Ad Widget

ಬೆಂಗಳೂರಿನಲ್ಲಿ ಬಿಸಿಲ‌ ಬೇಗೆಗೆ ತಂಪೆರೆದ ವರುಣ| ಗುಡುಗು, ಮಿಂಚು ಸಹಿತ ಹಲವೆಡೆ ಉತ್ತಮ ಮಳೆ

ಸಮಗ್ರ ನ್ಯೂಸ್: ಬಿಸಿಲ ಧಗೆಗೆ ಸುಸ್ತಾಗಿದ್ದ ಉದ್ಯಾನನಗರಿಯಲ್ಲಿ ಇಂದು ಮತ್ತೆ ವರುಣ ತಂಪೆರೆದಿದ್ದಾನೆ. ಮಧ್ಯಾಹ್ನ ನಂತರ ಸಿಲಿಕಾನ್ ಸಿಟಿಯಲ್ಲಿ ಮೋಡ ಕವಿದ ವಾತಾವರಣವಿದ್ದು ಸಂಜೆ ವೇಳೆ ಗುಡುಗು, ಮಿಂಚು, ಗಾಳಿ ಸಹಿತ ಧಾರಕಾರ ಮಳೆಯಾಗಿದೆ.

Ad Widget . Ad Widget . Ad Widget . Ad Widget . Ad Widget . Ad Widget

ಹವಾಮಾನ ಇಲಾಖೆಯು ಇಂದು ಸಂಜೆಯೊಳಗೆ ಮಳೆಯ ಮುನ್ಸೂಚನೆ ನೀಡಿತ್ತು. ಮೆಜೆಸ್ಟಿಕ್, ಆರ್‌ ಟಿ ನಗರ, ಎಂ ಜಿ ರೋಡ್, ಕೆ ಆರ್ ಮಾರ್ಕೆಟ್, ಜಯನಗರ, ಜೆಜೆಆರ್ ನಗರ, ಟೌನ್ ಹಾಲ್ ಸುತ್ತಮುತ್ತ ಭಾರೀ ಮಳೆಯಾಗಿದೆ.

Ad Widget . Ad Widget .

ಸದಾಶಿವ ನಗರ, ಪ್ಯಾಲೇಸ್ ಗುಟ್ಟಹಳ್ಳಿ, ಮಲ್ಲೇಶ್ವರ, ವೈಯಾಲಿಕಾವಲ್, ಅರಮನೆ ಮೈದಾನ, ಶೇಷಾದ್ರಿಪುರ, ಯಶವಂತಪುರ ಸುತ್ತಮುತ್ತ ಆಲಿಕಲ್ಲು ಮಳೆಯಾಗುತ್ತಿದೆ. ವಿಧಾನಸೌಧ, ಕೆ.ಆರ್ ಸರ್ಕಲ್, ಕಾರ್ಪೋರೇಷನ್, ಟೌನ್ ಹಾಲ್ ಸುತ್ತಮುತ್ತ ಗುಡುಗು, ಮಿಂಚು ಸಹಿತ ಉತ್ತಮ ಮಳೆಯಾಗಿದೆ.

Leave a Comment

Your email address will not be published. Required fields are marked *