May 2024

ಹಾಸನ ಕಾಮಕಾಂಡ ವಿಡಿಯೋ ಹಂಚಿಕೊಂಡರೆ ಕಠಿಣ ಕ್ರಮ| ಎಸ್ಐಟಿ‌ಯಿಂದ ಮಹತ್ವದ ಆದೇಶ

ಸಮಗ್ರ ನ್ಯೂಸ್: ಹಾಸನದ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಯಾವುದೇ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡರೆ ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಶಿಕ್ಷಾರ್ಹ ಅಪರಾಧವಾಗುತ್ತದೆ ಎಂದು ಎಸ್ ಐಟಿ ಅಧಿಕಾರಿಗಳು ತಿಳಿಸಿದ್ದಾರೆ. ಸಾಮಾಝಿಕ ಜಾಲತಾಣದಲ್ಲಿ ಹಾಸನದ ಅಶ್ಲೀಲ ವಿಡಿಯೋ ಹಂಚಿಕೊಂಡರೆ ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಶಿಕ್ಷಾರ್ಹ ಅಪರಾಧವಾಗುತ್ತದೆ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಯಾವುದೇ ಸಂತ್ರಸ್ತರ ಗುರುತನ್ನು ಬಹಿರಂಗಪಡಿಸುವ ಕೆಲಸವನ್ನು ಮಾಧ್ಯಮ ಸಂಸ್ಥೆಗಳು, ವ್ಯಕ್ತಿಗಳು ಅಥವಾ ಸಂಘ ಸಂಸ್ಥೆಗಳು ಅಥವಾ ಇನ್ಯಾರೇ […]

ಹಾಸನ ಕಾಮಕಾಂಡ ವಿಡಿಯೋ ಹಂಚಿಕೊಂಡರೆ ಕಠಿಣ ಕ್ರಮ| ಎಸ್ಐಟಿ‌ಯಿಂದ ಮಹತ್ವದ ಆದೇಶ Read More »

ಚಿತ್ರದುರ್ಗ : ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ-ಇಬ್ಬರು ವೃದ್ಧರು ಮೃತ್ಯು

ಸಮಗ್ರ ನ್ಯೂಸ್ : ಚಾಲಕನ ನಿಯಂತ್ರಣ ತಪ್ಪಿ ಇಂಡಿಕಾ ಕಾರು ಚರಂಡಿಗೆ ಪಲ್ಟಿಯಾಗಿ, ಡಿಕ್ಕಿ ರಭಸಕ್ಕೆ ಕಾರು ಛಿದ್ರವಾಗಿದ್ದು, ಕಾರಿನಲ್ಲಿದ್ದ ಇಬ್ಬರು ವೃದ್ಧರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ದಾವಣಗೆರೆ ತಾಲೂಕಿನ ಹುಣಸೇಕಟ್ಟೆ ಗ್ರಾಮದ ಪಕ್ಕದಲ್ಲಿರುವ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ. ಹರಿಹರದ ಸಾರಥಿ ಗ್ರಾಮದ ಕೊಟ್ರೇಶಪ್ಪ (65), ಹುಬ್ಬಳ್ಳಿಯ ಪುಷ್ಟ (55) ಮೃತ ದುರ್ದೈವಿಗಳು. ಘಟನೆಯಲ್ಲಿ ನಾಲ್ವರು ಗಂಭೀರ ಗಾಯಗೊಂಡಿದ್ದಾರೆ. ಚಿತ್ರದುರ್ಗದಲ್ಲಿ ಮದುವೆ ಮುಗಿಸಿಕೊಂಡು ವಾಪಸ್‌ ಬರುವಾಗ ಈ ದುರ್ಘಟನೆ ನಡೆದಿದೆ. ಅತಿ ವೇಗದ ಚಾಲನೆಯಿಂದ‌ಲೇ ನಿಯಂತ್ರಣ

ಚಿತ್ರದುರ್ಗ : ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ-ಇಬ್ಬರು ವೃದ್ಧರು ಮೃತ್ಯು Read More »

