Ad Widget

ಉದಯ ಟಿವಿಯಲ್ಲಿ ಜ್ಯೋತಿಷ್ಯ ಕಾರ್ಯಕ್ರಮ ನಡೆಸಿಕೊಡುತ್ತಿದ್ದ ಖ್ಯಾತ ಜ್ಯೋತಿಷಿ ಎಸ್.ಕೆ ಜೈನ್ ಇನ್ನಿಲ್ಲ

ಸಮಗ್ರ ನ್ಯೂಸ್: ಖ್ಯಾತ ಜ್ಯೋತಿಷಿ ಎಸ್​.ಕೆ.ಜೈನ್ ಅವರು ವಿಧವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು, ಆದರೆ ಅವರಿಗೆ ಚಿಕಿತ್ಸೆ ಫಲಕಾರಿಯಾಗದೇ ವಿಧಿವಶರಾಗಿದ್ದಾರೆ.

Ad Widget . Ad Widget . Ad Widget . Ad Widget . Ad Widget . Ad Widget

ಖ್ಯಾತ ಜ್ಯೋತಿಷಿ ಎಸ್​.ಕೆ.ಜೈನ್ ಅವರು ಪತ್ನಿ ಮತ್ತು ಓರ್ವ ಪುತ್ರಿಯನ್ನು ಅಗಲಿದ್ದಾರೆ ಎನ್ನಲಾಗಿದೆ. ಎಸ್​.ಕೆ.ಜೈನ್ ಅವರ ಪ್ರಾರ್ಥೀವ ಶರೀರವನ್ನು ಬೆಂಗಳೂರಿನ ಅವರ ಮನೆಯಲ್ಲಿ ಅಂತಿಮ ದರ್ಶನಕ್ಕೆ ಇಂದು ರಾತ್ರಿ ಆಸ್ಪತ್ರೆಯಿಂದ ತರಲಾಗುವುದು, ಬಳಿಕ ನಾಳೆಯೇ ಅವರ ಅಂತ್ಯಸಂಸ್ಕಾರವನ್ನು ನೇರವೇರಿಸಲಾಗುವುದು ಅಂತ ತಿಳಿದುಬಂದಿದೆ.

Ad Widget . Ad Widget .

ಉದಯ ವಾಹಿನಿಯಲ್ಲಿ ಜ್ಯೋತಿಷ್ಯ ಕಾರ್ಯಕ್ರಮವನ್ನು ನಡೆಸಿಕೊಡುವುದರ ಮೂಲಕ ಕನ್ನಡ ವಿದ್ಯುನ್ಮಾನ ಮಾಧ್ಯಮದ ಮೊಟ್ಟ ಮೊದಲ ಜ್ಯೋತಿಷಿ ಎಂಬ ಹೆಸರಿನೊಂದಿಗೆ ಖ್ಯಾತಿಯನ್ನು ಹೊಂದಿದ್ದರು. ಹಲವಾರು ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಜ್ಯೋತಿಷ್ಯ ಕಾರ್ಯಕ್ರಮವನ್ನ ನೆಡೆಸಿಕೊಡುತ್ತಿದ್ದರು.

ಹಬ್ಬ-ಹರಿದಿನ, ಗ್ರಹಣ ಸೇರಿದಂತೆ ವಿಶೇಷ ದಿನಗಳಂದು ವಾಹಿನಿಗಳಲ್ಲಿ ರಾಶಿ ಫಲಾಫಲ ಸೇರಿದಂತೆ ದಿನದ ವಿಶೇಷತೆಗಳ ಬಗ್ಗೆ ಜ್ಯೋತಿಷ್ಯ ಹೇಳುತ್ತಿದ್ದರು.

Leave a Comment

Your email address will not be published. Required fields are marked *