ಗ್ರಾಹಕರಿಗೆ ಕಣ್ಣೀರು ತರಿಸುತ್ತಿರುವ ಈರುಳ್ಳಿ/ ಮತ್ತೆ ಹೆಚ್ಚಾಗುತ್ತಿದೆ ಬೆಲೆ

ಸಮಗ್ರ ನ್ಯೂಸ್‌: ಸದ್ಯ ಕರ್ನಾಟಕದ ಹಲವೆಡೆ ಅತಿಯಾದ ಮಳೆಯ ಕಾರಣ ಬೆಳೆ ನೀರುಪಾಲಾಗುತ್ತಿದ್ದರೆ, ಮತ್ತೊಂದೆಡೆ ಈರುಳ್ಳಿ ಮಳೆಯಿಂದಾಗಿ ಇಟ್ಟಲ್ಲೇ ಕೊಳೆತು ಹೋಗುತ್ತಿರುವ ಹಿನ್ನಲೆಯಲ್ಲಿ ಹಬ್ಬದ ವಾರದಲ್ಲಿ 50 ರೂ. ಇದ್ದ ಈರುಳ್ಳಿಯ ಬೆಲೆ ಇದೀಗ 60 ರಿಂದ 70 ರೂಪಾಯಿ ಆಗಿದೆ.

Ad Widget ... ..

ರಾಜ್ಯದಲ್ಲಿ ಹೆಚ್ಚು ಮಳೆಯಾಗುತ್ತಿರುವ ಪರಿಣಾಮ ಈರುಳ್ಳಿಯ ಉತ್ಪಾದನೆಯಲ್ಲಿ ಭಾರಿ ಕುಸಿತವಾಗಿದೆ. ಹೀಗಾಗಿ ಮಾರುಕಟ್ಟೆಗೆ ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿ ಬರುತ್ತಿಲ್ಲ. ಪರಿಣಾಮವಾಗಿ ಪೂರೈಕೆ ಕೂಡ ಕಡಿಮೆಯಾಗಿದೆ. ಸದ್ಯ ರಾಜ್ಯಕ್ಕೆ ಪುಣೆ, ಮಹಾರಾಷ್ಟ್ರದಿಂದ ಈರುಳ್ಳಿ ತರುಹಿಸಿಕೊಳ್ಳಲಾಗುತ್ತಿದೆ. ದಸರಾ ವೇಳೆಗೆ ಈರುಳ್ಳಿಯ ಬೆಲೆ ಮತ್ತಷ್ಟು ದುಬಾರಿಯಾಗುವ ಸಾಧ್ಯತೆ ಇದೆ. ಈ ಹಿಂದೆ ಉತ್ತರ ಕರ್ನಾಟಕ ಭಾಗದಿಂದ ಈರುಳ್ಳಿ ರಾಜ್ಯಕ್ಕೆ ಪೂರೈಕೆಯಾಗುತ್ತಿತ್ತು. ಆದರೆ, ಈಗ ಉತ್ತರ ಕರ್ನಾಟಕದಲ್ಲಿ ಹೆಚ್ಚು ಮಳೆಯಾಗುತ್ತಿದ್ದು, ಮಳೆಗೆ ಈರುಳ್ಳಿ ಕೊಳೆತು ಹೋಗುತ್ತಿದೆ. ಹೀಗಾಗಿ ಈರುಳ್ಳಿ ಪೂರೈಕೆ ಕಡಿಮೆಯಾಗಿದೆ.

Ad Widget

Leave a Comment

Your email address will not be published. Required fields are marked *