Ad Widget

ಬೆಂಗಳೂರಿನಲ್ಲಿ ರೈಲಿಗೆ ಸಿಲುಕಿ ಮೂವರು ಸಾವು

ಸಮಗ್ರ ನ್ಯೂಸ್: ಬೆಂಗಳೂರಿನ ಮಾರತ್ತಹಳ್ಳಿ ರೈಲ್ವೇ ನಿಲ್ದಾಣದ ಬಳಿ ಆಂಧ್ರಪ್ರದೇಶದ ಮೂವರು ಯುವಕರು ರೈಲಿಗೆ ಸಿಲುಕಿ ಮೃತಪಟ್ಟ ಘಟನೆ ವರದಿಯಾಗಿದೆ.. ಇವರು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆಯು ವ್ಯಕ್ತವಾಗಿದೆ.

Ad Widget . Ad Widget . Ad Widget . Ad Widget . Ad Widget . Ad Widget

ಮೃತದೇಹವನ್ನು ನೋಡಿ ಇಂದು ಬೆಳಗ್ಗೆ ಸ್ಥಳೀಯರು ರೈಲ್ವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬೈಯಪ್ಪನಹಳ್ಳಿ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಚೆಲ್ಲಾಪಿಲ್ಲಿಯಾಗಿ ಬಿದ್ದಿರುವ ಯುವಕರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ.

Ad Widget . Ad Widget . Ad Widget .

ಮೃತರನ್ನು ಆಂಧ್ರಪ್ರದೇಶದ ಚಿತ್ತೂರು ಮೂಲದವರೆಂದು ತಿಳಿದು ಬಂದಿದೆ. ಶಶಿಕುಮಾರ್ (23), ಲೋಕೇಶ್ (25) ಮೃತ ದುರ್ದೈವಿಗಳು. ಮತ್ತೋರ್ವನ ಗುರುತು ಪತ್ತೆಯಾಗಿಲ್ಲ. ಆತ್ಮಹತ್ಯೆಗೆ ನಿಖರ ಕಾರಣವೇನು ಎಂಬುದು ತಿಳಿದುಬಂದಿಲ್ಲ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Leave a Comment

Your email address will not be published. Required fields are marked *