April 2024

ಚಾಮರಾಜನಗರ: ಹಾಸನೂರು ಅರಣ್ಯ ಇಲಾಖೆ ಚೆಕ್ಪೋಸ್ಟ್ ಗೆ ಕಾಡಾನೆ ದಾಳಿ

ಸಮಗ್ರ ನ್ಯೂಸ್ : ಗಡಿಜಿಲ್ಲೆ ಚಾಮರಾಜನಗರ ಸಮೀಪದ ಹಾಸನೂರು ಅರಣ್ಯ ಇಲಾಖೆ ಚೆಕ್ಪೋಸ್ಟ್ ಗೆ ಕಾಡಾನೆಯೊಂದು ನುಗ್ಗಿ ದಾಳಿ ನಡೆಸುವ ಪ್ರಯತ್ನಕ್ಕೆ ಮುಂದಾದ ಘಟನೆ ನಡೆದಿದ್ದು ಕರ್ತವ್ಯ ನಿರತ ಸಿಬ್ಬಂದಿಗಳ ಸದ್ದಿಗೆ ಆನೆ ಸ್ಥಳದಿಂದ ಕಾಲ್ಕಿತ್ತಿದೆ. ಹಾಸನೂರಿನ ಅರಣ್ಯ ಇಲಾಖೆ ಚೆಕ್ಪೋಸ್ಟ್ ಕಡೆ ನುಗ್ಗಿ ಬಂದ ಕಾಡಾನೆಯೊಂದು ದಾಳಿ ಮಾಡಲು ಯತ್ನಿಸಿ ಸಿಬ್ಬಂದಿಗಳನ್ನ ಕೆಲಕಾಲ ಆತಂಕಕ್ಕೆ ದೂಡಿತ್ತು, ಕಾಡಾನೆ ಚೆಕ್ಪೋಸ್ಟ್ ಕಡೆ ನುಗ್ಗಿ ಬಂದದನ್ನ ಅರಿತ ಸಿಬ್ಬಂದಿಗಳು ಕೂಗಿ ಸದ್ದು ಮಾಡಿದ್ದಾರೆ ಇದರಿಂದ ಗಾಬರಿಗೊಂಡ ಆನೆ ಅಲ್ಲಿಂದ […]

ಚಾಮರಾಜನಗರ: ಹಾಸನೂರು ಅರಣ್ಯ ಇಲಾಖೆ ಚೆಕ್ಪೋಸ್ಟ್ ಗೆ ಕಾಡಾನೆ ದಾಳಿ Read More »

ಕೊಡಗು:ಬಿಜೆಪಿಯಿಂದ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಜನ್ಮ ದಿನಾಚರಣೆ

ಸಮಗ್ರ ನ್ಯೂಸ್ : ಜಿಲ್ಲಾ ಬಿಜೆಪಿ ಹಾಗೂ ಬಿಜೆಪಿ ಎಸ್ ಸಿ ಮೋರ್ಚಾ ದ ವತಿಯಿಂದ ಪಕ್ಷದ ಜಿಲ್ಲಾ ಕಛೇರಿ ಯಲ್ಲಿ ಸಂವಿಧಾನ ಶಿಲ್ಪಿ ಡಾಕ್ಟರ್ ಬಿ ಆರ್ ಅಂಬೇಡ್ಕರ್ ಜನ್ಮದಿನವನ್ನು ಆಚರಿಸಲಾಯಿತು. ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ಅಂಬೇಡ್ಕರ್ ರವರು ಇಡೀ ವಿಶ್ವಕ್ಕೆ ಮಾದರಿ ಯಾಗು ವಂತ ಸಂವಿಧಾನ ವನ್ನು ನೀಡಿದ ಅಂಬೇಡ್ಕರ್ ರವರನ್ನು ಸ್ಮರಿಸಿದರು. ಜಿಲ್ಲಾ ಎಸ್ ಸಿ ಮೋರ್ಚಾ ಅಧ್ಯಕ್ಷ ರವಿ ಮೊಗೇರ ಅಂಬೇಡ್ಕರ್ ರವರ ಜೀವನ ಮತ್ತು ಆದರ್ಶ

