May 2024

ಸ್ವೀಟ್ ಕೊಟ್ಟಿಲ್ಲ ಎಂದು ಮದುವೆ ಕ್ಯಾನ್ಸಲ್| ವರನ ಕಡೆಯವರಿಂದ ಕಿರಿಕ್

ಸಮಗ್ರ ನ್ಯೂಸ್: ಮದುವೆಯಲ್ಲಿ ಸ್ವೀಟ್ ಸಿಗಲಿಲ್ಲ ಎಂಬ ಕಾರಣಕ್ಕೆ ಕಲ್ಯಾಣ ಮಂಟಪದಲ್ಲೇ ಮದುವೆ ಮುರಿದುಬಿದ್ದ ವಿಚಿತ್ರ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆಯಲ್ಲಿ ನಡೆದಿದೆ. ಹಾನಗಲ್‌ನ ಯುವತಿ ಜೊತೆಗೆ ತುಮಕೂರಿನ ಹರ್ಷಿತ್ ಎಂಬಾತನೊಂದಿಗೆ ವಿವಾಹ ನಿಶ್ಚಯವಾಗಿತ್ತು. ವಧು-ವರರಿಬ್ಬರು ಮ್ಯಾಟ್ರಿಮೊನಿಯಲ್ಲಿ ಪರಿಚಯವಾಗಿ, ಯುವತಿಯನ್ನು ವಿವಾಹವಾಗಲು ಹರ್ಷಿತ್ ಒಪ್ಪಿಕೊಂಡಿದ್ದ. ಆದರೆ ಮದುವೆಯ ಹಿಂದಿನ ದಿನ ಚಪ್ಪರ ಶಾಸ್ತ್ರದಲ್ಲಿ ವರನ ಕಡೆಯವರಿಗೆ ಊಟದಲ್ಲಿ ಸಿಹಿತಿಂಡಿ ನೀಡಿಲ್ಲ ಎಂದು ಸಣ್ಣ ಗಲಾಟೆ ಮಾಡಿ ರಾತ್ರಿ ಮದುವೆಯೇ ಬೇಡ ಎಂದು ವರ ಉಂಗುರ ಕಳಚಿಕೊಟ್ಟಿದ್ದಾನೆ. ಘಟನೆಯಿಂದ […]

ಸ್ವೀಟ್ ಕೊಟ್ಟಿಲ್ಲ ಎಂದು ಮದುವೆ ಕ್ಯಾನ್ಸಲ್| ವರನ ಕಡೆಯವರಿಂದ ಕಿರಿಕ್ Read More »

ಪ್ರಜ್ವಲ್ ವಿಡಿಯೋ ಲೀಕ್ ಹಿಂದೆ ಇರುವುದು ಡಿ.ಕೆ ಶಿವಕುಮಾರ್| ದೇವರಾಜೇಗೌಡ ಸ್ಫೋಟಕ ಹೇಳಿಕೆ

ಸಮಗ್ರ ನ್ಯೂಸ್: ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಡಿಯೊ ಲೀಕ್‌ ಮಾಡಿದ್ದು ಯಾರು ಎಂಬ ಬಗ್ಗೆ ಬಿಜೆಪಿ ಮುಖಂಡ ಹಾಗೂ ವಕೀಲ ದೇವರಾಜೇಗೌಡ ಇಂದು ಮಹತ್ವದ ವಿಚಾರವನ್ನು ಹೊರಹಾಕಿದ್ದಾರೆ. ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು ಈ ಎಲ್ಲ ಪ್ರಕರಣದ ಹಿಂದೆ ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರ ಪಾತ್ರ ಇದೆ ಎಂಬ ಗಂಭೀರ ಆರೋಪ ಮಾಡಿದ್ದಾರೆ. ಅಷ್ಟೇ ಅಲ್ಲದೆ, ಡಿಕೆಶಿಯದ್ದು ಎನ್ನಲಾದ ಆಡಿಯೊವನ್ನು ಪ್ಲೇ ಮಾಡಿದ್ದಾರೆ. ಜತೆಗೆ ತಮಗೆ ಎಸ್‌ಐಟಿ ಮೇಲೆ ಯಾವುದೇ ನಂಬಿಕೆ