ದಕ್ಷಿಣ ಬ್ರೆಜಿಲ್ ನಲ್ಲಿ ಜಲಪ್ರವಾಹ/ 78ಕ್ಕೆ ಏರಿಕೆಯಾದ ಸಾವಿನ ಸಂಖ್ಯೆ

ಸಮಗ್ರ ನ್ಯೂಸ್: ದಕ್ಷಿಣ ಬ್ರೆಜಿಲ್ ನಲ್ಲಿ ಭಾರೀ ಮಳೆಗೆ ಉಂಟಾಗಿರುವ ಪ್ರವಾಹದ ತೀವ್ರತೆಗೆ ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಬ್ರೆಜಿಲ್‍ನ ದಕ್ಷಿಣ ರಾಜ್ಯವಾದ ರಿಯೊ ಗ್ರಾಂಡೆ ಡೊ ಸುಲ್‍ನಲ್ಲಿ ಉಂಟಾದ ಪ್ರವಾಹಕ್ಕೆ ಸಿಕ್ಕಿ ಸುಮಾರು 105 ಮಂದಿ ಕಾಣೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 1,15,000ಕ್ಕೂ ಹೆಚ್ಚು ಜನ ಸ್ಥಳಾಂತರಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಕುಸಿದ ಮನೆಗಳು, ಸೇತುವೆಗಳು ಮತ್ತು ರಸ್ತೆಗಳ ಅವಶೇಷಗಳ ಕೆಳಗೆ ಸಿಲುಕಿರುವವರನ್ನು ಪತ್ತೆಹಚ್ಚಲು ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ. 3,000ಕ್ಕೂ ಹೆಚ್ಚು ಸೈನಿಕರು, ಅಗ್ನಿಶಾಮಕ ಸಿಬ್ಬಂದಿ ಮತ್ತು

ದಕ್ಷಿಣ ಬ್ರೆಜಿಲ್ ನಲ್ಲಿ ಜಲಪ್ರವಾಹ/ 78ಕ್ಕೆ ಏರಿಕೆಯಾದ ಸಾವಿನ ಸಂಖ್ಯೆ Read More »

ಭದ್ರತೆಗೆ ಧಕ್ಕೆ/ ಅಲ್‍ಜಜೀರಾ ಸುದ್ದಿವಾಹಿನಿ ಸ್ಥಗಿತಗೊಳಿಸಿದ ಇಸ್ರೇಲ್

ಸಮಗ್ರ ನ್ಯೂಸ್: ಹಮಾಸ್ ವಿರುದ್ಧ ಇಸ್ರೇಲ್ ಸತತ ದಾಳಿ ನಡೆಸುತ್ತಿರುವ ಹೊತ್ತಿನಲ್ಲಿಯೇ, ಹಮಾಸ್ ಪರವಾಗಿ ಕೆಲಸ ಮಾಡುತ್ತಿದೆ ಎಂಬ ಕಾರಣಕ್ಕಾಗಿ ಇಸ್ರೇಲ್‍ನಲ್ಲಿ ಕಾರ್ಯನಿರ್ವಹಿಸುತ್ತಿರುವ ಅಲ್‍ಜಜೀರಾ ಸುದ್ದಿವಾಹಿನಿಯನ್ನು ಇಸ್ರೇಲ್ ಸ್ಥಗಿತಗೊಳಿಸಿದೆ. ಚಾನೆಲ್ ಬಂದ್ ಮಾಡುವ ಕುರಿತು ಪ್ರಧಾನಿ ಬೆಂಜಮಿನ್ ನೆತನ್ಯಾಹು ಘೋಷಣೆ ಮಾಡಿದ್ದು, ಅಲ್‍ಜಜೀರಾ ಚಾನೆಲ್‍ಅನ್ನು ಇಸ್ರೇಲ್‍ನಲ್ಲಿ ಸ್ಥಗಿತಗೊಳಿಸಲು ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಹಾಗಾಗಿ, ಚಾನೆಲ್ ಅನ್ನು ಸ್ಥಗಿತಗೊಳಿಸಲಾಗುತ್ತಿದೆ ಎಂದು ಬೆಂಜಮಿನ್ ನೆತನ್ಯಾಹು ಎಕ್ಸ್ ಜಾಲತಾಣದಲ್ಲಿ ಪೆÇೀಸ್ಟ್ ಮಾಡಿದ್ದಾರೆ. ಈ ಕೂಡಲೇ ಅಲ್‍ಜಜೀರಾ ಚಾನೆಲ್ ಅನ್ನು ಸ್ಥಗಿತಗೊಳಿಸುತ್ತೇವೆ.

