January 2025

ತುಮಕೂರು: ದೂರು ನೀಡಲು ಠಾಣೆಗೆ ಬಂದ ಮಹಿಳೆಯ ಜೊತೆ ಸರಸವಾಡಿದ ಡಿವೈಎಸ್ಪಿ| ವಿಡಿಯೋ ವೈರಲ್ ಬೆನ್ನಲ್ಲೇ ಪೋಲಿ ಪೊಲೀಸ್ ನಾಪತ್ತೆ

ಸಮಗ್ರ ನ್ಯೂಸ್: ಜಮೀನು ವಿಚಾರಕ್ಕೆ ದೂರು ಕೊಡಲು ಬಂದ ಮಹಿಳೆಯೊಂದಿಗೆ ಪೊಲೀಸ್ ಠಾಣೆಯಲ್ಲಿಯೇ ರಾಸಲೀಲೆ ನಡೆಸಿದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇದರಿಂದಾಗಿ ಇಡೀ ಪೊಲೀಸ್ ಇಲಾಖೆಯೇ ತಲೆ ತಗ್ಗಿಸಿ ನಿಲ್ಲುವಂತಾಗಿದೆ. ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ದೂರು ನೀಡಲು ಬಂದ ಮಹಿಳೆಯೊಂದಿಗೆ ಮಧುಗಿರಿ ಉಪವಿಭಾಗದ ಡಿವೈಎಸ್‌ಪಿ ರಾಮಚಂದ್ರಪ್ಪ ರಾಸಲೀಲೆ ನಡೆಸಿರುವ ವಿಡಿಯೋ ವೈರಲ್ ಆಗಿದ್ದು ಇದರ ಬೆನ್ನಲ್ಲೇ ಡಿವೈಎಸ್‌ಪಿ ತಲೆಮರೆಸಿಕೊಂಡಿದ್ದಾರೆ ಎನ್ನಲಾಗಿದೆ. ಜಮೀನು ವ್ಯಾಜ್ಯದ ಬಗ್ಗೆ ಪಾವಗಡ ಮೂಲದ ಮಹಿಳೆಯೊಬ್ಬರು ದೂರು ನೀಡಿದ್ದರು. ಈ […]

ತುಮಕೂರು: ದೂರು ನೀಡಲು ಠಾಣೆಗೆ ಬಂದ ಮಹಿಳೆಯ ಜೊತೆ ಸರಸವಾಡಿದ ಡಿವೈಎಸ್ಪಿ| ವಿಡಿಯೋ ವೈರಲ್ ಬೆನ್ನಲ್ಲೇ ಪೋಲಿ ಪೊಲೀಸ್ ನಾಪತ್ತೆ Read More »

ಕಡಬ: ಪ್ರೀತಿಸುವ ನಾಟಕವಾಡಿ ಕಾಲೇಜು ವಿದ್ಯಾರ್ಥಿನಿಯ ಅತ್ಯಾಚಾರ; ಆರೋಪಿಯ ಬಂಧನ

ಸಮಗ್ರ ನ್ಯೂಸ್: ಕಾಲೇಜೊಂದರಲ್ಲಿ ಓದುತ್ತಿದ್ದ ಅಪ್ರಾಪ್ತ ವಯಸ್ಕ ವಿದ್ಯಾರ್ಥಿನಿ ಜತೆ ಪ್ರೀತಿಸುವ ನಾಟಕವಾಡಿ ಆಕೆಯ ಮೇಲೆ ಅತ್ಯಾಚಾರವೆಸಗಿರುವ ಆರೋಪದಲ್ಲಿ ಕಡಬ ತಾಲೂಕು ಕೋಡಿಂಬಾಳ ಗ್ರಾಮದ ಓಂಕಲ್‌ ನಿವಾಸಿ ಪ್ರವೀಣ್‌ ಪೂಜಾರಿಯನ್ನು ಕಡಬ ಪೊಲೀಸರು ಬಂಧಿಸಿದ್ದಾರೆ. ಆತ ಬಾಲಕಿ ಜತೆಗೆ ಸುತ್ತಾಟ ನಡೆಸಿ ವಿಶ್ವಾಸ ಗಳಿಸಿ ಬಳಿಕ ಬಾಡಿಗೆ ರೂಂಗೆ ಕರೆದೊಯ್ದು ದೈಹಿಕ ಸಂಪರ್ಕ ಬೆಳೆಸಿದ್ದಲ್ಲದೆ, ಅದರ ವೀಡಿಯೋ ಚಿತ್ರೀಕರಿಸಿಕೊಂಡು ಬ್ಲ್ಯಾಕ್‌ಮೇಲ್ ಕೂಡಾ ಮಾಡುತ್ತಿದ್ದ. ಅನೇಕ ಬಾರಿ ಆಕೆಯನ್ನು ಪುತ್ತೂರು ಬಳಿಯ ಬಾಡಿಗೆ ರೂಂಗೆ ಕರೆದೊಯ್ಡು ದೈಹಿಕವಾಗಿ ಬಳಸಿಕೊಂಡಿದ್ದ.

