Ad Widget

ಬಿಜೆಪಿಯಿಂದ ಮನೆಮನೆಯಲ್ಲಿ ಆಣೆ – ಪ್ರಮಾಣ| ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರೋಪ

ಸಮಗ್ರ ನ್ಯೂಸ್: ದ.ಕ ಜಿಲ್ಲೆಯಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತ ಎಂದು ತಿಳಿದಿರುವುದರಿಂದ ವಿರೋಧಿಗಳು ಅಪಪ್ರಚಾರದಲ್ಲಿ ತೊಡಗಿದ್ದು ಮನೆಮನೆಗಳಿಗೆ ತೆರಳಿ ಆಣೆ-ಪ್ರಮಾಣ ಮಾಡಿಸುತ್ತಿದ್ದಾರೆ. ಕಾರ್ಯಕರ್ತರು ಇದಕ್ಕೆ ತಲೆಕೆಡಿಸಿಕೊಳ್ಳದೆ ಪ್ರೀತಿಯಿಂದ ಚುನಾವಣೆಯನ್ನು ಎದುರಿಸಲು ಸಿದ್ಧರಾಗಬೇಕು ಎಂದು ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಸಲಹೆ ನೀಡಿದರು.

Ad Widget . Ad Widget . Ad Widget . Ad Widget . Ad Widget . Ad Widget

ಸುಳ್ಯ ತಾಲೂಕಿನ ಸಂಪಾಜೆಯಿಂದ ಕಲ್ಲುಗುಂಡಿವರೆಗೆ ನಡೆದ ರೋಡ್ ಶೋ ಬಳಿಕ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು ಬಿಜೆಪಿಯವರು ಸಂಸದರಾಗಿದ್ದ 33 ವರ್ಷಗಳಲ್ಲಿ ಜಿಲ್ಲೆಯಲ್ಲಿ ಅಭಿವೃದ್ಧಿ ಕೆಲಸಗಳು ನಡೆಯಲಿಲ್ಲ. ಕಾಂಗ್ರೆಸ್ ಸಂಸದರಿದ್ದಾಗ ಆಗಿದ್ದ ಅಭಿವೃದ್ಧಿ ಕೆಲಸಗಳು ಜಿಲ್ಲೆಯನ್ನು ಮಾದರಿಯಾಗಿಸಿದ್ದವು. ಮುಂದೆಯೂ ಜಿಲ್ಲೆ ಮಾದರಿಯಾಗಲಿದೆ ಎಂದರು.

Ad Widget . Ad Widget .

ಮಾಜಿ ಸಚಿವ ಬಿ. ರಮಾನಾಥ ರೈ ಮಾತನಾಡಿ, ಅಭಿವೃದ್ಧಿ ವಿಚಾರದಲ್ಲಿ ಚರ್ಚೆ ನಡೆಯಬೇಕಾಗಿದೆ. ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದಿದು ಮುಂದೆಯೂ ಹಾಗೆಯೇ ಮಾಡಲಿದೆ. ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಹಲವು ಗ್ಯಾರೆಂಟಿ ಯೋಜನೆಗಳು ಸಿಗಲಿವೆ ಎಂದರು.

ರೋಡ್ ಶೋ, ಕಾರ್ನರ್ ಸಭೆಯ ಬಳಿಕ ಪದ್ಮರಾಜ್ ಆರ್ ತೋಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನಕ್ಕೆ ಭೇಟಿ ನೀಡಿ, ಪ್ರಾರ್ಥನೆ ಸಲ್ಲಿಸಿದರು.

Leave a Comment

Your email address will not be published. Required fields are marked *