April 2024

ಬೇಸಿಗೆ ಮತ್ತು ಸಾಲು ಸಾಲು ಹಬ್ಬಗಳ ಎಫೆಕ್ಟ್/ ದಾಖಲೆ ನಿರ್ಮಿಸಿದ ನಂದಿನಿ ಹಾಲು ಮತ್ತು ಮೊಸರು

ಸಮಗ್ರ ನ್ಯೂಸ್: ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳದ (ಕೆಎಂಎಫ್) ಇತಿಹಾಸದಲ್ಲೇ ನಂದಿನಿ ಹಾಲು ಮತ್ತು ಮೊಸರು ದಾಖಲೆ ಮಟ್ಟದಲ್ಲಿ ಮಾರಾಟವಾಗಿದ್ದು, ಬಿರು ಬೇಸಿಗೆ ಮತ್ತು ಸಾಲು ಸಾಲು ಹಬ್ಬಗಳೇ ಇದಕ್ಕೆ ಕಾರಣ ಎನ್ನಲಾಗಿದೆ. ಏಪ್ರಿಲ್ 6 ರಂದು ಒಂದೇ ದಿನ 13.56 ಲಕ್ಷ ಲೀಟರ್ ಸ್ಯಾಚೆಟ್ ಮೊಸರು ಮತ್ತು ಏಪ್ರಿಲ್ 11ರಂದು 51.60 ಲಕ್ಷ ಲೀಟರ್ ಸ್ಯಾಚೆಟ್ ಹಾಲು ಮಾರಾಟವಾಗಿದೆ. ಇದು ಕೆಎಂಎಫ್ ಇತಿಹಾಸದಲ್ಲೇ ಇಲ್ಲಿಯವರೆಗೆ ಒಂದೇ ದಿನದಲ್ಲಿ ಹಾಲು, ಮೊಸರಿನ ಅತ್ಯಧಿಕ ಮಾರಾಟದ ದಾಖಲೆ […]

ಬೇಸಿಗೆ ಮತ್ತು ಸಾಲು ಸಾಲು ಹಬ್ಬಗಳ ಎಫೆಕ್ಟ್/ ದಾಖಲೆ ನಿರ್ಮಿಸಿದ ನಂದಿನಿ ಹಾಲು ಮತ್ತು ಮೊಸರು Read More »

ರಾಜ್ಯ ಮಾನವ ಹಕ್ಕು ಆಯೋಗದ ಅಧ್ಯಕ್ಷರಾಗಿ ಡಾ. ಟಿ.ಶ್ಯಾಂ ಭಟ್ ನೇಮಕ

ಸಮಗ್ರ ನ್ಯೂಸ್: ರಾಜ್ಯ ಮಾನವ ಹಕ್ಕು ಆಯೋಗದ ಹಂಗಾಮಿ ಅಧ್ಯಕ್ಷರನ್ನಾಗಿ ನಿವೃತ್ತ ಐಎಎಸ್ ಅಧಿಕಾರಿ ಡಾ. ಟಿ.ಶ್ಯಾಂ ಭಟ್ ಅವರನ್ನು ನೇಮಕ ಮಾಡಲಾಗಿದೆ. 2023ರ ನವೆಂಬರ್‍ನಲ್ಲಷ್ಟೇ ನಿವೃತ್ತ ನ್ಯಾ. ಎಲ್.ನಾರಾಯಣಸ್ವಾಮಿ ಅವರನ್ನು ಸರ್ಕಾರ ಅಧ್ಯಕ್ಷರನ್ನಾಗಿ ನೇಮಕ ಮಾಡಿತ್ತು. ಆದರೆ, ಕಳೆದ ಫೆಬ್ರವರಿಯಲ್ಲಿ ನ್ಯಾ. ಎಲ್.ನಾರಾಯಣಸ್ವಾಮಿ ಅವರು ಲೋಕಪಾಲದ ನ್ಯಾಯಾಂಗ ಸದಸ್ಯರಾಗಿ ನೇಮಕರಾಗಿದ್ದು, ಅದಾದ ನಂತರ ರಾಜ್ಯ ಮಾನವ ಹಕ್ಕು ಆಯೋಗದ ಅಧ್ಯಕ್ಷ ಸ್ಥಾನ ತ್ಯಜಿಸಿದ್ದರು. ಹೀಗಾಗಿ ಕಳೆದ ಒಂದೂವರೆ ತಿಂಗಳಿಗಿಂತ ಹೆಚ್ಚು ಕಾಲ ರಾಜ್ಯ ಮಾನವ ಹಕ್ಕು