ಕಡಬ: ಪ್ರೀತಿಸುವ ನಾಟಕವಾಡಿ ಕಾಲೇಜು ವಿದ್ಯಾರ್ಥಿನಿಯ ಅತ್ಯಾಚಾರ; ಆರೋಪಿಯ ಬಂಧನ Read More »

ನಂದಿನಿ ಇಡ್ಲಿ ಹಾಗೂ ದೋಸೆ ಹಿಟ್ಟಿಗೆ ಹೆಚ್ಚಿದ ಬೇಡಿಕೆ/ ಶೀಘ್ರದಲ್ಲೇ ಇತರ ಜಿಲ್ಲೆಗಳಿಗೂ ವಿಸ್ತರಣೆ

ಸಮಗ್ರ ನ್ಯೂಸ್‌: ಕೆಎಂಎಫ್ ಪರಿಚಯಿಸಿದ ನಂದಿನಿ ಇಡ್ಲಿ ಹಾಗೂ ದೋಸೆ ಹಿಟ್ಟಿಗೆ ಭಾರಿ ಬೇಡಿಕೆ ಸೃಷ್ಟಿಯಾಗಿದ್ದು, ಕೇವಲ ಮೂರು ದಿನದಲ್ಲಿ ಬರೋಬ್ಬರಿ 2250 ಮೆಟ್ರಿಕ್ ಟನ್ ಹಿಟ್ಟು ಮಾರಾಟವಾಗಿದೆ. ಸದ್ಯ ಬೆಂಗಳೂರಿನಲ್ಲಿ ಪ್ರಾಯೋಗಿಕವಾಗಿ ಆರಂಭಿಸಿರುವ ದೋಸೆ ಹಿಟ್ಟಿನ ಮಾರಾಟಕ್ಕೆ ಸಖತ್ ಬೇಡಿಕೆ ಸೃಷ್ಟಿಯಾದ್ದು, ಶೀಘ್ರದಲ್ಲೇ ಇತರ ಜಿಲ್ಲೆಗಳಿಗೂ ದೋಸೆ ಹಿಟ್ಟಿನ ವ್ಯಾಪಾರ ವಿಸ್ತರಿಸಲು ಕೆಎಂಎಫ್ ಸಜ್ಜಾಗುತ್ತಿದೆ. ರಾಜಧಾನಿಯಲ್ಲಿ ಉತ್ತಮ ಸ್ಪಂದನೆ ಸಿಗುತ್ತಿದ್ದಂತೆಯೇ ರಾಜ್ಯದ ಇತರೆ ಜಿಲ್ಲೆಗಳಲ್ಲೂ ಶೀಘ್ರದಲ್ಲೇ ದೋಸೆ-ಇಡ್ಲಿ ಹಿಟ್ಟಿನ ಮಾರಾಟ ಮಾಡಲು ನಿರ್ಧಾರ ಮಾಡಿದೆ. ಇತ್ತ

ನಂದಿನಿ ಇಡ್ಲಿ ಹಾಗೂ ದೋಸೆ ಹಿಟ್ಟಿಗೆ ಹೆಚ್ಚಿದ ಬೇಡಿಕೆ/ ಶೀಘ್ರದಲ್ಲೇ ಇತರ ಜಿಲ್ಲೆಗಳಿಗೂ ವಿಸ್ತರಣೆ Read More »

ಬಿಪಿಎಸ್‌ಸಿ ಪರೀಕ್ಷೆ ರದ್ದುಗೊಳಿಸುವಂತೆ ಒತ್ತಾಯ/ ಆಮರಣಾಂತ ಉಪವಾಸ ಆರಂಭಿಸಿದ ಪ್ರಶಾಂತ್ ಕಿಶೋರ್