ಪ್ರಜ್ವಲ್ ವಿಡಿಯೋ ಲೀಕ್ ಹಿಂದೆ ಇರುವುದು ಡಿ.ಕೆ ಶಿವಕುಮಾರ್| ದೇವರಾಜೇಗೌಡ ಸ್ಫೋಟಕ ಹೇಳಿಕೆ Read More »

ಪ್ರಜ್ವಲ್ ರೇವಣ್ಣ ವಿಡಿಯೋ ಕುರಿತಂತೆ ಮೌನ ಮುರಿದ ಮೋದಿ| ಅಷ್ಟಕ್ಕೂ ಪ್ರಧಾನಿ‌ ಹೇಳಿದ್ದೇನು ಗೊತ್ತಾ?

ಸಮಗ್ರ ನ್ಯೂಸ್: ಪ್ರಜ್ವಲ್​ ರೇವಣ್ಣ ಅವರ ವಿರುದ್ಧ ಅಶ್ಲೀಲ ವಿಡಿಯೋ ಪ್ರಕರಣದ ಕುರಿತು ಖುದ್ದು ಪ್ರಧಾನಿ ನರೇಂದ್ರ ಮೋದಿ ಮೊದಲ ಬಾರಿಗೆ ಮಾತನಾಡಿದ್ದಾರೆ. ಪ್ರಜ್ವಲ್‌ ರೇವಣ್ಣ ಅವರಂತಹ ವ್ಯಕ್ತಿಗಳ ವಿರುದ್ಧ ನಾವು ಶೂನ್ಯ ಸಹಿಷ್ಣುರಾಗಿದ್ದೇವೆ. ಅಂತಹ ವ್ಯಕ್ತಿಗಳ ವಿರುದ್ಧ ಸಹನೆ ತೋರಬೇಕಾದ ಅಗತ್ಯ ಇಲ್ಲ. ನಿರ್ದಾಕ್ಷಿಣ್ಯವಾಗಿ ಕ್ರಮ ತೆಗೆದುಕೊಳ್ಳುತ್ತೇವೆ. ಆದರೆ ಕರ್ನಾಟಕದ ಕಾಂಗ್ರೆಸ್‌ ಸರ್ಕಾರವೇ ಜೆಡಿಎಸ್‌ ಸಂಸದ ಪ್ರಜ್ವಲ್ ರೇವಣ್ಣ ಅವರನ್ನ ದೇಶದಿಂದ ಹೊರಗೆ ಹೋಗಲು ಅವಕಾಶ ಮಾಡಿಕೊಟ್ಟಿದೆ ಎಂದು ಕಿಡಿಕಾರಿದ್ದಾರೆ. ಖಾಸಗಿ ಸುದ್ದಿವಾಹಿನಿಗೆ ನೀಡಿದ ಸಂದರ್ಶನದಲ್ಲಿ

ಪ್ರಜ್ವಲ್ ರೇವಣ್ಣ ವಿಡಿಯೋ ಕುರಿತಂತೆ ಮೌನ ಮುರಿದ ಮೋದಿ| ಅಷ್ಟಕ್ಕೂ ಪ್ರಧಾನಿ‌ ಹೇಳಿದ್ದೇನು ಗೊತ್ತಾ? Read More »

ಇಂದು ದೇಶದಲ್ಲಿ 3ನೇ ಹಂತದ ಲೋಕಸಭಾ ಚುನಾವಣೆ| ಹಲವು ಘಟಾನುಘಟಿಗಳ ಭವಿಷ್ಯ ನಿರ್ಧರಿಸಲಿದ್ದಾನೆ ಮತದಾರ