ರಾಜ್ಯ ಮಾನವ ಹಕ್ಕು ಆಯೋಗದ ಅಧ್ಯಕ್ಷರಾಗಿ ಡಾ. ಟಿ.ಶ್ಯಾಂ ಭಟ್ ನೇಮಕ Read More »

ವಾಟ್ಸಾಪ್ ಚಾಟ್‍ಬೋಟ್/ ಇನ್ಮುಂದೆ ಕಥೆ, ಜೋಕ್ಸ್ ಹೇಳುತ್ತೆ ವಾಟ್ಸಾಪ್

ಸಮಗ್ರ ನ್ಯೂಸ್: ಜನಪ್ರಿಯ ಸಾಮಾಜಿಕ ಜಾಲತಾಣಗಳ ಪೈಕಿ ಒಂದಾದ ವಾಟ್ಸಾಪ್ ಇದೀಗ ತನ್ನ ಬಳಕೆದಾರರಿಗೆ ಕೃತಕ ಬುದ್ಧಿಮತ್ತೆ ಆಧರಿತ ಚಾಟ್‍ಬೋಟ್ ವ್ಯವಸ್ಥೆಯನ್ನು ಪರಿಚಯಿಸಿದೆ ವಾಟ್ಸಾಪ್ ಐಕಾನ್ ಕೆಳಗಡೆ ಬರುವ ವಾಟ್ಸಾಪ್ ಚಾಟ್ ಫೀಡ್‍ನಲ್ಲಿ ಈ ಸೌಲಭ್ಯ ಕಲ್ಪಿಸಲಾಗಿದೆ. ಇದನ್ನು ಬಳಸಿಕೊಂಡು ನಿಮ್ಮ ಸ್ನೇಹಿತರು ಅಥವಾ ಸಂಬಂಧಿಗಳ ಜೊತೆಗೆ ಚಾಟ್ ಮಾಡುವಂತೆ ಚಾಟ್ ಮಾಡಬಹುದು. ಚಾಟ್‍ಬೋಟ್‍ನಲ್ಲಿ ಹಲವು ಅವಕಾಶಗಳನ್ನು ಕಲ್ಪಿಸಲಾಗಿದ್ದು, ಅವುಗಳ ಮೂಲಕ ಕೃತಕ ಬುದ್ಧಿಮತ್ತೆ ಆಧರಿತ ಚಿತ್ರರಚನೆ ಮಾಡಬಹುದು, ಯಾವುದೇ ಪ್ರಶ್ನೆ ಕೇಳಿ ಉತ್ತರ ಪಡೆಯಬಹುದು, ಕಥೆ

ವಾಟ್ಸಾಪ್ ಚಾಟ್‍ಬೋಟ್/ ಇನ್ಮುಂದೆ ಕಥೆ, ಜೋಕ್ಸ್ ಹೇಳುತ್ತೆ ವಾಟ್ಸಾಪ್ Read More »

ಮನೆಯಿಂದಲೇ ಮತದಾನಕ್ಕೆ ಅವಕಾಶ/ ಇಂದಿನಿಂದ ಆರಂಭ

ಸಮಗ್ರ ನ್ಯೂಸ್: 85 ವರ್ಷಕ್ಕಿಂತ ಮೇಲ್ಪಟ್ಟ ಹಿರಿಯರು ಮತ್ತು ವಿಶೇಷ ಅಗತ್ಯವುಳ್ಳವರು ಮನೆಯಿಂದಲೇ ಅಂಚೆ ಮತದಾನದ ಮೂಲಕ ಮತ ಚಲಾಯಿಸಲು ಅವಕಾಶವಿದ್ದು ಈ ಮತದಾನ ಪ್ರಕ್ರಿಯೆ ಇಂದಿನಿಂದ ಆರಂಭವಾಗಿದೆ. . ಬೆಂಗಳೂರು ಉತ್ತರ, ಕೇಂದ್ರ ಮತ್ತು ದಕ್ಷಿಣ ಕ್ಷೇತ್ರಗಳ ಮತದಾರರಿಗೆ ಅಂಚೆ ಮೂಲಕ ಮತದಾನದ ಆಯ್ಕೆಯನ್ನು ನೀಡಲಾಗಿದ್ದು, ಇಂದಿನಿಂದ ಏಪ್ರಿಲ್ 18ರವರೆಗೆ ಮನೆಯಲ್ಲಿ ಗುಪ್ತ ಮತದಾನ ನಡೆಯುವ ಸಾಧ್ಯತೆ ಇದೆ. ನಗರದ ಮೂರು ಲೋಕಸಭಾ ಕ್ಷೇತ್ರಗಳಲ್ಲಿ 85 ವರ್ಷ ಮೇಲ್ಪಟ್ಟ 95,128 ಮಂದಿ ಜನಸಂಖ್ಯೆ ಹೊಂದಿದ್ದಾರೆ. 22,222

