January 2025

ಕಡಬ: ಸಿನಿಮೀಯ ಶೈಲಿಯಲ್ಲಿ ವಾಹನಕ್ಕೆ ಡೀಸೆಲ್ ತುಂಬಿಸಿ ಪರಾರಿ

ಸಮಗ್ರ ನ್ಯೂಸ್: ಬೆಳ್ಳಂಬೆಳಗ್ಗೆ ಕಡಬದ ಹಳೆಸ್ಟೇಶನ್‌ ಬಳಿಯ ಪೆಟ್ರೋಲ್‌ ಬಂಕೊಂದಕ್ಕೆ ವಾಹನದಲ್ಲಿ ಬಂದ ವ್ಯಕ್ತಿಯೊಬ್ಬ ವಾಹನಕ್ಕೆ ಫುಲ್‌ಟ್ಯಾಂಕ್‌ ಡೀಸೆಲ್‌ ತುಂಬಿಸಿಕೊಂಡು ಹಣ ನೀಡದೆ ಸಿನಿಮೀಯ ಶೈಲಿಯಲ್ಲಿ ಪರಾರಿಯಾದ ಘಟನೆ ಜ.23ರಂದು ನಡೆದಿದೆ. ಬೆಳಗ್ಗೆ 6 ಗಂಟೆಯ ಸುಮಾರಿಗೆ ಕೆಎ 01 ಎಂಎಕ್ಸ್‌ 9632 ನೋಂದಣಿ ಸಂಖ್ಯೆಯ ಥಾರ್‌ ಜೀಪ್‌ನಲ್ಲಿ ಬಂದ ವ್ಯಕ್ತಿ ತನ್ನ ವಾಹನಕ್ಕೆ ಫುಲ್‌ ಟ್ಯಾಂಕ್‌ ಡೀಸೆಲ್‌ ತುಂಬಿಸಿಕೊಂಡಿದ್ದಾನೆ. ಬಳಿಕ ಒಂದು ಕ್ಯಾನ್‌ ನೀಡಿ ಅದರಲ್ಲಿ ಪೆಟ್ರೋಲ್‌ ತುಂಬಿಸಿ ಕೊಡಲು ಬಂಕ್‌ನ ಸಿಬಂದಿಗೆ ಹೇಳಿದ್ದಾನೆ. ಪೆಟ್ರೋಲ್‌ […]

ಕಡಬ: ಸಿನಿಮೀಯ ಶೈಲಿಯಲ್ಲಿ ವಾಹನಕ್ಕೆ ಡೀಸೆಲ್ ತುಂಬಿಸಿ ಪರಾರಿ Read More »

ಭವಿಷ್ಯ ಸಿನೆಮಾಸ್ ನಿರ್ಮಾಣದಲ್ಲಿ ಮೂಡಿಬರುತ್ತಿರುವ ಹೊಸ ಚಲನಚಿತ್ರಕ್ಕೆ ಕಲಾವಿದರು ಬೇಕಾಗಿದ್ದಾರೆ|ಸುಳ್ಯ ತಾಲೂಕಿನ ಕಲಾವಿದರಿಗೆ ಮುಕ್ತ ಅವಕಾಶ

ಸಮಗ್ರ ನ್ಯೂಸ್: ಬೆಂಗಳೂರಿನ ಭವಿಷ್ಯ ಸಿನೆಮಾಸ್ ನಿರ್ಮಾಣದಲ್ಲಿ ಮೂಡಿಬರುತ್ತಿರುವ ಹೊಸ ಚಲನಚಿತ್ರಕ್ಕೆ ಕಲಾವಿದರು ಬೇಕಾಗಿದ್ದಾರೆ. ಚಲನಚಿತ್ರದ ಚಿತ್ರೀಕರಣವನ್ನು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಆಸುಪಾಸಿನಲ್ಲಿ ಮಾಡುತ್ತಿದ್ದು, ಇದೀಗ ಕಲಾವಿದರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ನಟನೆಯಲ್ಲಿ ಆಸಕ್ತಿ ಉಳ್ಳವರು ಹಾಗೂ ನಾಟಕದ ಹಿನ್ನೆಲೆ ಇರುವವರು ನಿಮ್ಮ ಅಭಿನಯದ ವಿಡಿಯೋವನ್ನು ಭವಿಷ್ಯ ಸಿನೆಮಾಸ್ ಸಂಸ್ಥೆಯ ವಾಟ್ಸ್ ಪ್ ನಂಬರ್ 7483953979 ಗೆ ಕಳುಹಿಸುವಂತೆ ಮನವಿ ಮಾಡಿಕೊಂಡಿದ್ದಾರೆ. ಸಂಪರ್ಕಿಸಿ: 7483953979

ಭವಿಷ್ಯ ಸಿನೆಮಾಸ್ ನಿರ್ಮಾಣದಲ್ಲಿ ಮೂಡಿಬರುತ್ತಿರುವ ಹೊಸ ಚಲನಚಿತ್ರಕ್ಕೆ ಕಲಾವಿದರು ಬೇಕಾಗಿದ್ದಾರೆ|ಸುಳ್ಯ ತಾಲೂಕಿನ ಕಲಾವಿದರಿಗೆ ಮುಕ್ತ ಅವಕಾಶ Read More »

