಗೆ, ನಿಂಬೆ ಹುಳಿ ಪೆಪ್ಪರ್ ಮೆಂಟ್, ನೀರಿನ ಪ್ಯಾಕೆಟ್ ಹಂಚಲಾಯಿತು.

Leave a Comment

Your email address will not be published. Required fields are marked *