ಉಡುಪಿ: ಹೃದಯಾಘಾತಕ್ಕೆ ಎಸ್ಎಸ್ಎಲ್ ಸಿ ವಿದ್ಯಾರ್ಥಿನಿ ಬಲಿ

ಸಮಗ್ರ ನ್ಯೂಸ್: ಉಡುಪಿ ಜಿಲ್ಲೆಯ ಶಿರ್ವದಲ್ಲಿ 10 ನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಯೋರ್ವಳು ಹೃದಯಾಘಾತಕ್ಕೆ ಬಲಿಯಾಗಿದ್ದಾಳೆ. ಇಲ್ಲಿನ ಮೂಡುಬೆಳ್ಳೆ ಸಂತ ಲಾರೆನ್ಸ್ ಕನ್ನಡ ಮಾಧ್ಯಮ ಪ್ರೌಢ ಶಾಲಾ 10ನೇ ತರಗತಿ ವಿದ್ಯಾರ್ಥಿನಿ ಭಾಗ್ಯಶ್ರೀ (16) ಮೃತ ವಿದ್ಯಾರ್ಥಿನಿ.

Ad Widget ... ..

ಎಂದಿನಂತೆ ಶಾಲೆಗೆ ಹೋಗುತ್ತಿದ್ದ ಭಾಗ್ಯಶ್ರೀಗೆ ಇಂದು ಬೆಳಿಗ್ಗೆ ಎದೆ ನೋವು ಕಾಣಿಸಿದ್ದು ಕೂಡಲೇ ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಭಾಗ್ಯಶ್ರೀ ನಿಧನ ಹೊಂದಿದ್ದಾಳೆ. ಇವಳಿಗೆ ಹೃದಯ ಸಂಬಂಧಿ ಕಾಯಿಲೆ ಇತ್ತು.

Ad Widget

ಇವಳು ಪಳ್ಳಿ ದಾದಬೆಟ್ಟು ಜಯರಾಮ ಆಚಾರ್ಯ ಚಂದ್ರಿಕಾ ದಂಪತಿಗಳ ಪುತ್ರಿ. ಇವಳ ನಿಧನಕ್ಕೆ ಶಾಲಾ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು ಶಿಕ್ಷಕರು,ವಿದ್ಯಾರ್ಥಿ ವೃಂದದವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಮೃತ ಭಾಗ್ಯಶ್ರೀ ಗೌರವಾರ್ಥ ಇಂದು ಶಾಲೆಗೆ ರಜೆ ನೀಡಲಾಗಿತ್ತು.

Leave a Comment

Your email address will not be published. Required fields are marked *