Ad Widget

ಉಪ್ಪಿನಂಗಡಿ: ಹೃದಯಾಘಾತದಿಂದ ಮಲಗಿದ್ದಲ್ಲೇ ಯುವಕ ಸಾವು

ಸಮಗ್ರ ನ್ಯೂಸ್: ಗಾರೆ ಕೆಲಸಕ್ಕೆ ಹೋಗುವ ಯುವಕನೊಬ್ಬ ಮಲಗಿದ್ದಲ್ಲೇ ಹೃದಯಾಘಾತಕ್ಕೆ ಸಿಲುಕಿ ಮೃತಪಟ್ಟ ಘಟನೆ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಸಮೀಪ ನಡೆದಿದೆ.

Ad Widget . Ad Widget . Ad Widget . Ad Widget . Ad Widget . Ad Widget

ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ. ಗೋಪಾಲ ಗೌಡರ ಪುತ್ರ 27ರ ಹರೆಯದ ಜನಾರ್ದನ ನಿನ್ನಿಕಲ್ಲು ಹೃದಯಾಘಾತದಿಂದ ಶುಕ್ರವಾರ ಮೃತಪಟ್ಟಿದ್ದಾರೆ.

Ad Widget . Ad Widget .

ಮೇಸ್ತ್ರಿ ಕೆಲಸಕ್ಕೆ ಹೋಗುತ್ತಿದ್ದ ಇವರು ಕೆಲಸಕ್ಕೆ ರಜೆ ಹಾಕಿ ಮನೆಯಲ್ಲೇ ಇದ್ದರು. ಇವರ ತಾಯಿ ತೋಟದ ಕೆಲಸಕ್ಕೆ ಹೋಗಿದ್ದು, ಸಂಜೆ ಬಂದು ನೋಡಿದಾಗ ಜನಾರ್ದನ ಮಲಗಿದ್ದಲ್ಲೇ ಮೃತಪಟ್ಟಿರುವುದು ಕಂಡುಬಂದಿದೆ.

ಶ್ರೀ ದುರ್ಗಾ ಭಜನಾ ಮಂಡಳಿ ದುರ್ಗಾಗಿರಿ ಮತ್ತು ಶ್ರೀ ದುರ್ಗಾ ಯುವಕ ಮಂಡಲ ದುರ್ಗಾಗಿರಿಯ ಸಕ್ರಿಯ ಸದಸ್ಯನಾಗಿದ್ದರು. ಮೃತರು ತಾಯಿ ಲಲಿತಾ, ಇಬ್ಬರು ಸಹೋದರರನ್ನು ಅಗಲಿದ್ದಾರೆ.

Leave a Comment

Your email address will not be published. Required fields are marked *