ಸಮಗ್ರ ನ್ಯೂಸ್‌: ಬಿಹಾರ ಲೋಕಸೇವಾ ಆಯೋಗ(ಬಿಪಿಎಸ್‌ಸಿ) ಇತ್ತೀಚೆಗೆ ನಡೆಸಿದ ಪರೀಕ್ಷೆಯನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ಜನ್ ಸೂರಾಜ್ ಸಂಸ್ಥಾಪಕ ಪ್ರಶಾಂತ್ ಕಿಶೋರ್ ಅವರು ಗುರುವಾರ ಆಮರಣಾಂತ ಉಪವಾಸ ಆರಂಭಿಸಿದ್ದಾರೆ. ನಿತೀಶ್ ಕುಮಾರ್ ಸರ್ಕಾರಕ್ಕೆ ಪರೀಕ್ಷೆ ರದ್ದುಗೊಳಿಸುವಂತೆ 48 ಗಂಟೆಗಳ ಡೆಡ್ ಲೈನ್ ನೀಡಿದ ಮೂರು ದಿನಗಳ ನಂತರ, ರಾಜ್ಯದ ರಾಜಧಾನಿಯ ಐತಿಹಾಸಿಕ ಗಾಂಧಿ ಮೈದಾನದಲ್ಲಿ ಪ್ರಶಾಂತ್ ಕಿಶೋರ್ ಇಂದಿನಿಂದ ಆಮರಣಾಂತ ಉಪವಾಸ ಆರಂಭಿಸಿದ್ದಾರೆ. ಡಿಸೆಂಬರ್ 13 ರಂದು ನಡೆದ ಪರೀಕ್ಷೆಯನ್ನು ರದ್ದುಪಡಿಸಿ, ಹೊಸದಾಗಿ ಪರೀಕ್ಷೆ ನಡೆಸುವುದು ನನ್ನ ಪ್ರಮಖ

ಬಿಪಿಎಸ್‌ಸಿ ಪರೀಕ್ಷೆ ರದ್ದುಗೊಳಿಸುವಂತೆ ಒತ್ತಾಯ/ ಆಮರಣಾಂತ ಉಪವಾಸ ಆರಂಭಿಸಿದ ಪ್ರಶಾಂತ್ ಕಿಶೋರ್ Read More »

ದಾಂಪತ್ಯ ಜೀವನಕ್ಕೆ ಕಾಲಿಟ್ಟ‌ ಬಹುಭಾಷಾ ಗಾಯಕ ಅರ್ಮಾನ್ ಮಲಿಕ್

ಸಮಗ್ರ ನ್ಯೂಸ್: ಜನಪ್ರಿಯ ಗಾಯಕ ಅರ್ಮಾನ್ ಮಲಿಕ್ ಅವರ ಜೀವನದಲ್ಲಿ ಹೊಸ ಅಧ್ಯಾಯ ಆರಂಭ ಆಗಿದೆ. ಇಂದು (ಜನವರಿ 2) ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಅರ್ಮಾನ್ ಮಲಿಕ್ ಅವರು ಪ್ರಿಯತಮೆ ಆಶ್ನಾ ಶ್ರಾಫ್ ಜೊತೆ ಮದುವೆಆಗಿದ್ದಾರೆ. ಮದುವೆಯ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಅರ್ಮಾನ್ ಮಲಿಕ್ ಅವರು ಸೋಶಿಯಲ್ ಮೀಡಿಯಾದಲ್ಲಿ ಆಯಕ್ಟೀವ್ ಆಗಿರುತ್ತಾರೆ. ತಮ್ಮ ಫ್ಯಾನ್ಸ್ ಜೊತೆ ಅವರು ಸಂಪರ್ಕದಲ್ಲಿ ಇರುತ್ತಾರೆ. ಆದರೆ ವೈಯಕ್ತಿಕ ಜೀವನದ ವಿಚಾರಗಳನ್ನು ಸಾಧ್ಯವಾದಷ್ಟು ಗೌಪ್ಯವಾಗಿ ಇಡುತ್ತಾರೆ. ಈಗ ಕೇವಲ

ದಾಂಪತ್ಯ ಜೀವನಕ್ಕೆ ಕಾಲಿಟ್ಟ‌ ಬಹುಭಾಷಾ ಗಾಯಕ ಅರ್ಮಾನ್ ಮಲಿಕ್ Read More »

