May 2024

ಟಿ 20 ವಿಶ್ವಕಪ್/ ವೈರಲ್ ಆದ ಭಾರತ ತಂಡದ ಹೊಸ ಜೆರ್ಸಿ

ಸಮಗ್ರ ನ್ಯೂಸ್: ಟಿ 20 ವಿಶ್ವಕಪ್ ಗೆ ವೇದಿಕೆ ಸಿದ್ದಗೊಂಡಿದ್ದು, ಭಾರತ ತಂಡವನ್ನು ಪ್ರಕಟ ಮಾಡಲಾಗಿದೆ. ಇದರ ಬೆನ್ನಲ್ಲೇ ಭಾರತ ನೂತನ ಜೆರ್ಸಿ ಬಿಡುಗಡೆಯಾಗಿದ್ದು, ಇದೀಗ ವೈರಲ್ ಆಗುತ್ತಿದೆ. ಹೊಸ ಜೆರ್ಸಿಯ ಫೋಟೊವನ್ನು ಟಾಟಾ ಐಪಿಎಲ್ ಕಾಮೆಂಟ್ರಿ ತನ್ನ ಅಧಿಕೃತ ಟ್ವಿಟರ್ ಎಕ್ಸ್ ನಲ್ಲಿ ಹಂಚಿಕೊಂಡಿದೆ. ಜತೆಗೆ ಇದೇ ಜೆರ್ಸಿಯಲ್ಲಿ ಭಾರತ ಟಿ20 ವಿಶ್ವಕಪ್‌ ಆಡಲಿದೆ ಎಂದು ಬರೆದುಕೊಂಡಿದೆ. ವೈರಲ್ ಆಗಿರುವ ಟೀಮ್ ಇಂಡಿಯಾದ ಜೆರ್ಸಿ ನೀಲಿ ಮತ್ತು ಕೇಸರಿ ಬಣ್ಣದ ಮಿಶ್ರಿತ ಕಂಡುಬಂದಿದೆ. ಜತೆಗೆ ಬಿಳಿ […]

ಟಿ 20 ವಿಶ್ವಕಪ್/ ವೈರಲ್ ಆದ ಭಾರತ ತಂಡದ ಹೊಸ ಜೆರ್ಸಿ Read More »

ಪಶ್ಚಿಮ ಬಂಗಾಳ – ಬಾಂಬ್‌ ಸ್ಫೋಟ : ಮಗು ಮೃತ್ಯು, ಇಬ್ಬರು ಗಂಭೀರ

ಸಮಗ್ರ ನ್ಯೂಸ್‌ : ರಸ್ತೆ ಬದಿಯಲ್ಲಿ ಆಟವಾಡುತ್ತಿದ್ದ ಮಕ್ಕಳು ಆಕಸ್ಮಿಕವಾಗಿ ಕಚ್ಚಾ ಬಾಂಬ್‌ ಅನ್ನು ಚೆಂಡು ಎಂದು ಭಾವಿಸಿ ಎತ್ತಿಕೊಂಡಿದ್ದಾರೆ. ಆಗ ಅದು ಸ್ಫೋಟಗೊಂಡ ಘಟನೆ ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ಪಾಂಡುವಾ ಪ್ರದೇಶದಲ್ಲಿ ನಡೆದಿದೆ. ಘಟನೆಯಲ್ಲಿ ಮಗುವೊಂದು ಮೃತಪಟ್ಟಿದ್ದು, ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ಘಟನೆಯಲ್ಲಿ ಪುಟ್ಟ ಕಂದಮ್ಮ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದು, ಗಾಯಗೊಂಡ ಇಬ್ಬರಲ್ಲಿ ಒಬ್ಬ ತನ್ನ ಬಲಗೈಯನ್ನೇ ಕಳೆದುಕೊಂಡಿದ್ದಾನೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಈ ಬಗ್ಗೆ ಮಾಹಿತಿ ಸಿಗುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಧಾವಿಸಿ ತನಿಖೆ

ಪಶ್ಚಿಮ ಬಂಗಾಳ – ಬಾಂಬ್‌ ಸ್ಫೋಟ : ಮಗು ಮೃತ್ಯು, ಇಬ್ಬರು ಗಂಭೀರ Read More »