ಮನೆಯಿಂದಲೇ ಮತದಾನಕ್ಕೆ ಅವಕಾಶ/ ಇಂದಿನಿಂದ ಆರಂಭ Read More »

ಭೀಕರ ರಸ್ತೆ ಅಪಘಾತ.. ಬಬಲೇಶ್ವರದಲ್ಲಿ ನಾಲ್ವರು ಸಾವು

ಸಮಗ್ರ ನ್ಯೂಸ್: ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಅರ್ಜುಣಗಿ ಗ್ರಾಮದ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅರ್ಜುನ ಕುಶಾಲಸಿಂಗ್ ರಜಪೂತ (32), ರವಿನಾಥ ಪತ್ತಾರ (52), ಪುಷ್ಪಾ ರವಿನಾಥ ಪತ್ತಾರ (40), ಮೇಘರಾಜ ರಜಪೂತ (12) ಮೃತ ದುರ್ದೈವಿಗಳು. KA 28 D 1021 ಸಂಖ್ಯೆಯ ಕಾರಿನಲ್ಲಿ ನಾಲ್ವರು ವಿಜಯಪುರದಿಂದ ಜಮಖಂಡಿಗೆ ದೇವಸ್ಥಾನಕ್ಕೆ ಹೊರಟಿದ್ದರು. ಸಿಮೆಂಟ್ ಸಾಗಿಸುತ್ತಿದ್ದ ಲಾರಿ ಜಮಖಂಡಿಯಿಂದ ವಿಜಯಪುರಕ್ಕೆ ತೆರಳುತ್ತಿತ್ತು. ಅರ್ಜುಣಗಿ ಗ್ರಾಮದ ಬಳಿ ಕಾರು ಮತ್ತು

ಭೀಕರ ರಸ್ತೆ ಅಪಘಾತ.. ಬಬಲೇಶ್ವರದಲ್ಲಿ ನಾಲ್ವರು ಸಾವು Read More »

ಕೈಗೆಟುಕದ ಹಳದಿ ಲೋಹ| ಬಂಗಾರ ಈಗ ಮತ್ತಷ್ಟು ಭಾರ

ಸಮಗ್ರ ನ್ಯೂಸ್: ಯುಗಾದಿ ಹಬ್ಬದ ಬಳಿಕ ಚಿನ್ನದ ದರ ಏರಿಕೆ ಕ್ರಮೇಣ ಮುಂದುವರೆದಿದ್ದು, ಶುಕ್ರವಾರವೂ ಕೂಡ ಹಳದಿ ಲೋಹದ ಬೆಲೆಯಲ್ಲಿ ಏರಿಕೆ ಕಂಡುಬಂದಿದೆ. ಶುಕ್ರವಾರ ಚಿನ್ನದ ದರ ಏರಿಕೆಯಾಗಿದ್ದು, 22 ಕ್ಯಾರಟ್‌ ಚಿನ್ನದ ದರದಲ್ಲಿ ಬರೊಬ್ಬರಿ 100 ರೂ ಏರಿಕೆಯಾಗಿದ್ದು, 24 ಕ್ಯಾರೆಟ್‌ ಚಿನ್ನದ ಬೆಲೆ 109 ರೂ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಒಂದು ಗ್ರಾಂ 22 ಕ್ಯಾರಟ್‌ ಚಿನ್ನ 6,720ರೂ ಇದ್ದು, 24 ಕ್ಯಾರಟ್ ಚಿನ್ನದರ 7,331 ರೂಗೆ ಏರಿಕೆಯಾಗಿದೆ. ಮದುವೆಯಂತಹ ಕಾರ್ಯಕ್ರಮದಲ್ಲಿ ಚಿನ್ನ ಖರೀದಿ ಮಾಡುವುದು

