ಸಮಗ್ರ ನ್ಯೂಸ್: ಟಾಟಾ ಸನ್ನ ಗೌರವಾನ್ವಿತ ಅಧ್ಯಕ್ಷರಾಗಿದ್ದ ರತನ್ ಟಾಟಾ ಅವರನ್ನು ಮುಂಬೈ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಿಸದೇ ಅ.09 ನಿಧನರಾಗಿದ್ದಾರೆ.ಇಂದು ಮುಂಬೈನ ವರ್ಲಿ ರುದ್ರಭೂಮಿಯಲ್ಲಿ ರತನ್ ಟಾಟಾ ಅಂತ್ಯಕ್ರಿಯೆ ನೆರವೇರಲಿದೆ.
ರತನ್ ಟಾಟಾ ಅವರ ಪಾರ್ಥೀವ ಶರೀರವನ್ನು ಗುರುವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 4ಯ ವರೆಗೆ ದಕ್ಷಿಣ ಮುಂಬೈನ ನ್ಯಾಷನಲ್ ಸೆಂಟರ್ ಫಾರ್ ಪರ್ಫಾರ್ಮಿಂಗ್ ಆರ್ಟ್ಸ್ (ಎನ್ಸಿಪಿಎ) ಯಲ್ಲಿ ಸಾರ್ವಜನಿಕ ದರ್ಶನಕ್ಕೆ ಇಡಲಾಗುವುದು ಎಂದು ಅವರ ಸಂಬಂಧಿಕರು ತಿಳಿಸಿದ್ದಾರೆ.
ಸರ್ಕಾರಿ ಗೌರವಗಳೊಂದಿಗೆ ಉದ್ಯಮಿ ರತನ್ ಟಾಟಾ ಅವರ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಬುಧವಾರ ಹೇಳಿದ್ದಾರೆ.