ಬೀದರ್: ಅಕ್ರಮವಾಗಿ ಸಾರಾಯಿ ಸಾಗಾಟ- 4.40 ಲಕ್ಷ ರೂಪಾಯಿ ಮೌಲ್ಯದ ಮದ್ಯ ವಶಕ್ಕೆ

ಸಮಗ್ರ ನ್ಯೂಸ್‌ : ಅಕ್ರಮವಾಗಿ ಸಾರಾಯಿ ಸಾಗಿಸುತ್ತಿದ್ದ ವೇಳೆ ಅಬಕಾರಿ ಇಲಾಖೆಯಿಂದ ಭರ್ಜರಿ ಕಾರ್ಯಚರಣೆ ನಡೆಸಿದ್ದು, ಮತದಾರರಿಗೆ ಹಂಚಲು ತಂದಿದ್ದ 4.40 ಲಕ್ಷ ರೂಪಾಯಿ ಮೌಲ್ಯದ ಅಕ್ರಮ ಮದ್ಯವನ್ನು ಅಬಕಾರಿ ಇಲಾಖೆಯ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಬೀದರ್ ಲೋಕಸಭೆ ಕ್ಷೇತ್ರದಲ್ಲಿ ಮತದಾರರಿಗೆ ಹಂಚಲು ತಂದಿದ್ದರು ಅಕ್ರಮ ಮದ್ಯ ವಶಕ್ಕೆ ಪಡೆಯಲಾಗಿದೆ. ಹೂಲಸೂರಿನಿಂದ ಬಸವಕಲ್ಯಾಣಕ್ಕೆ ಹುಂಡೈ ಕಾರ್ನಲ್ಲಿ ಮದ್ಯ ಸಾಗಿಸಲಾಗುತ್ತಿದ್ದಾಗ ಖಚಿತ ಮಾಹಿತಿ ಮೇರೆಗೆ ಅಬಕಾರಿ ಪೋಲಿಸರು ಕಾರ್ ತಡೆದು ಪರಿಶೀಲನೆ ನಡೆಸಿದಾಗ ಮದ್ಯ ಪತ್ತೆಯಾಗಿದೆ. ಕಾರ್ನಲ್ಲಿ ಎರಡು‌

ಬೀದರ್: ಅಕ್ರಮವಾಗಿ ಸಾರಾಯಿ ಸಾಗಾಟ- 4.40 ಲಕ್ಷ ರೂಪಾಯಿ ಮೌಲ್ಯದ ಮದ್ಯ ವಶಕ್ಕೆ Read More »

ಚಿಕ್ಕಮಗಳೂರು: ವಿದ್ಯುತ್‌ ಕಂಬಕ್ಕೆ ಬೈಕ್‌ ಡಿಕ್ಕಿ- ಇಬ್ಬರು ಸ್ಥಳದಲ್ಲೇ ಸಾವು

ಸಮಗ್ರ ನ್ಯೂಸ್‌ : ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರಿನ ಎನ್‌ಆರ್ ಪುರ ತಾಲೂಕಿನ ಕರಗುಂದ ಗ್ರಾಮದ ಬಳಿ ನಡೆದಿದೆ. ಬೈಕ್‌ ಸವಾರರು ವೇಗವಾಗಿ ಬಂದು ವಿದ್ಯುತ್ ಕಂಬಕ್ಕೆ ಗುದ್ದಿದ್ದಾರೆ. ಪರಿಣಾಮ ಬೈಕ್‌ನಿಂದ ಹಾರಿ ಕೆಳಗೆ ಬಿದ್ದಿದ್ದು, ತಲೆಗೆ ಗಂಭೀರ ಪೆಟ್ಟಾಗಿದೆ.ಇದರಿಂದಾಗಿ ಹೊರನಾಡು ಗ್ರಾಮದ ಉಮೇಶ್, ಮುಂಡಗದ ಮನೆ ಗ್ರಾಮದ ಸುನಿಲ್ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೂಡಿಗೆರೆ ತಾಲೂಕಿನ ಮುಂಡಗದ ಮನೆ ಗ್ರಾಮದ ಉಮೇಶ್, ಸುನೀಲನನ್ನು ಶಿವಮೊಗ್ಗಕ್ಕೆ ಬಿಡಲು ಹೋಗುತ್ತಿದ್ದರು.

