‘ವಿಶ್ವ’ ಗೆದ್ದ ಟೀಂ ಇಂಡಿಯಾಗೆ ಅದ್ದೂರಿ ಸ್ವಾಗತ| ಇಂದು ಮೋದಿ ಭೇಟಿಯಾಗಲಿರುವ ಆಟಗಾರರು

ಸಮಗ್ರ ನ್ಯೂಸ್: ಟಿ20 ವಿಶ್ವಕಪ್ ಗೆದ್ದು ಭಾರತಕ್ಕೆ ಮರಳಿದ ಆಟಗಾರರಿಗೆ ದೆಹಲಿಯಲ್ಲಿ ಅದ್ದೂರಿ ಸ್ವಾಗತ ನೀಡಲಾಗಿದೆ. ಟೀಮ್ ಇಂಡಿಯಾ ಆಟಗಾರರು ವಿಶ್ವಕಪ್ ನೊಂದಿಗೆ ತವರಿಗೆ ಮರಳಿದ್ದು, ನವದೆಹಲಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ಆಟಗಾರರಿಗೆ ಅದ್ದೂರಿ ಸ್ವಾಗತ ನೀಡಿ ವಿಜಯೋತ್ಸವ ಆಚರಿಸಲಾಗಿದೆ.

Ad Widget ... ..

ಈಗಾಗಲೇ ಬಿಸಿಸಿಐನಿಂದ 125 ಕೋಟಿ ರೂ. ಬಹುಮಾನ ಘೋಷಿಸಲಾಗಿದೆ. ಚಂಡಮಾರುತ ದಿಂದಾಗಿ ಬಾರ್ಬಡೋಸ್ ನಲ್ಲಿ ಟೀಮ್ ಇಂಡಿಯಾ ಆಟಗಾರರು ಉಳಿದುಕೊಂಡಿದ್ದರು. ದೆಹಲಿಯಲ್ಲಿ ಇಂದು ಬೆಳಗ್ಗೆ ಟೀಂ ಇಂಡಿಯಾ ಆಟಗಾರರು ಪ್ರಧಾನಿ ಮೋದಿ ಅವರನ್ನು ಭೇಟಿಯಾಗಲಿದ್ದು, ಭೋಜನಕೂಟದಲ್ಲಿ ಭಾಗವಹಿಸಲಿದ್ದಾರೆ.

Ad Widget

ನಂತರ ಮುಂಬೈಗೆ ತೆರಳಲಿದ್ದು ತೆರೆದ ವಾಹನದಲ್ಲಿ ಆಟಗಾರರ ಮೆರವಣಿಗೆ ಅದ್ದೂರಿ ಸನ್ಮಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ.

Leave a Comment

Your email address will not be published. Required fields are marked *