ಚಾರ್ಮಾಡಿ ಘಾಟ್: ಅಣ್ಣಪ್ಪ ಸ್ವಾಮಿ ದೇವಸ್ಥಾನ ಬಳಿ ಭಾರೀ ಕಾಳ್ಗಿಚ್ಚು
ಸಮಗ್ರ ನ್ಯೂಸ್: ಚಾರ್ಮಾಡಿ ಘಾಟಿಯ ಅಣ್ಣಪ್ಪ ಸ್ವಾಮಿ ದೇಗುಲದ ಸಮೀಪ ಅರಣ್ಯಕ್ಕೆ ಭಾರಿ ಪ್ರಮಾಣದಲ್ಲಿ ಕಾಡ್ಗಿಚ್ಚು ಆವರಿಸಿದ್ದು, ನೂರಾರು ಎಕರೆ ಅರಣ್ಯ ಬೆಂಕಿಗಾಹುತಿಯಾಗಿದೆ. ಅಗ್ನಿಶಾಮಕ ಸಿಬ್ಬಂದಿ ಕೂಡಲೇ ಸ್ಥಳಕ್ಕೆ ಬಂದು ಬೆಂಕಿ ನಂದಿಸಲು ಪ್ರಯತ್ನಿಸಿದರು. ರಸ್ತೆ ಬದಿ ಇದ್ದ ಬೆಂಕಿಯನ್ನಷ್ಟೇ ನಂದಿಸಲಾಗಿದ್ದು, ಗುಡ್ಡಕ್ಕೆ ಏರಿರುವ ಬೆಂಕಿ ನಂದಿಸಲು ಸಾಧ್ಯವಾಗದೆ ಪರದಾಡಿದರು. ಅಗ್ನಿಶಾಮಕ ಸಿಬ್ಬಂದಿ ಮಲ್ಲೇಶ್, ರಂಜಿತ್, ಮುತ್ತಪ್ಪ, ಅಶೋಕ್, ಮೋಹನ್ರಾಜ್ (ಚಾಲಕ) ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದಾರೆ. ಬೆಂಕಿಯ ಕೆನ್ನಾಲಿಗೆ 10 ಕಿ.ಲೋ ಮೀಟರ್ ದೂರಕ್ಕೂ ಕಾಣಿಸುತ್ತಿದೆ. ಸ್ಥಳೀಯರಲ್ಲಿ ಆತಂಕ […]
ಚಾರ್ಮಾಡಿ ಘಾಟ್: ಅಣ್ಣಪ್ಪ ಸ್ವಾಮಿ ದೇವಸ್ಥಾನ ಬಳಿ ಭಾರೀ ಕಾಳ್ಗಿಚ್ಚು Read More »