ಧರ್ಮಸ್ಥಳ: ಮಲಿನಗೊಳ್ಳುತ್ತಿದ್ದಾಳೆ‌ ಜೀವನದಿ ನೇತ್ರಾವತಿ| ಈಕೆಯ ಉಪನದಿಯಲ್ಲಿ ಪತ್ತೆಯಾಯ್ತು ಗೋಮಾಂಸ ತ್ಯಾಜ್ಯ| ರುಂಡ, ಮುಂಡ ಕತ್ತರಿಸಿ‌ ಎಸೆದ ದುರುಳರು

ಸಮಗ್ರ ನ್ಯೂಸ್: ಕರ್ನಾಟಕದ ಪ್ರಸಿದ್ಧ ಧಾರ್ಮಿಕ ಪುಣ್ಯಕ್ಷೇತ್ರ ಧರ್ಮಸ್ಥಳದ ಪವಿತ್ರ ನದಿ ನೇತ್ರಾವತಿಯನ್ನು ಗೋ ಹಂತಕರು ಗೋಮಾಂಸ ತ್ಯಾಜ್ಯ ಎಸೆದು ಮಲಿನ ಮಾಡಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ಅನ್ನಾರ್ ಎಂಬಲ್ಲಿ ದುಷ್ಕೃತ್ಯ ಎಸಗಲಾಗಿದೆ. ನೇತ್ರಾವತಿಯನ್ನು ಸೇರುವ ಉಪನದಿ ಮೃತ್ಯುಂಜಯ ಹೊಳೆಗೆ ಗೋ ಹತ್ಯೆಯ ನಂತರದ ತ್ಯಾಜ್ಯವನ್ನು ದುರುಳರು ಎಸೆದಿದ್ದಾರೆ. ಪಶ್ಚಿಮ ಘಟ್ಟದಿಂದ ಹರಿದು ಧರ್ಮಸ್ಥಳ ಬಳಿ ನೇತ್ರಾವತಿಯನ್ನು ಸೇರುವ ಮೃತ್ಯುಂಜಯ ಹೊಳೆಯಲ್ಲಿ ಮೂಟೆಗಟ್ಟಲೆ ಗೋವಿನ ರುಂಡ,

ಧರ್ಮಸ್ಥಳ: ಮಲಿನಗೊಳ್ಳುತ್ತಿದ್ದಾಳೆ‌ ಜೀವನದಿ ನೇತ್ರಾವತಿ| ಈಕೆಯ ಉಪನದಿಯಲ್ಲಿ ಪತ್ತೆಯಾಯ್ತು ಗೋಮಾಂಸ ತ್ಯಾಜ್ಯ| ರುಂಡ, ಮುಂಡ ಕತ್ತರಿಸಿ‌ ಎಸೆದ ದುರುಳರು Read More »

ಸರಿಗಮಪ‌ ಜ್ಯೂರಿ, ರಿದಂ ಮಾಂತ್ರಿಕ ಎಸ್.ಬಾಲಿ ಇನ್ನಿಲ್ಲ

ಸಮಗ್ರ ನ್ಯೂಸ್: ಜೀಕನ್ನಡ ವಾಹಿನಿಯಲ್ಲಿ ಸರಿಗಮಪ ಕಾರ್ಯಕ್ರಮದಲ್ಲಿ ಜ್ಯೂರಿ ಮೆಂಬರ್ ಆಗಿ ಕಾಣಿಸಿಕೊಳ್ತಿದ್ದ ಬಹುವಾದ್ಯ ಪರಿಣಿತರಾದ ಎಸ್. ಬಾಲಿ ಎಂದೇ ಜನಪ್ರಿಯರಾದ ಎಸ್ ಬಾಲಸುಬ್ರಹ್ಮಣ್ಯಂ ಅವರು ನಿಧನರಾಗಿದ್ದಾರೆ. ರಿದಮ್ ಕಿಂಗ್​ ಎಂದೇ ಕರೆಸಿಕೊಳ್ತಿದ್ದ ಎಸ್​ ಬಾಲಿ ಅವರು 71ನೇ ವಯಸ್ಸಿನಲ್ಲಿ ಕೊನೆಯುಸಿರೆಳೆದಿದ್ದಾರೆ. ಸರಿಗಮಪ ಕಾರ್ಯಕ್ರಮದಲ್ಲಿ ಜ್ಯೂರಿಯಾಗಿ ಕಾಣಿಸಿಕೊಳ್ಳುತ್ತಿದ್ದ ಎಸ್​ ಬಾಲಿ ಅವರು ಸ್ಪರ್ಧಿಗಳಿಗೆ ಸ್ಕೋರ್ ನೀಡುವುದರಲ್ಲೂ ಶಿಸ್ತಿನ ಸಿಪಾಯಿಯಾಗಿದ್ದರು. ಹಲವು ವಾದ್ಯಗಳನ್ನು ನುಡಿಸುವಲ್ಲಿ ಪರಿಣಿತರಾಗಿದ್ದ ಎಸ್ ಬಾಲಿ ನಿಧನಕ್ಕೆ ಅನೇಕರು ಸಂತಾಪ ಸೂಚಿಸಿದ್ದಾರೆ. ಖ್ಯಾತ ವಾದ್ಯಗಾರ, ಸಂಗೀತ

