ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆ ನಿಮಿತ್ತ ರಾಯಚೂರು ನಗರದ ತಿಮ್ಮಾಪುರ ಪೇಟೆ ಬಡಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಲೋಕಸಭಾ ಅಭ್ಯರ್ಥಿ ಜಿ ಕುಮಾರ ನಾಯಕ್ ಪರವಾಗಿ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ. ಮಂತರ್ ಗೌಡ ರವರು ಬಹಿರಂಗ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.
ಈ ಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಜನಪ್ರಿಯ ಗ್ಯಾರಂಟಿ ಯೋಜನೆಗಳ ಬಗ್ಗೆ ತಿಳಿಸಿ, ವಿದ್ಯಾವಂತರನ್ನು ಲೋಕಸಭೆಗೆ ಆರಿಸಿ ಕಳುಹಿಸುವ ಜವಾಬ್ದಾರಿ ಜನರ ಮೇಲಿದೆ, ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಬೇಕಾಗಿದೆ ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಿ ಕುಮಾರ ನಾಯಕ್, ಕಾಂಗ್ರೆಸ್ ಮುಖಂಡ ರವಿ ಭೋಸರಾಜುರವರು ಹಾಗೂ ಸ್ಥಳೀಯ ಕಾಂಗ್ರೆಸ್ ಮುಖಂಡರುಗಳು ಕಾರ್ಯಕರ್ತರು ಉಪಸ್ಥಿತರಿದ್ದರು.