ಕೊಡಗು:ಬಿಜೆಪಿಯಿಂದ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಜನ್ಮ ದಿನಾಚರಣೆ Read More »

ಮಂಗಳೂರು: ಮೋದಿ ರೋಡ್ ಶೋ ಪಕ್ಕದಲ್ಲಿ ಬೆಂಕಿ ಅವಘಡ

ಸಮಗ್ರ ನ್ಯೂಸ್: ಇಂದು ಮೈಸೂರಿನಲ್ಲಿ ಸಮಾವೇಶ ಮುಗಿಸಿ ಮಂಗಳೂರಿನಲ್ಲಿ ಪ್ರಧಾನಿ ಮೋದಿ ರೋಡ್ ಶೋ ನಡೆದಿತ್ತು. ಆದರೆ ರೋಡ್ ಶೋ ಪಕ್ಕದಲ್ಲಿ ಬೆಂಕಿ ಅವಘಡ ಸಂಭವಿಸಿದೆ. ನಗರದ ಭಾರತ್ ಮಾಲ್ ಪಕ್ಕದ ಔಷಧ ಗೋಡೌನ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕದ ವಾತಾವರಣ ನಿರ್ಮಾಣವಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಧಾವಿಸಿ ಬೆಂಕಿ ನಂದಿಸುವ ಕಾರ್ಯ ಮಾಡುತ್ತಿದ್ದಾರೆ. ನರೇಂದ್ರ ಮೋದಿ ರೋಡ್ ಶೋ ನಡೆಯುತ್ತಿದ್ದ ಮಾರ್ಗದಿಂದ ಈ ಕಟ್ಟಡ ಕೇವಲ 50 ಮೀಟರ್ ಅಂತರದಲ್ಲಿದೆ. ನಾಯಕ್ ಹೆಲ್ತ್ ಕೇರ್ ಗೋಡೌನ್‌ನಲ್ಲಿ

ಮಂಗಳೂರು: ಮೋದಿ ರೋಡ್ ಶೋ ಪಕ್ಕದಲ್ಲಿ ಬೆಂಕಿ ಅವಘಡ Read More »

ಮಂಗಳೂರು: ಮೋದಿ ರೋಡ್‌ ಶೋಗೆ ಕ್ಷಣಗಣನೆ; ನಗರದೆಲ್ಲೆಡೆ ಪೊಲೀಸ್‌ ಸರ್ಪಗಾವಲು

ಸಮಗ್ರ ನ್ಯೂಸ್‌ : ಪ್ರಧಾನಿ ನರೇಂದ್ರ ಮೋದಿ ಅವರು ಇಲ್ಲಿ ಇಂದು ರಾತ್ರಿ 7.45ರಿಂದ ರೋಡ್ ಶೋ ನಡೆಸುವ ಮೂಲಕ ಬಿಜೆಪಿ ಅಭ್ಯರ್ಥಿಗಳ ಮತ ಯಾಚಿಸಲಿದ್ದಾರೆ. ಪ್ರಧಾನಿ ಭಾಗವಹಿಸುವ ಈ ಕಾರ್ಯಕ್ರಮದ ಸಲುವಾಗಿ ನಗರದೆಲ್ಲೆಡೆ ಬಿಗು ಭದ್ರತೆ ಏರ್ಪಡಿಸಲಾಗಿದೆ. ಬ್ರಹ್ಮಶ್ರೀ ನಾರಾಯಣಗುರು ವೃತ್ತರಿಂದ ಆರಂಭವಾಗಲಿರುವ ರೋಡ್‌ ಶೋ ಲಾಲ್‌ಬಾಗ್‌, ಪಿವಿಎಸ್‌ ವೃತ್ತದ ಮೂಲಕ ಸಾಗಿ ನವಭಾರತ ವೃತ್ತದಲ್ಲಿ ಸಮಾಪನಗೊಳ್ಳಲಿದೆ. ನಾರಾಯಣ ಗುರುಗಳ ಮೂರ್ತಿಗೆ ಮಾಲಾರ್ಪಣೆ ಮಾಡುವ ಮೂಲಕ ಪ್ರಧಾನಿ ರೋಡ್‌ ಶೋ ಆರಂಭಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವ

ಮಂಗಳೂರು: ಮೋದಿ ರೋಡ್‌ ಶೋಗೆ ಕ್ಷಣಗಣನೆ; ನಗರದೆಲ್ಲೆಡೆ ಪೊಲೀಸ್‌ ಸರ್ಪಗಾವಲು Read More »

ರೈತರು, ಬಡವರು, ಮಹಿಳೆಯರಿಗೆ ಪ್ರಧಾನಿಯಿಂದ ಭರ್ಜರಿ ಕೊಡುಗೆ| ಬಿಜೆಪಿಯ ಪ್ರಣಾಳಿಕೆಯಲ್ಲಿ ಏನಿದೆ ಇಲ್ಲಿದೆ ನೋಡಿ…!

ಸಮಗ್ರ ನ್ಯೂಸ್: ಲೋಕ ಸಭಾ ಚುನಾವಣೆ ಹಿನ್ನೆಲೆ ಇಂದು ಬಿಜೆಪಿಯು ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿದೆ. ದೆಹಲಿಯಲ್ಲಿರುವ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಬಿಜೆಪಿ ಸಂಕಲ್ಪ ಪತ್ರವನ್ನು ಬಿಡುಗಡೆ ಮಾಡಲಾಗಿದೆ. ಅದರಲ್ಲೂ, ರೈತರು, ಬಡವರು, ಮಹಿಳೆಯರಿಗೆ ಪ್ರಧಾನಿ ನರೇಂದ್ರ ಮೋದಿ ಭರ್ಜರಿ ಕೊಡುಗೆ ಘೋಷಿಸಿದ್ದಾರೆ. ಏಕರೂಪ ನಾಗರಿಕ ಸಂಹಿತೆ, ಒಂದು ದೇಶ, ಒಂದು ಚುನಾವಣೆ ಜಾರಿ ಸೇರಿ ಹಲವು ಪ್ರಮುಖ ಘೋಷಣೆಗಳನ್ನು ಮಾಡಿದ್ದಾರೆ. ದೇಶದಲ್ಲಿ ಈಗಾಗಲೇ ಒಂದು ದೇಶ, ಒಂದು ಚುನಾವಣೆ ನಡೆಸುವ ಕುರಿತು ಪರ ಹಾಗೂ ವಿರೋಧಗಳ ಚರ್ಚೆ ನಡೆಯುತ್ತಿದೆ.

ರೈತರು, ಬಡವರು, ಮಹಿಳೆಯರಿಗೆ ಪ್ರಧಾನಿಯಿಂದ ಭರ್ಜರಿ ಕೊಡುಗೆ| ಬಿಜೆಪಿಯ ಪ್ರಣಾಳಿಕೆಯಲ್ಲಿ ಏನಿದೆ ಇಲ್ಲಿದೆ ನೋಡಿ…! Read More »

ಪ್ರಧಾನಿ ಮೋದಿಯನ್ನು ಹಿಟ್ಲರ್, ಮುಸಲೋನಿಗೆ ಹೋಲಿಸಿ ಅವಹೇಳನ| ಸಿಎಂ ಸಿದ್ದರಾಮಯ್ಯ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದಿ ಅವರನ್ನು ಹಿಟ್ಲರ್, ಮುಸಲೋನಿಗೆ ಹೋಲಿಸಿ ಅವಹೇಳನ ಮಾಡುತ್ತಿರುವ ಸಿಎಂ ಸಿದ್ದರಾಮಯ್ಯ ವಿರುದ್ಧ ಕ್ರಮ ಕೈಗೊಳ್ಳಬೇಕು, ಅವರನ್ನು ಸ್ಟಾರ್ ಪ್ರಚಾರಕರ ಪಟ್ಟಿಯಿಂದ ಕೈಬಿಡಬೇಕು ಎಂದು ಕೇಂದ್ರ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ಸಲ್ಲಿಸಿದೆ. ಶಾಸಕ ಎಸ್, ಸುರೇಶ್ ಕುಮಾರ್ ಮತ್ತು ಬಿಜೆಪಿ ಕಾನೂನು ಪ್ರಕೋಷ್ಠದ ರಾಜ್ಯ ಘಟಕದ ಅಧ್ಯಕ್ಷ ವಿವೇಕ್ ಎಸ್ . ರೆಡ್ಡಿ ನೇತೃತ್ವದ ನಿಯೋಗ ರಾಜ್ಯದ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಅವರನ್ನು ಶನಿವಾರ ಭೇಟಿ ಮಾಡಿ ದೂರು