ಸಮಗ್ರ ನ್ಯೂಸ್: ದೇಶದಲ್ಲಿ ಇಂದು ಲೋಕಸಭೆ ಚುನಾವಣೆಯ ಮೂರನೇ ಹಂತದ ಮತದಾನ ನಡೆಯುತ್ತಿದ್ದು, ಕರ್ನಾಟಕದ 14 ಸೇರಿ 11 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 93 ಕ್ಷೇತ್ರಗಳ ಜನರು ತಮ್ಮ ಹಕ್ಕು ಚಲಾಯಿಸಲಿದ್ದಾರೆ. ಕರ್ನಾಟಕದ ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ, ರಾಯಚೂರು, ಬೀದರ್, ಕೊಪ್ಪಳ, ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ ಮತ್ತು ಶಿವಮೊಗ್ಗ ಕ್ಷೇತ್ರಗಳಲ್ಲಿ ಇಂದು ಮತದಾನ ನಡೆಯಲಿದೆ. 14 ಕ್ಷೇತ್ರಗಳಲ್ಲಿ ಒಟ್ಟು 2,59,17, 493 ಮತದಾರರಿದ್ದಾರೆ. ಈ ಪೈಕಿ 1,29,48,978 ಪುರುಷರು,

ಇಂದು ದೇಶದಲ್ಲಿ 3ನೇ ಹಂತದ ಲೋಕಸಭಾ ಚುನಾವಣೆ| ಹಲವು ಘಟಾನುಘಟಿಗಳ ಭವಿಷ್ಯ ನಿರ್ಧರಿಸಲಿದ್ದಾನೆ ಮತದಾರ Read More »

ಸುಳ್ಯ: ಮೊಬೈಲ್ ರಿಚಾರ್ಜ್ ಗೆ ಬಂದಿದ್ದ ಯುವತಿಯ ಫೋಟೋ ಕ್ಲಿಕ್ಕಿಸಿದ ಅನ್ಯಕೋಮಿನ ಯುವಕ| ದೂರು ದಾಖಲು

ಸಮಗ್ರ ನ್ಯೂಸ್: ಕರೆನ್ಸಿ ರಿಚಾರ್ಚ್‌ಗೆಂದು ಏರ್ ಟೆಲ್ ಮಳಿಗೆಗೆ ಬಂದ ಯುವತಿಯೊಬ್ಬಳ ಫೋಟೋ ಕ್ಲಿಕ್ಕಿಸಿದ ಅನ್ಯಕೋಮಿನ ಯುವಕನ ಮೇಲೆ ಯುವತಿಯ ಮನೆಯವರು ಪೊಲೀಸ್‌ಗೆ ದೂರು ನೀಡಿದ ಘಟನೆ ಸೋಮವಾರ ಸುಳ್ಯದ ಗಾಂಧಿನಗರದಲ್ಲಿ ನಡೆದಿದೆ. ಗಾಂಧಿನಗರದಲ್ಲಿರುವ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಹಿಂದೂ ಯುವತಿ ಮೊಬೈಲ್‌ ರಿಚಾರ್ಜ್‌ಗೆ ಬಂದ ಸಂದರ್ಭ ಕುಳಿತುಕೊಳ್ಳುವಂತೆ ಹೇಳಿದ ಯುವಕ ಆಕೆಯ ಅರಿವಿಗೆ ಬಾರದಂತೆ ಫೋಟೋ ಕ್ಲಿಕ್ಕಿಸಿದ್ದನು. ಇದನ್ನು ಗಮನಿಸಿದ ಯುವತಿ ಆಕ್ಷೇಪಿಸಿರುವುದಲ್ಲದೆ ಆತನ ಮೊಬೈಲನ್ನು ಕಸಿದು ನೋಡಿದಾಗ ತನ್ನ ಫೋಟೋ ಇರುವುದನ್ನು ನೋಡಿ ಗಾಬರಿಯಿಂದ

ಸುಳ್ಯ: ಮೊಬೈಲ್ ರಿಚಾರ್ಜ್ ಗೆ ಬಂದಿದ್ದ ಯುವತಿಯ ಫೋಟೋ ಕ್ಲಿಕ್ಕಿಸಿದ ಅನ್ಯಕೋಮಿನ ಯುವಕ| ದೂರು ದಾಖಲು Read More »