ಕೈಗೆಟುಕದ ಹಳದಿ ಲೋಹ| ಬಂಗಾರ ಈಗ ಮತ್ತಷ್ಟು ಭಾರ Read More »

ರಾಜ್ಯದೆಲ್ಲೆಡೆ ವರುಣನ ಆರ್ಭಟ| ಜನಜೀವನ ಅಸ್ತವ್ಯಸ್ತ

ಸಮಗ್ರ ನ್ಯೂಸ್: ರಾಜ್ಯದ ಜನತೆ ಬಿರುಬಿಸಿಲಿನಿಂದ ಬೇಸತ್ತು ಹೋಗಿದ್ದರು. ಆದರೆ ಶುಕ್ರವಾರ ವರುಣದೇವ ತಂಪೆರೆದಿದ್ದಾನೆ. ಸುಳಿಗಾಳಿ ಹಿನ್ನಲೆ ಬಾಗಲಕೋಟೆ, ಬೆಳಗಾವಿ, ಚಿಕ್ಕಮಗಳೂರು, ಧಾರವಾಡ, ಗದಗ, ಹಾವೇರಿ ಹಾಗೂ ಶಿವಮೊಗ್ಗ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿತ್ತು. ಆದರೆ ಅದರಂತೆ ಮಳೆಯಾಗಿದೆ. ಅಷ್ಟೇ ಅಲ್ಲದೆ ಒಂದು ದಿನ ಸುರಿದ ಮಳೆಗೆ ಅನಾಹುತಗಳು ಸಂಭವಿಸಿದೆ. ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ತಾಂಬಾ ಗ್ರಾಮದಲ್ಲಿ ಸಿಡಿಲು ಬಡಿದು ಓರ್ವ ಮಹಿಳೆ

ರಾಜ್ಯದೆಲ್ಲೆಡೆ ವರುಣನ ಆರ್ಭಟ| ಜನಜೀವನ ಅಸ್ತವ್ಯಸ್ತ Read More »

ಜೈಪುರ: ಬಾಬಾಸಾಹೇಬ್‌ ಅಂಬೇಡ್ಕರ್‌ ಹುಟ್ಟಿಬಂದರೂ ಸಂವಿಧಾನ ಬದಲಾಯಿಸಲಾಗದು; ಮೋದಿ

ಸಮಗ್ರ ನ್ಯೂಸ್ : ಬಿಜೆಪಿ ನೇತೃತ್ವದ ಸರ್ಕಾರಕ್ಕೆ ದೇಶದ ಸಂವಿಧಾನವೇ ಎಲ್ಲ. ಬಾಬಾಸಾಹೇಬ್‌ ಅಂಬೇಡ್ಕರ್‌ ಅವರೇ ಹುಟ್ಟಿಬಂದರೂ, ಅವರಿಂದಲೂ ಈಗ ದೇಶದ ಸಂವಿಧಾನ ಬದಲಾಯಿಸಲಾಗದು ಎಂದು ಪ್ರಧಾನಿ ನರೇಂದ್ರ ಮೋದಿ ಜೈಪುರದ ಬಾರ್ಮೇರ್‌ನಲ್ಲಿ ಶುಕ್ರವಾರ ಹೇಳಿದರು. ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರ ನಡೆಸಿದ ಅವರು, ಬಿಜೆಪಿ ಎಂದಿಗೂ ಸಂವಿಧಾನ ಬದಲಾಯಿಸುವುದಿಲ್ಲ. ಆದರೆ, ದೇಶದ ಮೇಲೆ ತುರ್ತು ಪರಿಸ್ಥಿತಿ ಹೇರಿ ಸಂವಿಧಾನವನ್ನು ದುರ್ಬಲಗೊಳಿಸಿದ ಕಾಂಗ್ರೆಸ್‌, ಈಗ ಸಂವಿಧಾನ ರಕ್ಷಣೆ ಹೆಸರಿನಲ್ಲಿ ಮೋದಿಯನ್ನು ಟೀಕಿಸುತ್ತಿದೆ ಎಂದರು.