ಪ್ರಧಾನಿ ಮೋದಿಯನ್ನು ಹಿಟ್ಲರ್, ಮುಸಲೋನಿಗೆ ಹೋಲಿಸಿ ಅವಹೇಳನ| ಸಿಎಂ ಸಿದ್ದರಾಮಯ್ಯ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು Read More »

ಅಕಾಡೆಮಿಕ್ ಅಸೋಸಿಯೇಟ್- ಮಾರ್ಕೆಟಿಂಗ್ ಏರಿಯಾ​ದಲ್ಲಿ ಜಾಬ್ ಖಾಲಿ ಇದೆ, ಈಗಲೇ ಅರ್ಜಿ ಸಲ್ಲಿಸಿ

ಸಮಗ್ರ ಉದ್ಯೋಗ: ಇಂಡಿಯನ್ ಇನ್​ಸ್ಟಿಟ್ಯೂಟ್ ಆಫ್ ಮ್ಯಾನೇಜ್​ಮೆಂಟ್ ಬೆಂಗಳೂರು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅನೇಕ ಅಕಾಡೆಮಿಕ್ ಅಸೋಸಿಯೇಟ್- ಮಾರ್ಕೆಟಿಂಗ್ ಏರಿಯಾ​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಏಪ್ರಿಲ್ 27, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್​ಲೈನ್ ಮೂಲಕ ಅರ್ಜಿ ಹಾಕಬೇಕು. ವಿದ್ಯಾರ್ಹತೆ:ಇಂಡಿಯನ್ ಇನ್​ಸ್ಟಿಟ್ಯೂಟ್ ಆಫ್ ಮ್ಯಾನೇಜ್​ಮೆಂಟ್ ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು

ಅಕಾಡೆಮಿಕ್ ಅಸೋಸಿಯೇಟ್- ಮಾರ್ಕೆಟಿಂಗ್ ಏರಿಯಾ​ದಲ್ಲಿ ಜಾಬ್ ಖಾಲಿ ಇದೆ, ಈಗಲೇ ಅರ್ಜಿ ಸಲ್ಲಿಸಿ Read More »

ಇಬ್ಬರು ಮಕ್ಕಳನ್ನು ಸಾಯಿಸಿದ ತಾಯಿ ಜೈಲಿನಲ್ಲಿ ಆತ್ಮಹತ್ಯೆ

ಸಮಗ್ರ ನ್ಯೂಸ್: ಬೆಂಗಳೂರಿನ ಜಾಲಹಳ್ಳಿಯಲ್ಲಿ ಇಬ್ಬರು ಮಕ್ಕಳನ್ನು ಕೊಲೆ ಮಾಡಿದ್ದ ತಾಯಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಗಂಗಾದೇವಿ ಆತ್ಮಹತ್ಯೆ ಮಾಡಿಕೊಂಡ ಆರೋಪಿ. ಈಕೆ ಜೈಲಿಗೆ ಹೋದ ದಿನವೇ ಶೌಚಾಲಯದಲ್ಲಿ ಸೀರೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈಕೆ ಎಪ್ರಿಲ್ 9 ರಂದು ರಾತ್ರಿ ಇಬ್ಬರು ಮಕ್ಕಳನ್ನು ತಲೆದಿಂಬುವಿನಿಂದ ಉಸಿರುಗಟ್ಟಿಸಿ ಸಾಯಿಸಿದ್ದಳು, ಬುಧವಾರ ಬೆಳಗ್ಗೆ 112 ಗೆ ಕರೆ ಮಾಡಿ, ತಾನು ಆತ್ಮಹತ್ಯೆ ‌ಮಾಡಿಕೊಳ್ಳುವುದಾಗಿ ಹೇಳಿದ್ದಳು. ತಕ್ಷಣ ಸ್ಥಳಕ್ಕೆ ಹೋಗಿ ಗಂಗಾದೇವಿಯನ್ನು ಪೊಲೀಸರು

