ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ 5ನೆ ಜಿಲ್ಲಾ ಸಮ್ಮೇಳನದ ಲಾಂಛನವನ್ನು ಬುಧವಾರ (ನ.20) ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಮತ್ತು ರಾಜ್ಯ ಸಭಾ ಸದಸ್ಯ ಡಾ.ಡಿ.ವೀರೇಂದ್ರ ಹೆಗ್ಗಡೆ ಬಿಡುಗಡೆಗೊಳಿಸಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಧರ್ಮೋತ್ತಾನ ಟ್ರಸ್ಟ್ ಕಾರ್ಯದರ್ಶಿ ಎ. ವಿ ಶೆಟ್ಟಿ, ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ ಬಿ ಹರೀಶ್ ರೈ,ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಜಗನ್ನಾಥ ಶೆಟ್ಟಿ ಬಾಳ,ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ, ಕೋಶಾಧಿಕಾರಿ ಪುಷ್ಪ ರಾಜ್ ಬಿ.ಎನ್, ಕಾರ್ಯಕಾರಿ ಸಮಿತಿಯ ಸದಸ್ಯ ರಾಜೇಶ್ ದಡ್ಡಂಗಡಿ, ಸಂಘದ ಸದಸ್ಯ ಶಶಿಕಾಂತ್ ಮೊದಲಾದವರು ಉಪಸ್ಥಿತರಿದ್ದರು.




























