Ad Widget

ರಾಜ್ಯದಲ್ಲಿ ಮೊದಲ ಹಂತದ ಮತದಾನ ಮುಕ್ತಾಯ/ ದೋಣಿಯಲ್ಲಿ ಬಂದು ಮತ ಚಲಾಯಿಸಿದ ಮತದಾರರು

ಸಮಗ್ರ ನ್ಯೂಸ್: ರಾಜ್ಯದಲ್ಲಿ ಮೊದಲ ಹಂತದ ಮತದಾನ ಮುಕ್ತಾಯಗೊಂಡಿದ್ದು, ಈ ಪ್ರಕ್ರಿಯೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಹೊರವಲಯದ ಕೊಣಾಜೆ ಸಮೀಪದ ಪಾವೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಉಳಿಯ ದ್ವೀಪದ ಮತದಾರರು ದೋಣಿಯ ಮೂಲಕ ನೇತ್ರಾವತಿ ನದಿಯನ್ನು ದಾಟಿ ಬಂದು ಪಾವೂರು ಗ್ರಾಮದ ಗಾಡಿಗದ್ದೆ ಶಾಲೆಯ ಮತದಾನ ಕೇಂದ್ರದಲ್ಲಿ ಮತ ಚಲಾಯಿಸಿದರು.

Ad Widget . Ad Widget . Ad Widget . Ad Widget . Ad Widget . Ad Widget

ಈ ದ್ವೀಪದ ಜನರು ಇಲ್ಲಿ ಸಂಪರ್ಕ ಸೇತುವೆ ಇಲ್ಲದೆ ಸಂಕಷ್ಟದ ಜೀವನ ನಡೆಸುತ್ತಿದ್ದಾರೆ. ಈ ದ್ವೀಪದಲ್ಲಿ ಸುಮಾರು 40 ಕ್ಕೂ ಹೆಚ್ಚು ಕುಟುಂಬಗಳಿದ್ದು, ಸುಮಾರು 150 ಮಂದಿ ಮತದಾರರಿದ್ದಾರೆ.

Ad Widget . Ad Widget . Ad Widget .

ಇಲ್ಲಿಯ ಮತದಾರರು ದೋಣಿಯ ಮೂಲಕ ನೇತ್ರಾವತಿ ನದಿಯನ್ನು ದಾಟಿ ಗಾಡಿಗದ್ದೆ ಮತದಾನ ಕೇಂದ್ರದಲ್ಲಿ ತಮ್ಮ ಹಕ್ಕು ಚಲಾಯಿಸಿದರು.

Leave a Comment

Your email address will not be published. Required fields are marked *