ಚಿಕ್ಕಮಗಳೂರು: ವಿದ್ಯುತ್‌ ಕಂಬಕ್ಕೆ ಬೈಕ್‌ ಡಿಕ್ಕಿ- ಇಬ್ಬರು ಸ್ಥಳದಲ್ಲೇ ಸಾವು Read More »

ಮೈಸೂರು : ಸ್ಟೇರಿಂಗ್‌ ಕಟ್ ಆಗಿ ಗದ್ದೆಗೆ ನುಗ್ಗಿದ ಬಸ್‌ – 30 ಪ್ರಯಾಣಿಕರಿಗೆ ಗಾಯ

ಸಮಗ್ರ ನ್ಯೂಸ್‌ : ಕೆಎಸ್‌ಆರ್‌ಟಿಸಿ ಬಸ್‌ವೊಂದರ ಸ್ಟೇರಿಂಗ್‌ ಕಟ್ ಆಗಿ ಚಾಲಕನ ನಿಯಂತ್ರಣ ತಪ್ಪಿ ಗದ್ದೆಗೆ ನುಗ್ಗಿದ ಘಟನೆ ಮೈಸೂರು ಜಿಲ್ಲೆಯ ಕೆ.ಆರ್.ನಗರ ತಾಲೂಕಿನ ಕೆಸ್ತೂರು ಗೇಟ್ ಬಳಿ ನಡೆದಿದೆ. ಘಟನೆಯಲ್ಲಿ 30 ಪ್ರಯಾಣಿಕರು ಗಾಯಗೊಂಡಿದ್ದು, ಐವರು ಗಂಭೀರ ಗಾಯಗೊಂಡಿದ್ದಾರೆ. ಬಸ್ಸಿನಲ್ಲಿದ್ದ ಎಲ್ಲಾ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳನ್ನು ಕೆ.ಆರ್.ನಗರ ಮತ್ತು ಮೈಸೂರಿನ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ. ಕೆಆರ್‌ನಗರ ಡಿಪೋಗೆ ಸೇರಿದ ಬಸ್ ಕೇರಳಾಪುರದಿಂದ ಸಾಲಿಗ್ರಾಮ, ಚುಂಚನಕಟ್ಟೆ ಮಾರ್ಗವಾಗಿ ಮೈಸೂರಿಗೆ ತೆರಳುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಪ್ರಕರಣ

ಮೈಸೂರು : ಸ್ಟೇರಿಂಗ್‌ ಕಟ್ ಆಗಿ ಗದ್ದೆಗೆ ನುಗ್ಗಿದ ಬಸ್‌ – 30 ಪ್ರಯಾಣಿಕರಿಗೆ ಗಾಯ Read More »

ಎಚ್.ಡಿ ರೇವಣ್ಣ, ಪ್ರಜ್ವಲ್ ಬಳಿಕ ಇದೀಗ ಭವಾನಿಗೂ ಸಂಕಷ್ಟ…? ಎರಡು ಕೇಸ್ ನಲ್ಲಿ ಭವಾನಿ ಹೆಸರು ಉಲ್ಲೇಖ

ಸಮಗ್ರ ನ್ಯೂಸ್: ಪ್ರಜ್ವಲ್ ರೇವಣ್ಣಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಪ್ರಜ್ವಲ್‌ ತಂದೆ, ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರನ್ನು ಎಸ್‌ಐಟಿ ವಶಕ್ಕೆ ಪಡೆದು ವಿಚಾರಣೆಯನ್ನು ತೀವ್ರಗೊಳಿಸಿದೆ. ಈ ಮಧ್ಯೆ ಪ್ರಕರಣದಲ್ಲಿ ರೇವಣ್ಣ ಅವರ ಪತ್ನಿ ಭವಾನಿ ಹೆಸರೂ ಕೇಳಿ ಬಂದಿದ್ದು, ಅವರಿಗೂ ಸಂಕಷ್ಟ ಎದುರಾಗಲಿದೆ ಎರಡು ಕೇಸ್‌ನಲ್ಲಿ ಸಂತ್ರಸ್ತೆಯರು ಭವಾನಿ ರೇವಣ್ಣ ಅವರ ಹೆಸರು ಉಲ್ಲೇಖಿಸಿದ್ದಾರೆ. ಲೈಂಗಿಕ ಕಿರುಕುಳ ಆರೋಪ ಮತ್ತು ಅಪಹರಣ ಪ್ರಕರಣದಲ್ಲಿ ಭವಾನಿ ರೇವಣ್ಣ ಹೆಸರು ಕೇಳಿ ಬಂದಿದೆ. ಅದರಲ್ಲಿಯೂ

