ಚನ್ನಪಟ್ಟಣದಲ್ಲಿ ನಿಖಿಲ್ ಸ್ಪರ್ಧೆ/ ಬೆಂಬಲ ಘೋಷಿಸಿದ ಯೋಗೇಶ್ವರ್

ಸಮಗ್ರ ನ್ಯೂಸ್: ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್‌ ಕುಮಾರಸ್ವಾಮಿ ಸ್ಪರ್ಧಿಸಿದರೆ ನಾನು ಬೆಂಬಲ ನೀಡುತ್ತೇನೆ ಎಂದು ಮಾಜಿ ಸಚಿವ ಸಿ.ಪಿ ಯೋಗೇಶ್ವರ್ ಹೇಳಿದ್ದಾರೆ.

. Ad Widget . Ad Widget

ಚನ್ನಪಟ್ಟಣ ಉಪ ಚುನಾವಣೆ ಹಿನ್ನೆಲೆಯಲ್ಲಿ ರಾಷ್ಟ್ರೀಯ ನಾಯಕರನ್ನು ಭೇಟಿ ಮಾಡಿದ್ದೇನೆ. ಕೇಂದ್ರ ಸಚಿವ ಕುಮಾರಸ್ವಾಮಿಯನ್ನೂ ಭೇಟಿ ಮಾಡಿದ್ದೇನೆ. ನನ್ನ ಸ್ಪರ್ಧೆ ಬಗ್ಗೆ ಹೈಕಮಾಂಡ್‌, ಕುಮಾರಸ್ವಾಮಿ ನಿರ್ಧಾರ ಮಾಡ್ತಾರೆ. ಜೆಡಿಎಸ್ ಚಿಹ್ನೆಯಡಿ ಸ್ಪಧೆ ಮಾಡಿ ಎಂದು ಯಾರೂ ಕೇಳಿಲ್ಲ. ವರಿಷ್ಠರು ಏನು ಹೇಳ್ತಾರೆ ಅದನ್ನು ಕೇಳುತ್ತೇನೆ. ನಿಖಿಲ್ ಸ್ಪರ್ಧೆ ಮಾಡೊದಾದ್ರೆ ನನ್ನ ಸಂಪೂರ್ಣ ಬೆಂಬಲ ಇದೆ ಎಂದು ಸುದ್ದಿಗಾರರಿಗೆ ತಿಳಿಸಿದ್ದಾರೆ.

. Ad Widget . . Ad Widget . Ad Widget

ನಾನು ಯಾವುದೇ ಒಳಸಂಚು ಮಾಡುವುದಿಲ್ಲ. ಸಂಪೂರ್ಣ ಸಹಕಾರ ನೀಡುತ್ತೇನೆ ಎಂದರು. ಇನ್ನು, ಕಾಂಗ್ರೆಸ್‌ನಿಂದ ಡಿಕೆಶಿ ಕುಟುಂಬದವರು ನಿಂತರೆ ದೊಡ್ಡ ಹೋರಾಟ ನಡೆಯುವುದು ಗ್ಯಾರಂಟಿ ಎಂದರು.

Leave a Comment

Your email address will not be published. Required fields are marked *