ಜೈಪುರ: ಬಾಬಾಸಾಹೇಬ್‌ ಅಂಬೇಡ್ಕರ್‌ ಹುಟ್ಟಿಬಂದರೂ ಸಂವಿಧಾನ ಬದಲಾಯಿಸಲಾಗದು; ಮೋದಿ Read More »

ಗುಂಡ್ಲುಪೇಟೆ : ಯುವಕನ ಮೇಲೆ ಹುಲಿ ದಾಳಿ|ಕೈ, ಕುತ್ತಿಗೆಗೆ ಗಾಯ ಆಸ್ಪತ್ರೆಗೆ ದಾಖಲು

ಸಮಗ್ರ ನ್ಯೂಸ್‌ : ಗುಂಡ್ಲುಪೇಟೆ ತಾಲೂಕಿನ ಹೊನ್ನೇಗೌಡನಹಳ್ಳಿ ಗ್ರಾಮದ ಶಂಬಪ್ಪ ಎಂಬ ರೈತನ ಜಮೀನಿನಲ್ಲಿ ಕಾಣಿಸಿಕೊಂಡ ಹುಲಿ ಯುವಕನ ಮೇಲೆ ದಾಳಿ ನಡೆಸಿ ಗಾಯಗೊಳಿಸಿರುವ ಘಟನೆ ಇಂದು ಸಂಜೆ ನಡೆದಿದೆ. ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತಾ ಪ್ರದೇಶದ ಗೋಪಾಲಸ್ವಾಮಿ ಬೆಟ್ಟ ವಲಯದ ಹೊನ್ನೇಗೌಡನಹಳ್ಳಿ ಗ್ರಾಮದ ರೈತರ ಜಮೀನಿನಲ್ಲಿ ಹಠಾತ್ತನೆ ಕಾಣಿಸಿಕೊಂಡ ಹುಲಿ ಆತಂಕ ಸೃಷ್ಟಿ ಮಾಡಿತ್ತು. ಹುಲಿಯನ್ನ ಕಂಡ ರೈತರು ಅರಣ್ಯ ಇಲಾಖೆಗೆ ಮಾಹಿತಿ ನೀಡುವ ವೇಳೆಗಾಗಲೇ ಒಂದು ಜಮೀನಿನಿಂದ ಮತ್ತೊಂದು ಜಮೀನಿಗೆ ಕಾಲ್ಕಿತ್ತಿತ್ತು, ಇಲಾಖೆ

ಗುಂಡ್ಲುಪೇಟೆ : ಯುವಕನ ಮೇಲೆ ಹುಲಿ ದಾಳಿ|ಕೈ, ಕುತ್ತಿಗೆಗೆ ಗಾಯ ಆಸ್ಪತ್ರೆಗೆ ದಾಖಲು Read More »

ಚೆನ್ನೈ: ಸಾರ್ವಜನಿಕರಿಗೆ ತೊಂದರೆ ನೀಡಿದ ಆರೋಪದ ಮೇಲೆ ಅಣ್ಣಾಮಲೈ ವಿರುದ್ಧ ಕೇಸ್‌

ಸಮಗ್ರ ನ್ಯೂಸ್‌ : ರಾತ್ರಿ 10 ಗಂಟೆಯ ನಂತರವೂ ಪ್ರಚಾರ ನಡೆಸಿದ ಆರೋಪದ ಮೇಲೆ ಬಿಜೆಪಿ ಅಭ್ಯರ್ಥಿ ಹಾಗೂ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ವಿರುದ್ಧ ಕೊಯಮತ್ತೂರು ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದಾರೆ. ಕಾನೂನು ಬಾಹಿರ ಸಭೆ ಹಾಗೂ ಸಾರ್ವಜನಿಕರಿಗೆ ತೊಂದರೆ ನೀಡಿದ ಆರೋಪದ ಮೇಲೆ ಅಣ್ಣಾಮಲೈ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಗಡುವು ಮೀರಿ ಬಿಜೆಪಿ ಪ್ರಚಾರ ನಡೆಸಿದ್ದಕ್ಕೆ ಡಿಎಂಕೆ ಮತ್ತು ಎಡಪಕ್ಷಗಳ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದ್ದರು. ಸೆಕ್ಷನ್ 143, 341 ಮತ್ತು 290 ರ ಅಡಿಯಲ್ಲಿ ಎಫ್‌ಐಆರ್

ಚೆನ್ನೈ: ಸಾರ್ವಜನಿಕರಿಗೆ ತೊಂದರೆ ನೀಡಿದ ಆರೋಪದ ಮೇಲೆ ಅಣ್ಣಾಮಲೈ ವಿರುದ್ಧ ಕೇಸ್‌ Read More »