ಎಚ್.ಡಿ ರೇವಣ್ಣ, ಪ್ರಜ್ವಲ್ ಬಳಿಕ ಇದೀಗ ಭವಾನಿಗೂ ಸಂಕಷ್ಟ…? ಎರಡು ಕೇಸ್ ನಲ್ಲಿ ಭವಾನಿ ಹೆಸರು ಉಲ್ಲೇಖ Read More »

ಸುಳ್ಯ: ಪರಿವಾರಕಾನದಲ್ಲಿ ಹೋಟೆಲ್ ವೃಷಭ ಶುಭಾರಂಭ

ಸಮಗ್ರ ನ್ಯೂಸ್: ವಿನೋದ್ ಸರಳಿಕುಂಜ ರವರ ಮಾಲಕತ್ವದ ಹೋಟೆಲ್ ವೃಷಭ ಮೇ.3 ರಂದು ಮಾಣಿ ಮೈಸೂರು ಹೆದ್ದಾರಿಯ ಪರಿವಾರಕಾನ ಶುಭಾರಂಭಗೊಂಡಿತು. ಬೆಳಗ್ಗೆ ಅರ್ಚಕ ಶಿವಪ್ರಸಾದ್ ಕೆದಿಲಾಯ ನಾಗಪಟ್ಟಣ ರವರ ನೇತೃತ್ವದಲ್ಲಿ ಗಣಪತಿ ಹವನ ನೆರವೇರಿತು. ಹಿರಿಯರಾದ ವೀಣಾವತಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಆಲೆಟ್ಟಿ ಪಂಚಾಯತ್ ಸದಸ್ಯ ರತೀಶನ್ ಆರಂಬೂರು ಶುಭ ಹಾರೈಸಿ, ಜಯರಾಮ ಶಾಂತಿನಗರ, ಶಿವಾನಂದ ಉಪ್ಪಳ, ವಿಜಯಶ್ರೀ, ವಾಣಿಶ್ರೀ ಹಾಗೂ ಬಂಧು-ಮಿತ್ರರು ಉಪಸ್ಥಿತರಿದ್ದರು. ಹೋಟೆಲ್ ನಲ್ಲಿ ಮಾಂಸಹಾರಿ ಮತ್ತು ಸಸ್ಯಹಾರಿ ಊಟ ಉಪಹಾರದ ವ್ಯವಸ್ಥೆ ಇದ್ದು,

ಸುಳ್ಯ: ಪರಿವಾರಕಾನದಲ್ಲಿ ಹೋಟೆಲ್ ವೃಷಭ ಶುಭಾರಂಭ Read More »

ರಾಷ್ಟ್ರೀಯ ತನಿಖಾ ಸಂಸ್ಥೆಯಲ್ಲಿ ಉದ್ಯೋಗವಕಾಶ, ಈಗಲೇ ಅಪ್ಲೈ ಮಾಡಿ

ಸಮಗ್ರ ಉದ್ಯೋಗ: ರಾಷ್ಟ್ರೀಯ ತನಿಖಾ ಸಂಸ್ಥೆ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 10 ಇನ್ವೆಸ್ಟಿಗೇಶನ್ ಎಕ್ಸ್​​ಪರ್ಟ್​​ (ಕನ್ಸಲ್ಟೆಂಟ್​) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಮೇ 17, 2024 ಸಂದರ್ಶನ ನಡೆಯಲಿದ್ದು, ಆಸಕ್ತರು ಪಾಲ್ಗೊಳ್ಳಬಹುದು. ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ವಿದ್ಯಾರ್ಹತೆ:ರಾಷ್ಟ್ರೀಯ ತನಿಖಾ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ ಪೂರ್ಣಗೊಳಿಸಿರಬೇಕು. ವಯೋಮಿತಿ:ರಾಷ್ಟ್ರೀಯ ತನಿಖಾ

ರಾಷ್ಟ್ರೀಯ ತನಿಖಾ ಸಂಸ್ಥೆಯಲ್ಲಿ ಉದ್ಯೋಗವಕಾಶ, ಈಗಲೇ ಅಪ್ಲೈ ಮಾಡಿ Read More »

ರಾಜ್ಯಾದ್ಯಂತ‌ ಮೇ.10ರವರೆಗೆ ಬಿಸಿಗಾಳಿ, ಆಲಿಕಲ್ಲು ಮಳೆ, ಗುಡುಗು ಸಿಡಿಲು| ಆರೆಂಜ್ ಅಲರ್ಟ್‌ ನೀಡಿದ ಹವಾಮಾನ ಇಲಾಖೆ