ಬೆಂಗಳೂರಿನಲ್ಲಿ ಬಿಸಿಲ‌ ಬೇಗೆಗೆ ತಂಪೆರೆದ ವರುಣ| ಗುಡುಗು, ಮಿಂಚು ಸಹಿತ ಹಲವೆಡೆ ಉತ್ತಮ ಮಳೆ

ಸಮಗ್ರ ನ್ಯೂಸ್: ಬಿಸಿಲ ಧಗೆಗೆ ಸುಸ್ತಾಗಿದ್ದ ಉದ್ಯಾನನಗರಿಯಲ್ಲಿ ಇಂದು ಮತ್ತೆ ವರುಣ ತಂಪೆರೆದಿದ್ದಾನೆ. ಮಧ್ಯಾಹ್ನ ನಂತರ ಸಿಲಿಕಾನ್ ಸಿಟಿಯಲ್ಲಿ ಮೋಡ ಕವಿದ ವಾತಾವರಣವಿದ್ದು ಸಂಜೆ ವೇಳೆ ಗುಡುಗು, ಮಿಂಚು, ಗಾಳಿ ಸಹಿತ ಧಾರಕಾರ ಮಳೆಯಾಗಿದೆ. ಹವಾಮಾನ ಇಲಾಖೆಯು ಇಂದು ಸಂಜೆಯೊಳಗೆ ಮಳೆಯ ಮುನ್ಸೂಚನೆ ನೀಡಿತ್ತು. ಮೆಜೆಸ್ಟಿಕ್, ಆರ್‌ ಟಿ ನಗರ, ಎಂ ಜಿ ರೋಡ್, ಕೆ ಆರ್ ಮಾರ್ಕೆಟ್, ಜಯನಗರ, ಜೆಜೆಆರ್ ನಗರ, ಟೌನ್ ಹಾಲ್ ಸುತ್ತಮುತ್ತ ಭಾರೀ ಮಳೆಯಾಗಿದೆ. ಸದಾಶಿವ ನಗರ, ಪ್ಯಾಲೇಸ್ ಗುಟ್ಟಹಳ್ಳಿ, ಮಲ್ಲೇಶ್ವರ,

ಬೆಂಗಳೂರಿನಲ್ಲಿ ಬಿಸಿಲ‌ ಬೇಗೆಗೆ ತಂಪೆರೆದ ವರುಣ| ಗುಡುಗು, ಮಿಂಚು ಸಹಿತ ಹಲವೆಡೆ ಉತ್ತಮ ಮಳೆ Read More »

ಬೀದರ್: ವಿಶೇಷ ಚೇತನರಿಗೆ ವಿಶೇಷ ಮತಗಟ್ಟೆಗಳ ಪರಿಚಯ

ಸಮಗ್ರ ನ್ಯೂಸ್‌ : ಬೆಂಗಳೂರಿನ ಅಂಗವಿಕಲರ ವ್ಯಕ್ತಿಗಳ ಹಕ್ಕುಗಳ ಅಧಿನಿಯಮ ರಾಜ್ಯ ಆಯುಕ್ತರಾದ ದಾಸ ಸೂರ್ಯವಂಶಿ ಅವರು ಇತ್ತೀಚಿಗೆ ಬೀದರ್ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡು ವಿಶೇಷ ಚೇತನರಿಗೆ ಇರುವ ವಿಶೇಷ ಮತಗಟ್ಟೆಗಳ ಪರಿಚಯ ಮಾಡಿದರು. ಪರಿಶೀಲನೆ ಸಮಯದಲ್ಲಿ ವಿಶೇಷ ಚೇತನರಿಗೆ ಇರುವ ಚುನಾವಣೆಯಲ್ಲಿ ಮತದಾನ ಮಾಡಲು ವಿಕಲಚೇತನ ಸ್ನೇಹಿ ರಾಂಪ್, ರಿಯಲಿಂಗ್, ಶೌಚಾಲಯ, ವ್ಹಿಲಚೇರ ಸೌಲಭ್ಯಗಳ ಪರಿಶೀಲನೆ ಮಾಡಿ ಕೇಲವು ತಿದ್ದುಪಡಿ ಸಲಹೆಯೊಂದಿಗೆ ಮೆಚ್ಚುಗೆ ಪಡೆದರು ಬೀದರ್ ಲೋಕಸಭಾ ಕೇಂದ್ರ ಹಾಗೂ ವಿಭಾಗದಲ್ಲಿ ಬೀದರ್ ಲೋಕಸಭಾ ಕ್ಷೇತ್ರಗಳ

