ಚಿತ್ರದುರ್ಗ: ಕಾರಿಗೆ ಲಾರಿ ಡಿಕ್ಕಿ.. ನಾಲ್ವರು ಸಾವು

ಸಮಗ್ರ ನ್ಯೂಸ್: ಚಿತ್ರದುರ್ಗ ತಾಲೂಕಿನ ಚಿಕ್ಕಬೆನ್ನೂರು ಗ್ರಾಮದ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಇಬ್ಬರು ಮಹಿಳೆಯರು ಮತ್ತು ಮಗು ಸೇರಿದಂತೆ ಮೂವರು ಮೃತಪಟ್ಟಿದ್ದಾರೆ. ದಾವಣಗೆರೆ ಖಾಸಗಿ ಆಸ್ಪತ್ರೆಯಲ್ಲಿ ಓರ್ವ ಮೃತಪಟ್ಟಿದ್ದಾರೆ.

. Ad Widget . Ad Widget

ಇವರೆಲ್ಲ ಬೆಂಗಳೂರಿನ ತಣಿಸಂದ್ರ ಮೂಲದವರು ಪ್ರಜ್ವಲ್ ರೆಡ್ಡಿ(30), ಹರ್ಷಿತಾ(28), ನೋಹನ್ (2), ವಿಜಯರೆಡ್ಡಿ ಮೃತ ದುರ್ದೈವಿಗಳು. ಬೆಂಗಳೂರಿನಿಂದ ಗೋವಾಕ್ಕೆ ತೆರಳುವ ವೇಳೆ ಚಿಕ್ಕಬೆನ್ನೂರು ಗ್ರಾಮದ ಬಳಿ ಕಾರಿಗೆ ಲಾರಿ ಡಿಕ್ಕಿ ಹೊಡೆದಿದೆ. ಕಾರಿಲ್ಲಿದ್ದ ಮೂವರು ಮೃತಪಟ್ಟಿದ್ದು, ಇನ್ನುಳಿದ ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು, ದಾವಣಗೆರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಭರಮಸಾಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ

. Ad Widget . . Ad Widget . Ad Widget

Leave a Comment

Your email address will not be published. Required fields are marked *