Ad Widget

ದೇವರಕೊಲ್ಲಿಯಲ್ಲಿ ಭೀಕರ ಅಪಘಾತ| ಬೈಕ್ ಸವಾರ‌ ಸ್ಥಳದಲ್ಲೇ ದುರ್ಮರಣ

ಸಮಗ್ರ ನ್ಯೂಸ್: ಮಾಣಿ -ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮದೆನಾಡು ಸಮೀಪದ ದೇವರಕೊಲ್ಲಿ ಬಳಿ ಕಾರು ಮತ್ತು ಬೈಕ್ ಮಧ್ಯೆ ಮುಖಾಮುಖಿ ಭೀಕರ ಅಪಘಾತ ಸಂಭವಿಸಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಸ್ಥಳದಲ್ಲೇ ದುರ್ಮರಣವನ್ನಪ್ಪಿದ ಘಟನೆ ಇಂದು (ಎ.26) ನಡೆದಿದೆ.

Ad Widget . Ad Widget . Ad Widget . Ad Widget . Ad Widget . Ad Widget

ಮಡಿಕೇರಿಯಿಂದ ವಿಟ್ಲಕ್ಕೆ ಮತ ಚಲಾಯಿಸಲು ಬರುತ್ತಿದ್ದ ದೀಕ್ಷಿತ್ ಶೆಟ್ಟಿ ಎಂಬವರು ಚಲಾಯಿಸುತ್ತಿದ್ದ ಕಾರು ದೇವರಕೊಲ್ಲಿಯ ಗಾರೆಮುರಿ ಎಂಬಲ್ಲಿಗೆ ತಲುಪಿದಾಗ ಚಾಲಕನ ನಿಯಂತ್ರಣ ಕಳೆದು ವಿರುದ್ದ ದಿಕ್ಕಿನಲ್ಲಿ ಸಂಚರಿಸಿ ಸುಳ್ಯದಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಮಡಿಕೇರಿಯ ಚೇರಂಬಾಣೆ ನಿವಾಸಿ ಮಂಜುನಾಥ್ ಎಂಬವರು ಚಲಾಯಿಸುತ್ತಿದ್ದ ಬೈಕಿಗೆ ಕಾರು ಢಿಕ್ಕಿಯಾಗಿದೆ. ಪರಿಣಾಮವಾಗಿ ರಸ್ತೆಗೆ ಎಸೆಯಲ್ಪಟ್ಟು ತಲೆ ಹಾಗೂ ಕೈ -ಕಾಲುಗಳಿಗೆ ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಮಂಜುನಾಥ್ ಅವರು ಸ್ಥಳದಲ್ಲೇ ಮೃತಪಟ್ಟರೆಂದು ತಿಳಿದುಬಂದಿದೆ.

Ad Widget . Ad Widget . Ad Widget .

ಕಾರಿನಲ್ಲಿದ್ದ ಚಾಲಕ ದೀಕ್ಷಿತ್ ಶೆಟ್ಟಿ ಅವರು ಸೇರಿದಂತೆ ನಾಲ್ವರು ಪ್ರಯಾಣಿಕರಿದ್ದು, ಅವರೆಲ್ಲರಿಗೂ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಅಂಬ್ಯುಲೆನ್ಸ್ ಮೂಲಕ ಸುಳ್ಯದ ಕೆವಿಜಿ ಆಸ್ಪತ್ರೆಗೆ ಕರೆತಂದು ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

Leave a Comment

Your email address will not be published. Required fields are marked *