ಭದ್ರತೆಗೆ ಧಕ್ಕೆ/ ಅಲ್‍ಜಜೀರಾ ಸುದ್ದಿವಾಹಿನಿ ಸ್ಥಗಿತಗೊಳಿಸಿದ ಇಸ್ರೇಲ್ Read More »

ಕಡಬ:ಮಹಿಳೆಯ ನಂಬರ್ ಕೇಳಿದ ಸುಳ್ಯದ ಡ್ರೈವರ್ ಗೆ ಸಿಕ್ತು ಬಿಸಿ ಬಿಸಿ‌ ಕಜ್ಜಾಯ

ಸಮಗ್ರ ನ್ಯೂಸ್: ಉರೂಸ್‌ ಸಮಾರಂಭಕ್ಕೆ ಬಂದಿದ್ದ ವಿವಾಹಿತ ವ್ಯಕ್ತಿಯೊಬ್ಬ ಅಲ್ಲಿದ್ದ ಮಹಿಳೆಯ ಮೊಬೈಲ್‌ ನಂಬರ್‌ ಕೇಳಿದ ಕಾರಣಕ್ಕೆ ಸ್ಥಳದಲ್ಲಿದ್ದವರು ಆತನಿಗೆ ಹಿಗ್ಗಾಮುಗ್ಗ ಥಳಿಸಿದ ಘಟನೆ ಕಡಬ ತಾಲೂಕಿನ ಮರ್ದಾಳದ ನೆಕ್ಕಿತಡ್ಕದಲ್ಲಿ ಸಂಭವಿಸಿದೆ. ಸುಳ್ಯದಲ್ಲಿ ಲಾರಿ ಚಾಲಕನಾಗಿರುವ ನವಾಝ್ ಪಂಡಿತ್‌ ಎಂಬಾತ ಮಹಿಳೆಯ ನಂಬರ್‌ ಕೇಳಿ ಸ್ಥಳೀಯರಿಂದ ಥಳಿತಕ್ಕೊಳಗಾದ ವ್ಯಕ್ತಿ. ಉರೂಸ್‌ ವೇಳೆ ಮಹಿಳೆಯಲ್ಲಿ ಮೊಬೈಲ್‌ ನಂಬರ್‌ ಕೇಳಿದ ವಿಚಾರಕ್ಕೆ ಸಂಬಂಧಿಸಿ ಮಾತಿಗೆ ಮಾತು ಬೆಳೆದು ಜಗಳಕ್ಕೆ ಕಾರಣವಾಗಿದೆ. ಥಳಿತಕ್ಕೊಳಗಾದ ವ್ಯಕ್ತಿ ಮರ್ದಾಳ ನಿವಾಸಿಗಳಾದ ಖಲೀಲ್‌ ಅನ್ಸರ್‌, ಶರೀಫ್‌

ಕಡಬ:ಮಹಿಳೆಯ ನಂಬರ್ ಕೇಳಿದ ಸುಳ್ಯದ ಡ್ರೈವರ್ ಗೆ ಸಿಕ್ತು ಬಿಸಿ ಬಿಸಿ‌ ಕಜ್ಜಾಯ Read More »

