ಅಥಣಿ: ಅಗ್ನಿಶಾಮಕ ಸಿಬ್ಬಂದಿಗೆ ಒಲಿದು ಬಂದ ಮುಖ್ಯಮಂತ್ರಿ ಚಿನ್ನದ ಪದಕ

ಸಮಗ್ರ ನ್ಯೂಸ್: ವಿಪತ್ತು ಹಾಗೂ ತುರ್ತುಪರಿಸ್ಥಿತಿ ಸಂದರ್ಭದಲ್ಲಿ ಅತ್ಯುತ್ತಮ ಸೇವೆಯನ್ನ ಸಲ್ಲಿಸಿದ ಅನಿಲ ಕುಮಾರ್ ಬಡಚಿ ಅವರಿಗೆ ಮುಖ್ಯಮಂತ್ರಿ ಚಿನ್ನದ ಪದಕ ಒಲಿದು ಬಂದಿದೆ.

. Ad Widget . Ad Widget

ಅಗ್ನಿ ಅವಗಡ ಮತ್ತು ವಿಪತ್ತು ಮತ್ತು ತುರ್ತು ಸೇವೆಗಳ ಸಂದರ್ಭದಲ್ಲಿ ನಾಗರಿಕರ ಜೀವ ರಕ್ಷಣೆ ಹಾಗೂ ಆಸ್ತಿ ಸಂರಕ್ಷಣಾ ಕಾರ್ಯದಲ್ಲಿ ತಮ್ಮ ಪ್ರಾಣದ ಹಂಗನ್ನು ತೊರೆದು ಅತ್ಯುತ್ತಮ ಸೇವೆ ಸಲ್ಲಿಸಿದ ಅಗ್ನಿಶಾಮಕ ಮತ್ತು ಅಧಿಕಾರಿ ಹಾಗೂ ಸಿಬ್ಬಂದಿ ಗಳಿಗೆ ಮುಖ್ಯ ಮಂತ್ರಿ ಚಿನ್ನದ ಪದಕವನ್ನ ಜೂ. 11 ರಂದು ಬೆಂಗಳೂರಿನ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಅಕಾಡೆಮಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿತರಿಸಲಾಗಿತ್ತು

. Ad Widget . . Ad Widget . Ad Widget

ಸಮಾರಂಭದಲ್ಲಿ ಬೆಳಗಾವಿ ಜಿಲ್ಲೆಯ ಅಥಣಿಯ ಅಗ್ನಿಶಾಮಕ ದಳದ ಸಿಬ್ಬಂದಿಯಾದ ಅನಿಲ ಬಡಚಿ ಅವರಿಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಮುಖ್ಯಮಂತ್ರಿ ಚಿನ್ನದ ಪದಕ ನೀಡಿ ಸನ್ಮಾನಿಸಿದ್ದು ಇಡೀ ಅಥಣಿಯ ಜನತೆ ಹೆಮ್ಮೆಯ ಪಡುವ ಸಂಗಾತಿಯಾಗಿದೆ.

Leave a Comment

Your email address will not be published. Required fields are marked *