ಸಮಗ್ರ ನ್ಯೂಸ್: ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಇಂದಿನಿಂದ 5 ದಿನ ರಾಜ್ಯದಲ್ಲಿ ನಿರೀಕ್ಷೆಗೂ ಮೀರಿ ಮಳೆಯಾಗುವ ಸಾಧ್ಯತೆಯಿದೆ. ಮೇ 6 ರಿಂದ 10 ರವರೆಗೆ ರಾಜ್ಯದಲ್ಲಿ ಉತ್ತಮ ಮಳೆಯಾಗಲಿದೆ. ಕರಾವಳಿ ಭಾಗದಲ್ಲಿ ಗುಡುಗು ಮಿಂಚು ಸಹಿತ ಭಾರೀ ಮಳೆ ಸಾಧ್ಯತೆಯಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಹಲವು ಕಡೆಗಳಲ್ಲಿ ಶಾಖದ ಅಲೆ ಹೆಚ್ಚಿರಲಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು ಮಿಂಚಿನೊಂದಿಗೆ ಮಳೆಯಾಗಲಿದ್ದು, ಕೆಲವು ಕಡೆಗಳಲ್ಲಿ ಆಲಿಕಲ್ಲು ಮಳೆ ಸುರಿಯಲಿದೆ. ಇನ್ನು ಮೇ 10 ರವರೆಗೆ ರಾಜ್ಯದಲ್ಲಿ

ರಾಜ್ಯಾದ್ಯಂತ‌ ಮೇ.10ರವರೆಗೆ ಬಿಸಿಗಾಳಿ, ಆಲಿಕಲ್ಲು ಮಳೆ, ಗುಡುಗು ಸಿಡಿಲು| ಆರೆಂಜ್ ಅಲರ್ಟ್‌ ನೀಡಿದ ಹವಾಮಾನ ಇಲಾಖೆ Read More »

ಇಂದು (ಮೇ.6) ರಾತ್ರಿಯಿಂದ‌ 108 ಅಂಬ್ಯುಲೆನ್ಸ್ ಸೇವೆಯಲ್ಲಿ ವ್ಯತ್ಯಯ| ಮುಷ್ಕರಕ್ಕಿಳಿದ ಆರೋಗ್ಯ ಕವಚ ಸಿಬ್ಬಂದಿ

ಸಮಗ್ರ ನ್ಯೂಸ್: ಕಳೆದ ಮೂರು ತಿಂಗಳಿನಿಂದ ವೇತನ ನೀಡದ ಕಾರಣ ಆರೋಗ್ಯ ಕವಚ 108 ಆಂಬುಲೆನ್ಸ್ ಸಿಬ್ಬಂದಿ ಮುಷ್ಕರಕ್ಕೆ ಸಜ್ಜಾಗಿದ್ದಾರೆ. ಮೇ 6ರ ರಾತ್ರಿ 8 ಗಂಟೆಯಿಂದ ರಾಜ್ಯವ್ಯಾಪಿ ಆಂಬುಲೆನ್ಸ್ ಸೇವೆಗಳನ್ನು ಬಂದ್ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ. ಕಳೆದ ಫೆಬ್ರವರಿ, ಮಾರ್ಚ್, ಏಪ್ರಿಲ್ ತಿಂಗಳ ವೇತನ ನೀಡದೆ ಬಾಕಿ ಉಳಿಸಿಕೊಳ್ಳಲಾಗಿದೆ. ಜಿವಿಕೆ ಸಂಸ್ಥೆ ಈಗಾಗಲೇ ಡಿಸೆಂಬರ್, ಜನವರಿ ತಿಂಗಳ ವೇತನವನ್ನು 30 ಸಾವಿರ ರೂ. ಕಡಿತ ಮಾಡಿ ಕೇವಲ 13,000 ರೂ. ನೀಡಿದೆ. ಹೀಗಾಗಿ ಸೋಮವಾರ ಸಂಜೆಯೊಳಗೆ

ಇಂದು (ಮೇ.6) ರಾತ್ರಿಯಿಂದ‌ 108 ಅಂಬ್ಯುಲೆನ್ಸ್ ಸೇವೆಯಲ್ಲಿ ವ್ಯತ್ಯಯ| ಮುಷ್ಕರಕ್ಕಿಳಿದ ಆರೋಗ್ಯ ಕವಚ ಸಿಬ್ಬಂದಿ Read More »