ಕಡಬ: ಮದುವೆ ಮನೆಯಲ್ಲಿ ಫೋಟೋ ತೆಗೆದ ಆರೋಪ| ಹಲ್ಲೆ, ಇತ್ತಂಡಗಳಿಂದ ದೂರು ದಾಖಲು

ಸಮಗ್ರ ನ್ಯೂಸ್: ಮದುವೆ‌ ಔತಣ ಕೂಟದಲ್ಲಿ ಯುವಕನೋರ್ವ ಯುವತಿಯೊಂದಿಗಿರುವುದನ್ನು ಮೊಬೈಲ್‌ನಲ್ಲಿ ಫೋಟೋ ತೆಗೆದಿದ್ದಾರೆ ಎನ್ನಲಾದ ಘಟನೆಯೊಂದಕ್ಕೆ ಸಂಬಂಧಿಸಿ ಇತ್ತಂಡಗಳ ವಿರುದ್ಧ ಕಡಬ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಎ. 29ರಂದು ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದ ಕುಶಾಲಪ್ಪ ಗೌಡ ಅವರ ಪುತ್ರಿಯ ವಿವಾಹ ಔತಣಕೂಟ ನಡೆದಿತ್ತು. ಅಲ್ಲಿ ನಿಶಾಂತ್‌ ಎಂಬ ಯುವಕ ಯುವತಿಯೊಂದಿಗಿರುವ ಫೋಟೋವನ್ನು ಬಾಂತಾಜೆ ನಿವಾಸಿ ದಿವಾಕರ ತೆಗೆದಿದ್ದಾರೆ ಎಂದು ಆರೋಪಿಸಿ ನಿಶಾಂತ್‌ ನೇತೃತ್ವದಲ್ಲಿ ಧನಂಜಯ, ಜನಾರ್ದನ, ಲೋಕೇಶ, ರಮೇಶ್‌, ಉದಯ, ಭುವನ, ಅಶ್ವಿ‌ತ್‌ ಅವರು

ಕಡಬ: ಮದುವೆ ಮನೆಯಲ್ಲಿ ಫೋಟೋ ತೆಗೆದ ಆರೋಪ| ಹಲ್ಲೆ, ಇತ್ತಂಡಗಳಿಂದ ದೂರು ದಾಖಲು Read More »

ಮದುವೆ ಮನೆಯಲ್ಲಿ ಐಸ್ ಕ್ರೀಂ ತಿಂದು 50ಕ್ಕೂ ಹೆಚ್ಚು ಜನರು ಅಸ್ವಸ್ಥ

ಸಮಗ್ರ ನ್ಯೂಸ್: ಮದುವೆ ಮನೆಯಲ್ಲಿ ಐಸ್ ಕ್ರೀಂ ತಿಂದು 50ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿರುವ ಘಟನೆ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಸಾತನೂರು ಸರ್ಕಲ್ ಬಳಿ ನಡೆದಿದೆ. ಇದು ಮುಸ್ಲಿಂ ಸಮುದಾಯದ ಮದುವೆ ಸಮಾರಂಭದಲ್ಲಿ ನಡೆದ ಘಟನೆಯಾಗಿದೆ. ಊಟದ ನಂತರ ಐಸ್ ಕ್ರೀಂ ತಿಂದಿದ್ದ ಅರ್ಧಗಂಟೆಯಲ್ಲಿ ವಾಂತಿ, ಭೇದಿ ಶುರುವಾಗಿದೆ. 50ಕ್ಕೂ ಹೆಚ್ಚು ಜನರ ಆರೋಗ್ಯ ವ್ಯತ್ಯಾಸವಾಗಿದ್ದರಿಂದ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಲ್ಲಿ 40 ಜನರನ್ನು ಚನ್ನಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಉಳಿದವರನ್ನು ಮಂಡ್ಯ ಹಾಗೂ ರಾಮನಗರ ಜಿಲ್ಲಾಸ್ಪತ್ರೆಗೆ

ಮದುವೆ ಮನೆಯಲ್ಲಿ ಐಸ್ ಕ್ರೀಂ ತಿಂದು 50ಕ್ಕೂ ಹೆಚ್ಚು ಜನರು ಅಸ್ವಸ್ಥ Read More »

ರೇವಣ್ಣರನ್ನ ಎಸ್ಐಟಿ ಕಸ್ಟಡಿಗೆ ನೀಡಿದ ಜಡ್ಜ್| 3 ದಿನ ಎಸ್ಐಟಿ ಕಸ್ಟಡಿಗೆ ನೀಡಿ ಆದೇಶ

ಸಮಗ್ರ ನ್ಯೂಸ್: ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಿಡ್ನ್ಯಾಪ್‌ ಕೇಸ್‌ನಲ್ಲಿ ಬಂಧನವಾಗಿರುವ ಮಾಜಿ ಸಚಿವ ಎಚ್.‌ಡಿ. ರೇವಣ್ಣ ಅವರನ್ನು 3 ದಿನಗಳವರೆಗೆ ಎಸ್‌ಐಟಿ ಕಸ್ಟಡಿಗೆ ನೀಡಿ 17ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ. ಇಂದು ಕೋರ್ಟ್‌ ರಜೆ ಇರುವ ಹಿನ್ನೆಲೆ ಈ ಪ್ರಕರಣದ ಪ್ರಮುಖ ಆರೋಪಿ ಎಚ್.ಡಿ. ರೇವಣ್ಣ ಅವರನ್ನು ಕೋರಮಂಗಲದಲ್ಲಿರುವ 17ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶರ ನಿವಾಸಕ್ಕೆ ಕರೆತರಲಾಗಿತ್ತು. ಜಡ್ಜ್‌ ಮುಂದೆ ರೇವಣ್ಣ ಅವರನ್ನು ಎಸ್‌ಐಟಿ ಅಧಿಕಾರಿಗಳು ಹಾಜರುಪಡಿಸಿದರು. ಈ ವೇಳೆ ಎಸ್‌ಐಟಿ ಪರ