ಇಬ್ಬರು ಮಕ್ಕಳನ್ನು ಸಾಯಿಸಿದ ತಾಯಿ ಜೈಲಿನಲ್ಲಿ ಆತ್ಮಹತ್ಯೆ Read More »

ಚುನಾವಣಾ ಯಾತ್ರೆ ವೇಳೆ ಆಂಧ್ರ ಸಿಎಂ ಜಗನ್ ಮೇಲೆ ಕಲ್ಲು ತೂರಾಟ

ಸಮಗ್ರ ನ್ಯೂಸ್: ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ಅವರ ಬಸ್ ಗೆ ಚುನಾವಣಾ ರ್ಯಾಲಿ ವೇಳೆ ಕೆಲವು ಅಪರಿಚಿತ ವ್ಯಕ್ತಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಇದರಿಂದ ಅವರ ಹಣೆಗೆ ಗಾಯಗಳಾಗಿದ್ದು, ಎಡ ಹುಬ್ಬಿನ ಬಳಿ ಗಾಯವಾಗಿದೆ. ಅವರಿಗೆ ತಕ್ಷಣ ಪ್ರಥಮ ಚಿಕಿತ್ಸೆ ನೀಡಲಾಗಿದೆ. ನಂತರ ಅವರು ತಮ್ಮ ಯಾತ್ರೆಯನ್ನು ಮುಂದುವರೆಸಿದ್ದಾರೆ. ಮುಖ್ಯಮಂತ್ರಿ ಮೇಲಿನ ದಾಳಿಗೆ ತೆಲುಗು ದೇಶಂ ಮತ್ತು ಅದರ ಮುಖ್ಯಸ್ಥ ಚಂದ್ರಬಾಬು ನಾಯ್ಡು ಕಾರಣ ಎಂದು ವೈಎಸ್ಆರ್​​ಸಿಪಿ ಪಕ್ಷ ಆರೋಪಿಸಿದೆ. ವಿಜಯವಾಡದ ಸಿಂಗ್ ನಗರದ

ಚುನಾವಣಾ ಯಾತ್ರೆ ವೇಳೆ ಆಂಧ್ರ ಸಿಎಂ ಜಗನ್ ಮೇಲೆ ಕಲ್ಲು ತೂರಾಟ Read More »

ಮೈಸೂರಿನಲ್ಲಿದೆ ಸರ್ಕಾರಿ ಉದ್ಯೋಗಕ್ಕೆ ಜನ ಬೇಕಾಗಿದ್ದಾರೆ, ಉತ್ತಮ ಸಂಬಳ ಕೂಡ

ಸಮಗ್ರ ಉದ್ಯೋಗ: ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆಯು ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ನಡೆಸುತ್ತಿದೆ. ಒಟ್ಟು 1 ಪ್ರಾಜೆಕ್ಟ್​ ಅಸೋಸಿಯೇಟ್-I ಹುದ್ದೆ ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಹಾಕಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮೈಸೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಏಪ್ರಿಲ್ 23, 2024 ಕೊನೆಯ ದಿನವಾಗಿದ್ದು, ಆಸಕ್ತರು ಈ ಕೂಡಲೇ ಅಪ್ಲಿಕೇಶನ್ ಹಾಕಿ. ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಹಾಕಬೇಕು. ಶೈಕ್ಷಣಿಕ ಅರ್ಹತೆ:ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆ ನೇಮಕಾತಿ

ಮೈಸೂರಿನಲ್ಲಿದೆ ಸರ್ಕಾರಿ ಉದ್ಯೋಗಕ್ಕೆ ಜನ ಬೇಕಾಗಿದ್ದಾರೆ, ಉತ್ತಮ ಸಂಬಳ ಕೂಡ Read More »