ಬೆಳ್ತಂಗಡಿ: ರೇಖ್ಯ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಗುಡ್ಡ ಕುಸಿತದಿಂದ ಹಾನಿ

ಸಮಗ್ರ ನ್ಯೂಸ್: ಕರಾವಳಿಯಲ್ಲಿ ಮಳೆ ಅಬ್ಬರ ಮುಂದುವರೆದಿದ್ದು ಇದೀಗ ಗುಡ್ಡ ಕುಸಿತದ ಪ್ರಕರಣಗಳು ಹೆಚ್ಚಾಗ ತೊಡಗಿದೆ. ಭಾರಿ ಮಳೆಗೆ ಗುಡ್ಡ ಕುಸಿದು ದೇವಸ್ಥಾನಕ್ಕೆ ಹಾನಿಯಾದ ಘಟನೆ ಬೆಳ್ತಂಗಡಿ ತಾಲೂಕಿನ ರೆಖ್ಯಾ ಗ್ರಾಮದ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನಡೆದಿದೆ.

Ad Widget ... ..

ಭಾರೀ ಮಳೆಯಾಗುತ್ತಿರುವ ಕಾರಣ ದೇವಸ್ಥಾನದ ಸುತ್ತಿ ಇರುವ ಗುಡ್ಡ ಏಕಾಏಕಿ ದೇವಸ್ಥಾನದ ಮೇಲೆ ಬಿದ್ದಿದೆ. ದೇವಸ್ಥಾನದ ಗರ್ಭಗುಡಿ ಮತ್ತು‌ ಸುತ್ತು ಪೌಳಿಗೆ ಭಾರಿ ಪ್ರಮಾಣದಲ್ಲಿ ಹಾನಿಯಾಗಿದೆ. ನೀರಿನ ಜೊತೆಗೆ ದೇವಸ್ಥಾನದ ಒಳಗಡೆ ಮಣ್ಣು ನುಗ್ಗಿದ್ದು. ಮಳೆ ಜಾಸ್ತಿಯಾದರೆ ಮತ್ತಷ್ಟು ಗುಡ್ಡ ಕುಸಿಯುವ ಸಾಧ್ಯತೆ ಇದೆ.

Ad Widget

Leave a Comment

Your email address will not be published. Required fields are marked *