Ad Widget

ಯಾದಗಿರಿ: ಯುವಕನ ಮರ್ಮಾಂಗಕ್ಕೆ ಒದ್ದು ಹತ್ಯೆ

ಸಮಗ್ರ ನ್ಯೂಸ್: ಯುವಕನೊಬ್ಬನ ಮರ್ಮಾಂಗಕ್ಕೆ ಮತ್ತೋರ್ವ ಯುವಕನೊಬ್ಬ ಒದ್ದ ಪರಿಣಾಮ, ಸ್ಥಳದಲ್ಲೇ ಗಾಯಾಳು ಸಾವನ್ನಪ್ಪಿರುವ ಘಟನೆ ಯಾದಗಿರಿಯಲ್ಲಿ ನಡೆದಿದೆ.

Ad Widget . Ad Widget . Ad Widget . Ad Widget . Ad Widget . Ad Widget

ಯಾದಗಿರಿ ನಗರದ ಶಗಾಪುರಪೇಟೆ ಬಡಾವಣೆಯ ರೊಟ್ಟಿ ಕೇಂದ್ರಕ್ಕೆ ಕಳೆದ ರಾತ್ರಿ ರಾಕೇಶ್ ಎಂಬಾತ ರೊಟ್ಟಿ ತೆಗೆದುಕೊಂಡು ಬರೋದಕ್ಕೆ ತೆರಳಿದ್ದಾನೆ. ರೊಟ್ಟಿ ಖರೀದಿಯ ವೇಳೆಯಲ್ಲಿ ವಾಗ್ವಾದ ನಡೆದು, ಫಯಾಜ್ ಹಾಗೂ ರಾಕೇಶ್ ನಡುವೆ ಗಲಾಟೆಯಾಗಿದೆ.

Ad Widget . Ad Widget .

ಈ ಗಲಾಟೆಯ ಬಳಿಕ ಮನೆಗೆ ರಾಕೇಶ್ ತೆರಳಿದ್ದಾನೆ. ರಾಕೇಶ್ ಮರಳಿದ ನಂತರ ಫಯಾಜ್ ಹಾಗೂ ರಾಕೇಶ್ ನಡುವೆ ಜಗಳವಾಗಿದೆ. ಈ ಗಲಾಟೆಯ ವೇಳೆಯಲ್ಲಿ ಫಯಾಜ್ ರಾಕೇಶ್ ನ ಮರ್ಮಾಂಗಕ್ಕೆ ಒದ್ದ ಪರಿಣಾಮ, ಸ್ಥಳದಲ್ಲೇ ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ.

ಈ ಘಟನೆಯ ನಂತರ ಆರೋಪಿ, ಕೊಲೆಯಾದ ಯುವಕನ ಕುಟುಂಬದ ನಡುವೆ ಸಂಧಾನದ ಮಾತುಕತೆ ನಿನ್ನೆ ರಾತ್ರಿ 11 ಗಂಟೆಯ ಹಾಗೆ ನಡೆದಿದೆ. ಇದಾದ ನಂತರ ಬಿಜೆಪಿ ಮುಖಂಡರು ಮಧ್ಯ ಪ್ರವೇಶಿಸಿ ಕೊಲೆಯಾದ ರಾಕೇಶ್ ತಾಯಿಯಿಂದ ಪೊಲೀಸರಿಗೆ ದೂರು ಕೊಡಿಸಿದ್ದಾರೆ.

ವಿಷಯ ತಿಳಿದು ಸ್ಥಳಕ್ಕೆ ಯಾದಗಿರಿ ಎಸ್ಪಿ ಸಂಗೀತಾ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಪೊಲೀಸರು ಸ್ಥಳಕ್ಕೆ ಬಂದ ನಂತರ ರಾಕೇಶ್ ಶವ ಮರಣೋತ್ತರ ಪರೀಕ್ಷೆಗಾಗಿ ಯಾದಗಿರಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಈ ಸಂಬಂಧ ಯಾದಗಿರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment

Your email address will not be published. Required fields are marked *