ಬೀದರ್: ವಿಶೇಷ ಚೇತನರಿಗೆ ವಿಶೇಷ ಮತಗಟ್ಟೆಗಳ ಪರಿಚಯ Read More »

ಮತ್ತೆ ಬೆಂಗಳೂರಿಗೆ ತಂಪೆರೆದ ವರುಣ| ಗುಡುಗು ಸಹಿತ ಧಾರಕಾರ ಮಳೆ

ಸಮಗ್ರ ನ್ಯೂಸ್: ಇಂದು ಹವಾಮಾನ ಇಲಾಖೆ ಮುನ್ಸೂಚನೆಯಂತೆ ಬೆಂಗಳೂರಿಗೆ ವರುಣ ತಂಪೆರೆದಿದ್ದಾನೆ. ಬೆಂಗಳೂರು ನಗರದೆಲ್ಲೆಡೆ ಆಲಿಕಲ್ಲು ಜೊತೆಗೆ ಮಳೆರಾಯ ಆರ್ಭಟಿಸಿದ್ದಾನೆ. ಮಳೆ ಜೊತೆಗೆ ಗಡುಗು, ಗಾಳಿಯ ಪ್ರಮಾಣ ಕೂಡ ಜಾಸ್ತಿ ಇತ್ತು. ಬಿಸಿಲಿನಿಂದ ಬೇಸತ್ತಿದ್ದ ರಾಜಧಾನಿ ಜನರಿಗೆ ವರುಣ ಮತ್ತೆ ಎಂಟ್ರಿ ನೀಡಿದ್ದು ಸಂತಸ ತಂದಿದೆ. ಬೆಂಗಳೂರಿನ ಚಾಲುಕ್ಯ ಸರ್ಕಲ್, ಪ್ಯಾಲೇಸ್ ರಸ್ತೆ ಸುತ್ತಮುತ್ತ, ಶಾಂತಿನಗರ, ರಿಚ್ಮಂಡ್ ಸರ್ಕಲ್, ಕೆಆರ್ ಮಾರ್ಕೆಟ್, ಕಾರ್ಪೊರೇಷನ್, ರಾಜಾಜಿನಗರ, ಮೆಜೆಸ್ಟಿಕ್, ರೇಸ್ ಕೋರ್ಸ್, ಕಾರ್ಪೋರೇಷನ್, ಮಹಾಲಕ್ಷ್ಮಿಲೇಔಟ್, ಬಸವೇಶ್ವರನಗರ, ಸದಾಶಿವನಗರ, ಬ್ಯಾಟರಾಯನಪುರ ಮತ್ತು

ಮತ್ತೆ ಬೆಂಗಳೂರಿಗೆ ತಂಪೆರೆದ ವರುಣ| ಗುಡುಗು ಸಹಿತ ಧಾರಕಾರ ಮಳೆ Read More »

