Ad Widget

108 ಅಂಬ್ಯುಲೆನ್ಸ್ ಸೇವೆ ಸಿಬ್ಬಂದಿ ಮುಷ್ಕರ ಅಂತ್ಯ| ಆರೋಗ್ಯ ಇಲಾಖೆಯಿಂದ ವೇತನ ಬಾಕಿ‌ಇಲ್ಲ ಎಂದು ಸ್ಪಷ್ಟನೆ ನೀಡಿದ ಆಯುಕ್ತರು

ಸಮಗ್ರ ನ್ಯೂಸ್: ಮೂರು ತಿಂಗಳ ಬಾಕಿ ವೇತನ ಪಾವತಿಸುವಂತೆ ಆಗ್ರಹಿಸಿ 108 ಆರೋಗ್ಯ ಕವಚದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಆಂಬ್ಯುಲೆನ್ಸ್‌ ಸಿಬಂದಿ ಹಮ್ಮಿಕೊಳ್ಳಲು ಉದ್ದೇಶಿಸಿದ್ದ ರಾಜ್ಯವ್ಯಾಪಿ ಮುಷ್ಕರದ ನಿರ್ಧಾರವನ್ನು ಮಂಗಳವಾರ ಕೈ ಬಿಟ್ಟಿದ್ದಾರೆ.

Ad Widget . Ad Widget . Ad Widget . Ad Widget . Ad Widget . Ad Widget

ಆರೋಗ್ಯ ಇಲಾಖೆ ಆಯುಕ್ತ ಡಾ| ರಣದೀಪ್‌ ನೇತೃತ್ವದಲ್ಲಿ ಜರಗಿದ ಸಭೆಯಲ್ಲಿ ಭಾಗವಹಿಸಿದ 108 ಸಿಬಂದಿ, ತಮ್ಮ ಸಮಸ್ಯೆಯನ್ನು ಸರಕಾರಕ್ಕೆ ಮನವರಿಕೆ ಮಾಡಿಕೊಟ್ಟರು.

Ad Widget . Ad Widget .

ಇದಕ್ಕೆ ಪ್ರತಿಯಾಗಿ ಸರಕಾರದ ನಿಲುವನ್ನು ಪ್ರತಿಪಾದಿಸಿದ ಆಯುಕ್ತರು, ಇಲಾಖೆಯಿಂದ ಯಾವುದೇ ವೇತನ ಬಾಕಿ ಇಲ್ಲ. ಸಿಬಂದಿಗೆ ವೇತನ ಪಾವತಿ ಮಾಡಬೇಕಿರುವ ಜಿವಿಕೆ ಇಎಂಆರ್‌ ಸಂಸ್ಥೆಯಿಂದ ಸಮಸ್ಯೆಗಳಾಗಿದ್ದರೆ, ಚರ್ಚಿಸಿ ಇತ್ಯರ್ಥಪಡಿಸಿಕೊಳ್ಳಬೇಕು. ಇದಕ್ಕೆ ಸರಕಾರ ಸಹಕಾರ ಕೊಡಲಿದೆ ಎಂದು ಸಮಜಾಯಿಷಿ ನೀಡಿದರು.

ಈ ಸಂಬಂಧ ಪ್ರತ್ಯೇಕ ಪ್ರಕಟನೆ ಹೊರಡಿಸಿರುವ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌, ಸರಕಾರದಿಂದ ಯಾವುದೇ ವೇತನ ಬಾಕಿ ಇಲ್ಲ. ಸಂಸ್ಥೆ ಜತೆಗೆ ಒಡಂಬಡಿಕೆಯ ಪ್ರಕಾರ ಸರಕಾರದಿಂದ ಕೊಡಬೇಕಾದ ಅನುದಾನವನ್ನು ಪಾವತಿಸಲಾಗಿದೆ. ಯೋಜನೆ ನಿರ್ವಹಿಸುತ್ತಿರುವ ಜಿವಿಕೆ ಇಎಂಆರ್‌ ಸಂಸ್ಥೆ ವೇತನ ಬಾಕಿಯಿರಿಸಿದೆ ಎಂದಿದ್ದಾರೆ.

Leave a Comment

Your email address will not be published. Required fields are marked *