ರೇವಣ್ಣರನ್ನ ಎಸ್ಐಟಿ ಕಸ್ಟಡಿಗೆ ನೀಡಿದ ಜಡ್ಜ್| 3 ದಿನ ಎಸ್ಐಟಿ ಕಸ್ಟಡಿಗೆ ನೀಡಿ ಆದೇಶ Read More »

ಪೆನ್ ಡ್ರೈವ್ ಪ್ರಕರಣ ನಡುವೆ ರಾಜ್ಯದಲ್ಲಿ 2ನೇ ಹಂತದ ಚುನಾವಣೆಗೆ ಬಹಿರಂಗ ಪ್ರಚಾರ ಅಂತ್ಯ

ಸಮಗ್ರ ನ್ಯೂಸ್: ಕಾಂಗ್ರೆಸ್ ಆಡಳಿತವಿರುವ ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಎರಡನೇ ಹಂತದ ಲೋಕಸಭೆ ಚುನಾವಣೆಯ ಬಹಿರಂಗ ಪ್ರಚಾರ ಭಾನುವಾರ ಅಂತ್ಯಗೊಂಡಿದ್ದು, ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಸೆಕ್ಸ್ ವಿಡಿಯೋ ಭಾರಿ ಸದ್ದು ಮಾಡಿದ್ದು, ಮತದಾರನ ಮೇಲೆ ಸಣ್ಣ ಪ್ರಮಾಣದಲ್ಲಿ ಪ್ರಭಾವ ಬೀರುವ ಸಾಧ್ಯತೆ ಇದೆ. ಕರ್ನಾಟಕ ಒಟ್ಟು 28 ಲೋಕಸಭಾ ಕ್ಷೇತ್ರಗಳನ್ನು ಹೊಂದಿದ್ದು, ಏಪ್ರಿಲ್ 26 ರಂದು 14 ಕ್ಷೇತ್ರಗಳಿಗೆ ಮೊದಲ ಹಂತದ ಚುನಾವಣೆ ನಡೆದಿತ್ತು. ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ

ಪೆನ್ ಡ್ರೈವ್ ಪ್ರಕರಣ ನಡುವೆ ರಾಜ್ಯದಲ್ಲಿ 2ನೇ ಹಂತದ ಚುನಾವಣೆಗೆ ಬಹಿರಂಗ ಪ್ರಚಾರ ಅಂತ್ಯ Read More »

ಹವಾಮಾನ ವರದಿ|ಮೇ.7 ರಿಂದ ಈ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಉತ್ತಮ ಮಳೆ ಮುನ್ಸೂಚನೆ

ಸಮಗ್ರ ನ್ಯೂಸ್: ಮೇ 7ರಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ತುಮಕೂರು, ರಾಮನಗರ, ಚಾಮರಾಜನಗರ, ಮೈಸೂರು, ಕೊಡಗು ಜಿಲ್ಲೆಯ ಹಲವು ಕಡೆ ಭಾನುವಾರ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕೆಲವು ಕಡೆ ಮಳೆ ಜೊತೆಗೆ ಬಿಸಿ ಗಾಳಿಯೂ ಇರಲಿದೆ. ಬೀದರ್, ಬೆಳಗಾವಿ, ಧಾರವಾಡ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ಹಾವೇರಿ, ಚಿತ್ರದುರ್ಗ, ದಾವಣಗೆರೆ,

ಹವಾಮಾನ ವರದಿ|ಮೇ.7 ರಿಂದ ಈ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಉತ್ತಮ ಮಳೆ ಮುನ್ಸೂಚನೆ Read More »