ಭಾರೀ ಮಳೆ ಹಿನ್ನಲೆ| ಉತ್ತರಕನ್ನಡದ ಈ ತಾಲೂಕುಗಳ ಶಾಲೆ, ಪ‌.ಪೂ ಕಾಲೇಜುಗಳಿಗೆ ನಾಳೆ(ಜು.19) ಮತ್ತೆ ರಜೆ ಮುಂದುವರಿಕೆ

ಸಮಗ್ರ ನ್ಯೂಸ್: ಉತ್ತರಕನ್ನಡ ಜಿಲ್ಲೆಯಲ್ಲಿ ಮಳೆ‌‌ ಮುಂದುವರಿದಿದ್ದು, ನದಿಗಳು ಅಪಾಯದ‌‌ ಮಟ್ಟ ಮೀರಿ ಹರಿಯುತ್ತಿವೆ. ಹಲವೆಡೆ ಗುಡ್ಡ ಕುಸಿಯುತ್ತಿದೆ. ಹೀಗಾಗಿ ಮುನ್ನೆಚ್ಚರಿಕಾ‌ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ನಾಳೆ ಜುಲೈ 19 ರಂದು ಹೊನ್ನಾವರ, ಕುಮಟಾ, ಭಟ್ಕಳ, ಅಂಕೋಲಾ, ಕಾರವಾರ, ಶಿರಸಿ, ಸಿದ್ದಾಪುರ, ಹಳಿಯಾಳ, ದಾಂಡೇಲಿ, ಯಲ್ಲಾಪುರ , ಜೋಯಿಡಾ ತಾಲೂಕಿನ ಎಲ್ಲಾ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಈ ಕುರಿತು ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದ್ದಾರೆ.

Ad Widget ... ..

ಮತ್ತೊಂದೆಡೆ ಅಂಕೋಲಾದ ರಾ.ಹೆದ್ದಾರಿಯಲ್ಲಿ ರಕ್ಷಣಾ ಕಾರ್ಯ ಮುಂದುವರೆದಿದೆ.‌ ನಿರಂತರ ಕಾರ್ಯಾಚರಣೆ ‌ಬಳಿಕ 6 ಶವಗಳನ್ನು ಮೇಲೆತ್ತಲಾಗಿದ್ದು, ಇನ್ನುಳಿದವರಿಗೆ ಶೋಧ ಮುಂದುವರಿದಿದೆ.

Ad Widget

Leave a Comment

Your email address will not be published. Required fields are marked *