ಮಾಜಿ ಸಚಿವ ಎಚ್.ಡಿ ರೇವಣ್ಣಗೆ ಬಿಗ್ ರಿಲೀಪ್| ಷರತ್ತು ಬದ್ದ ಜಾಮೀನು ಮಂಜೂರು ಮಾಡಿದ ಕೋರ್ಟ್

ಸಮಗ್ರ ನ್ಯೂಸ್: ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಜಿಲ್ಲೆಯ ಹೊಳೆ ನರಸೀಪುರ ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಷರತ್ತು ಬದ್ಧ ಜಾಮೀನು ಮಂಜೂರು ಮಾಡಲಾಗಿದೆ.

Ad Widget ... ..

ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಅವರು ಈ ಕುರಿತಂತೆ ಆದೇಶ ಹೊರಡಿಸಿದ್ದು, ಎಚ್ ಡಿ ರೇವಣ್ಣ ಅವರು 5 ಲಕ್ಷ ಬಾಂಡ್ ನೀಡಬೇಕು, ಸಾಕ್ಷಾಧಾರವನ್ನು ನಾಶಪಡಿಸಬಾರದು, ಎಸ್‌ಐಟಿ ತನಿಖೆಗೆ ಸಹಕರಿಸಬೇಕು ಎಂದು ಷರತ್ತು ಬದ್ಧ ಜಾಮೀನು ನೀಡಲಾಗಿದೆ.

Ad Widget

ಮಹಿಳೆ ಅಭರಣ ಪ್ರಕರಣದಲ್ಲಿ ಕಳೆದ ಐದು ದಿನಗಳಿಂದ ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ಇದ್ದರು ಇದೀಗ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಜಡ್ಜ್ ಸಂತೋಷ ಗಜಾನನ ಭಟ್ ಅವರು ಜಾಮೀನು ನೀಡಿ ಆದೇಶ ಹೊರಡಿಸಿದೆ.

Leave a Comment

Your email address will not be published. Required fields are marked *