ಸರಿಗಮಪ‌ ಜ್ಯೂರಿ, ರಿದಂ ಮಾಂತ್ರಿಕ ಎಸ್.ಬಾಲಿ ಇನ್ನಿಲ್ಲ Read More »

ರಾಜ್ಯದ ಜನತೆಗೆ ಮತ್ತೊಂದು ‌ಬೆಲೆ ಏರಿಕೆ ಬಿಸಿ| ಬಸ್ ಪ್ರಯಾಣ ದರ 15% ಏರಿಕೆಗೆ ಸಚಿವ ಸಂಪುಟ ಅಸ್ತು

ಸಮಗ್ರ ನ್ಯೂಸ್: ರಾಜ್ಯದ ಜನತೆಗೆ ಮತ್ತೊಂದು ಶಾಕ್ ಎನ್ನುವಂತೆ ಸಾರಿಗೆ ಬಸ್ಸುಗಳ ಟಿಕೆಟ್ ದರವನ್ನು ಶೇ.15ರಷ್ಟು ಹೆಚ್ಚಳ ಪ್ರಸ್ತಾವನೆಗೆ ರಾಜ್ಯ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಹೀಗಾಗಿ ಶೀಘ್ರವೇ ಸಾರಿಗೆ ಬಸ್ ಟಿಕೆಟ್ ದರದ ಶಾಕ್ ಜನತೆಗೆ ಉಂಟಾಗಲಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆದಿದ್ದು, ಈ ಸಭೆಯಲ್ಲಿ ಸಾರಿಗೆ ಬಸ್ಸುಗಳ ಟಿಕೆಟ್ ದರ ಹೆಚ್ಚಳದ ಪ್ರಸ್ತಾವನೆ ಕುರಿತಂತೆ ಚರ್ಚೆ ನಡೆಸಲಾಯಿತು. ಅಂತಿಮವಾಗಿ ಶೇ.15ರಷ್ಟು ಟಿಕೆಟ್ ದರ ಏರಿಕೆಗೆ ಸಂಪುಟ ಅನುಮೋದನೆ ನೀಡಿರುವುದಾಗಿ

ರಾಜ್ಯದ ಜನತೆಗೆ ಮತ್ತೊಂದು ‌ಬೆಲೆ ಏರಿಕೆ ಬಿಸಿ| ಬಸ್ ಪ್ರಯಾಣ ದರ 15% ಏರಿಕೆಗೆ ಸಚಿವ ಸಂಪುಟ ಅಸ್ತು Read More »

