ರಾಜ್ಯದ‌ ಮೂರು ವಿಧಾನಸಭೆ, ಒಂದು ವಿಧಾನ ಪರಿಷತ್ ಸ್ಥಾನಕ್ಕೆ ಉಪಚುನಾವಣೆ ಫಿಕ್ಸ್

ಸಮಗ್ರ ನ್ಯೂಸ್: ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಮೂವರು ಶಾಸಕರು ಮತ್ತು ಒಬ್ಬರು ವಿಧಾನ ಪರಿಷತ್ ಸದಸ್ಯರು ಜಯಗಳಿಸಿದ ಹಿನ್ನೆಲೆಯಲ್ಲಿ ಈ ಕ್ಷೇತ್ರಗಳಿಗೆ ಚುನಾವಣೆ ನಡೆಯುವುದು ಖಚಿತವಾಗಿದೆ.

Ad Widget ... ..

ಹಾಲಿ ವಿಧಾನಸಭೆಯ ಮೂವರು ಸದಸ್ಯರು ಮತ್ತು ವಿಧಾನ ಪರಿಷತ್ತಿನ ಒಬ್ಬ ಸದಸ್ಯ ಲೋಕಸಭೆ ಚುನಾವಣೆಯಲ್ಲಿ ಜಯಗಳಿಸಿದ್ದು, ಇವರಿಂದ ತೆರವಾಗಲಿರುವ ಸ್ಥಾನಗಳಿಗೆ ಉಪಚುನಾವಣೆ ಎದುರಾಗಲಿದೆ.

Ad Widget

ಚನ್ನಪಟ್ಟಣ ಶಾಸಕರಾದ ಹೆಚ್.ಡಿ. ಕುಮಾರಸ್ವಾಮಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಜಯಗಳಿಸಿದ್ದಾರೆ. ಶಿಗ್ಗಾಂವಿ ಶಾಸಕರಾದ ಬಸವರಾಜ ಬೊಮ್ಮಾಯಿ ಹಾವೇರಿ ಲೋಕಸಭಾ ಕ್ಷೇತ್ರದಿಂದ ಚುನಾಯಿತರಾಗಿದ್ದಾರೆ. ಸಂಡೂರು ಶಾಸಕ ತುಕಾರಾಂ ಬಳ್ಳಾರಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಜಯಗಳಿಸಿದ್ದಾರೆ.

ಇನ್ನು ವಿಧಾನಪರಿಷತ್ ನಲ್ಲಿ ದಕ್ಷಿಣ ಕನ್ನಡ -ಉಡುಪಿ ಸ್ಥಳೀಯ ಸಂಸ್ಥೆಗಳ ಕ್ಷೇತ್ರ ಪ್ರತಿನಿಧಿಸುತ್ತಿರುವ ಕೋಟ ಶ್ರೀನಿವಾಸ ಪೂಜಾರಿ ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಜಯಗಳಿಸಿದ್ದು, ಈ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯುವುದು ಖಚಿತವಾಗಿದೆ.

Leave a Comment

Your email address will not be published. Required fields are marked *