ಬೆಂಗಳೂರಿನ ಕೆಂಪೇಗೌಡ ಏರ್ಪೋರ್ಟ್ ನಲ್ಲಿ ಶಂಕಿತ ಉಗ್ರನ ಬಂಧಿಸಿದ ಎನ್ಐಎ

ಸಮಗ್ರ ನ್ಯೂಸ್: ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ರಾಷ್ಟ್ರೀಯ ತನಿಖಾ ದಳ (ಎನ್‌ ಐಎ) ಅಧಿಕಾರಿಗಳು ಓರ್ವ ಶಂಕಿತ ಉಗ್ರನನ್ನು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಶಂಕಿತ ಭಯೋತ್ಪಾದಕ ತಮಿಳುನಾಡು ಹಿಜ್ಬ್-ಉತ್-ತಹ್ರೀರ್ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದ ಎಂದು ವರದಿ ತಿಳಿಸಿದೆ.

. Ad Widget . Ad Widget

ಹಿಜ್ಬ್-ಉತ್-ತಹ್ರೀರ್ ಪ್ರಕರಣದ ಆರೋಪಿ, ಶಂಕಿತ ಭಯೋತ್ಪಾದಕ ನಿನ್ನೆ ಬೆಳಿಗ್ಗೆ 11.45 ಕ್ಕೆ ಸೌದಿ ಏರ್‌ಲೈನ್ಸ್ ವಿಮಾನದಲ್ಲಿ ಪರಾರಿಯಾಗಲು ಯೋಜಿಸಿದ್ದ.‌ ಈ ವೇಳೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಅವರನ್ನು ಬಂಧಿಸಿದೆ.
ಅಜೀಜ್ ಅಹ್ಮದ್ ಎಂದು ಗುರುತಿಸಲ್ಪಟ್ಟ ಶಂಕಿತ ಭಯೋತ್ಪಾದಕನನ್ನು ವಿಮಾನ ನಿಲ್ದಾಣದಿಂದ ಸೌದಿ ಅರೇಬಿಯಾದ ಜೆಡ್ಡಾಕ್ಕೆ ತಪ್ಪಿಸಿಕೊಂಡು ಹೋಗುತ್ತಿದ್ದಾಗ ಬಂಧಿಸಲಾಯಿತು ಎಂದು ವರದಿ ತಿಳಿಸಿದೆ.

. Ad Widget . . Ad Widget . Ad Widget

Leave a Comment

Your email address will not be published. Required fields are marked *