ಮನುಭಾಕರ್, ಡಿ.ಗುಕೇಶ್ ಸೇರಿ‌ ನಾಲ್ವರಿಗೆ ಖೇಲ್ ರತ್ನ ಪ್ರಶಸ್ತಿ ಪ್ರಕಟ

ಸಮಗ್ರ ನ್ಯೂಸ್: ಒಲಿಂಪಿಕ್ ಪದಕ ವಿಜೇತೆ ಶೂಟರ್ ಮನು ಭಾಕರ್, ಚೆಸ್ ವರ್ಲ್ಡ್ ಚಾಂಪಿಯನ್ ಡಿ.ಗುಕೇಶ್ ಸೇರಿದಂತೆ ನಾಲ್ವರು ಕ್ರೀಡಾಪಟುಗಳಿಗೆ ಕೇಂದ್ರ ಕ್ರೀಡಾ ಸಚಿವಾಲಯ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ ಘೋಷಿಸಿದೆ. ಭಾರತೀಯ ಹಾಕಿ ತಂಡದ ನಾಯಕ ಹರ್ಮನ್ ಪ್ರೀತ್ ಸಿಂಗ್ ಹಾಗೂ ಪ್ಯಾರಾಲಿಂಪಿಕ್ ಚಿನ್ನದ ಪದಕ ವಿಜೇತ ಪ್ರವೀಣ್ ಕುಮಾರ್ ಈ ಪ್ರತಿಷ್ಠಿತ ಪ್ರಶಸ್ತಿಗೆ ಭಾಜನವಾಗಿರುವ ಇನ್ನಿಬ್ಬರು ಕ್ರೀಡಾಪಟುಗಳು. ಭಾರತದ ಪುರುಷರ ಹಾಕಿ ತಂಡದ ನಾಯಕ ಹರ್ಮನ್ ಪ್ರೀತ್ ಸಿಂಗ್ ಮತ್ತು ಪ್ಯಾರಾಲಿಂಪಿಯನ್ ಪ್ರವೀಣ್

ಮನುಭಾಕರ್, ಡಿ.ಗುಕೇಶ್ ಸೇರಿ‌ ನಾಲ್ವರಿಗೆ ಖೇಲ್ ರತ್ನ ಪ್ರಶಸ್ತಿ ಪ್ರಕಟ Read More »

ಕರ್ತವ್ಯದ ಬಿಡುವಿನಲ್ಲಿ ಮೊಬೈಲ್ ನಲ್ಲಿ ಓದಿ ಪಿಎಸ್ಐ ಆದ ಪೊಲೀಸ್ ಜೀಪು ಚಾಲಕ ಮತ್ತು ಪೇದೆ| ವಿಶಿಷ್ಟ ಸಾಧನೆಗೈದ ಕಡಬದ ಪ್ರದೀಪ್, ಬಂಟ್ವಾಳದ ಮುತ್ತಪ್ಪ

ಸಮಗ್ರ ನ್ಯೂಸ್: ಕರ್ತವ್ಯದ ಬಿಡುವಿನ ವೇಳೆಯಲ್ಲಿ ಮೊಬೈಲ್‌ನಲ್ಲೇ ಪರೀಕ್ಷೆ ತಯಾರಿ ನಡೆಸಿದ ಪೊಲೀಸ್ ಜೀಪು ಚಾಲಕ ಮತ್ತು ಠಾಣಾ ಸಿಬ್ಬಂದಿಯೊಬ್ಬರು, ಪಿಎಸ್‌ಐ ಹುದ್ದೆ ಗೇರಲು ಅರ್ಹತೆ ಗಿಟ್ಟಿಸಿದ್ದಾರೆ. ಕೇವಲ ಸಾಮಾಜಿಕ ಜಾಲತಾಣ ಜಾಲಾಡಲು, ಇಲ್ಲವೆ ಗೇಮಿಂಗ್‌ ಹೆಚ್ಚು ಮೊಬೈಲ್ ಬಳಸುವವರ ಮಧ್ಯೆ ಸಾಧನೆಗೆ ಮೊಬೈಲ್ ಬಳಕೆ ಮಾಡಿ ಈ ಇಬ್ಬರೂ ಇತರರು ಹುಬ್ಬೇರಿಸುವಂತೆ ಮಾಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಗ್ರಾಮಾಂತರ ವಿಭಾಗದ ಕಡಬ ಪೊಲೀಸ್ ಠಾಣೆ ಗಸ್ತು ವಾಹನದ ಚಾಲಕ ಪ್ರದೀಪ್ ಹಾಗೂ ಬಂಟ್ವಾಳ ಗ್ರಾಮಾಂತರ ಠಾಣಾ

ಕರ್ತವ್ಯದ ಬಿಡುವಿನಲ್ಲಿ ಮೊಬೈಲ್ ನಲ್ಲಿ ಓದಿ ಪಿಎಸ್ಐ ಆದ ಪೊಲೀಸ್ ಜೀಪು ಚಾಲಕ ಮತ್ತು ಪೇದೆ| ವಿಶಿಷ್ಟ ಸಾಧನೆಗೈದ ಕಡಬದ ಪ್ರದೀಪ್, ಬಂಟ್ವಾಳದ ಮುತ್ತಪ್ಪ Read More »