ಚುನಾವಣಾ ಕರ್ತವ್ಯಕ್ಕೆ ತೆರಳುತ್ತಿದ್ದ ಶಿಕ್ಷಕ ಹೃದಯಾಘಾತದಿಂದ ಸಾವು

ಸಮಗ್ರ ನ್ಯೂಸ್: ರಾಜ್ಯದಲ್ಲಿ ನಾಳೆ ಅಂದರೆ ಮೇ 7ರಂದು ಎರಡನೇ ಹಂತದ ಲೋಕಸಭಾ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಅಂತಿಮ ಹಂತದ ಸಿದ್ಧತೆ ನಡೆಯುತ್ತಿದೆ. ಈ ನಡುವೆ ಚುನಾವಣಾ ಕರ್ತವ್ಯದ ಮೇಲೆ ತೆರಳುತ್ತಿದ್ದ ಶಿಕ್ಷಕರೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ. ಜಮಖಂಡಿ ತಾಲೂಕಿನ ಬಿದಿರಿಯ ಜನತಾ ಫ್ಲಾಟ್‌ನ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕ ಜಿ.ಡಿ‌.ಸಿದ್ದಾಪುರ ಮೃತರು. ಇವರು ಬಸ್‌ನಲ್ಲಿ ಜಮಖಂಡಿಯಿಂದ ಮುಧೋಳಕ್ಕೆ ಹೋಗುವಾಗ ಹೃದಯಾಘಾತವಾಗಿದ್ದರಿಂದ ಕೊನೆಯುಸಿರೆದಿದ್ದಾರೆ. ಇವರು ಮುಧೋಳ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣೆಗೆ ಶಿಕ್ಷಕ ನಿಯೋಜನೆಗೊಂಡಿದ್ದರು.

ಚುನಾವಣಾ ಕರ್ತವ್ಯಕ್ಕೆ ತೆರಳುತ್ತಿದ್ದ ಶಿಕ್ಷಕ ಹೃದಯಾಘಾತದಿಂದ ಸಾವು Read More »

ಮಂಡ್ಯದಲ್ಲಿ ನಿಲ್ಲದ ಭ್ರೂಣ ಹತ್ಯೆ ಪ್ರಕರಣ|ಆರೋಗ್ಯ ಇಲಾಖೆ ವಸತಿಗೃಹದಲ್ಲೆ ಈ ಕೃತ್ಯ..!

ಸಮಗ್ರ ನ್ಯೂಸ್: ಇತ್ತಿಚೇಗಷ್ಟೆ ಹೆಣ್ಣು ಭ್ರೂಣ ಹತ್ಯೆ ಪ್ರಕರಣ ರಾಜ್ಯಾದ್ಯಂತ ಸದ್ದು ಮಾಡಿತ್ತು. ಆದರೆ ಅದೇ ಮಂಡ್ಯದ ಪಾಂಡವಪುರದ ಹೆಲ್ತ್ ಕ್ವಾರ್ಟರ್ಸ್‌ನಲ್ಲಿ ಹೆಣ್ಣು ಭ್ರೂಣ ಹತ್ಯೆ ಮಾಡುತ್ತಿದ್ದಾಗಲೇ ಅಧಿಕಾರಿಗಳು ದಾಳಿ ನಡೆಸಿ, ಮೂವರನ್ನು ಬಂಧಿಸಿರುವ ಘಟನೆ ನಡೆದಿದೆ. ಪಾಂಡವಪುರದ ಹೆಲ್ತ್ ಕ್ವಾರ್ಟರ್ಸ್‌ ಮೇಲೆ ಖಚಿತ ಮಾಹಿತಿಗಳೊಂದಿಗೆ ಭಾನುವಾರ ತಡರಾತ್ರಿ ಮಂಡ್ಯ ಡಿಎಚ್‌ಒ ಮೋಹನ್ ನೇತೃತ್ವದಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದರು. ಆ ವೇಳೆಗೆ ಗರ್ಭಪಾತ ಮಾಡಿಸಲು ಗರ್ಭಿಣಿಗೆ ಔಷಧ ನೀಡಲಾಗಿತ್ತು, ಇದರಿಂದ ವೈದ್ಯರು ಎಷ್ಟೇ ಪ್ರಯತ್ನಿಸಿದರೂ ಮಗುವನ್ನು ಉಳಿಸಲು

ಮಂಡ್ಯದಲ್ಲಿ ನಿಲ್ಲದ ಭ್ರೂಣ ಹತ್ಯೆ ಪ್ರಕರಣ|ಆರೋಗ್ಯ ಇಲಾಖೆ ವಸತಿಗೃಹದಲ್ಲೆ ಈ ಕೃತ್ಯ..! Read More »