ಮಹಾರಾಷ್ಟ್ರ ಜಲಗಾಂವ್ ನಲ್ಲಿ ಭೀಕರ ಅಗ್ನಿ ದುರಂತ| ಪುಷ್ಪಕ್ ಎಕ್ಸ್‌ಪ್ರೆಸ್‌ ರೈಲಿನಲ್ಲಿ 20 ಪ್ರಯಾಣಿಕರು ಸಜೀವ ದಹನ

ಸಮಗ್ರ ನ್ಯೂಸ್: ಮಹಾರಾಷ್ಟ್ರದ ಜಲಗಾಂವ್ ನಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, ಜಲಗಾಂವ್ ಬಳಿ ಪುಷ್ಪಕ ಎಕ್ಸ್ಪ್ರೆಸ್ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡು 20 ಜನ ಪ್ರಯಾಣಿಕರು ಸಜೀವವಾಗಿ ದಹನಗೊಂಡಿದ್ದಾರೆ. ಚಲಿಸುತ್ತಿದ್ದ ರೈಲಿನಲ್ಲಿ ಏಕಾಏಕಿ ಅಗ್ನಿ ಕಾಣಿಸಿಕೊಂಡಿದ್ದು ಈ ವೇಳೆ 20 ಪ್ರಯಾಣಿಕರು ಪುಷ್ಪಕ ಎಕ್ಸ್ಪ್ರೆಸ್ ರೈಲಿನಲ್ಲಿ ಸಿಲುಕಿ ಸಜೀವವಾಗಿ ದಹನಗೊಂಡಿದ್ದಾರೆ. ಘಟನಾ ಸ್ಥಳಕ್ಕೆ ಕೂಡಲೇ ಪೊಲೀಸರು ಭೇಟಿ ನೀಡಿದ್ದು, ಅಲ್ಲದೇ ಅಗ್ನಿಶಾಮಕ ದಳ ಆಗಮಿಸಿ ಸಿಬ್ಬಂದಿ ಕೂಡ ಆಗಿಸಿ ಬೆಂಕಿ ನಂದಿಸಿದ್ದಾಗಿ ತಿಳಿದುಬಂದಿದೆ.

ಮಹಾರಾಷ್ಟ್ರ ಜಲಗಾಂವ್ ನಲ್ಲಿ ಭೀಕರ ಅಗ್ನಿ ದುರಂತ| ಪುಷ್ಪಕ್ ಎಕ್ಸ್‌ಪ್ರೆಸ್‌ ರೈಲಿನಲ್ಲಿ 20 ಪ್ರಯಾಣಿಕರು ಸಜೀವ ದಹನ Read More »

ಪ್ರತ್ಯೇಕ ಅಪಘಾತದಲ್ಲಿ ಸಾವಿನ ಸಂಖ್ಯೆ 14ಕ್ಕೆ ಏರಿಕೆ| ಮೃತರಿಗಾಗಿ ಕಂಬನಿ ಮಿಡಿದ ಸಿಎಂ

ಸಮಗ್ರ ನ್ಯೂಸ್: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಹಾಗೂ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಒಟ್ಟು 14 ಜನ ಸಾವನ್ನಪ್ಪಿದ್ದಾರೆ. ಈ ಕುರಿತಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಂಬನಿ ಮಿಡಿದಿದ್ದಾರೆ. ಹಣ್ಣು ತರಕಾರಿ ತುಂಬಿ ವ್ಯಾಪಾರಸ್ಥರೊಂದಿಗೆ ಸಂತೆಗೆ ತೆರಳುತ್ತಿದ್ದ ಲಾರಿಯೊಂದು ಕಂದಕ್ಕಕ್ಕೆ ಉರುಳಿ9 ಜನರು ಜೀವ ಕಳೆದುಕೊಂಡು 10ಕ್ಕೂ ಜನ ಗಂಭೀರ ಗಾಯಗೊಂಡಿದ್ದಾರೆ. ಈ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಗುಳ್ಳಾಪುರ ಭಾಗದಲ್ಲಿ ಬೆಳಗಿನ ಜಾವ ನಡೆದಿದೆ. ಕ್ರೂಸರ್ ವಾಹನ ಪಲ್ಟಿಯಾಗಿ

ಪ್ರತ್ಯೇಕ ಅಪಘಾತದಲ್ಲಿ ಸಾವಿನ ಸಂಖ್ಯೆ 14ಕ್ಕೆ ಏರಿಕೆ| ಮೃತರಿಗಾಗಿ ಕಂಬನಿ ಮಿಡಿದ ಸಿಎಂ Read More »

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ| 21ನೇ ಆರೋಪಿ ಅತೀಕ್ ಎನೈಎ ಬಲೆಗೆ

ಸಮಗ್ರ ನ್ಯೂಸ್: ಬಿಜೆಪಿ ಮುಖಂಡ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣದಲ್ಲಿ 21ನೇ ಆರೋಪಿಯಾಗಿದ್ದ ಅತಿಕ್ ಅಹಮದ್ ನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಬಂಧಿಸಿದೆ. ಬೆಳ್ಳಾರೆಯಲ್ಲಿ 2022ರ ಜುಲೈನಲ್ಲಿ ಪ್ರವೀಣ್‌ ನೆಟ್ಟಾರ್ ಹತ್ಯೆ ನಡೆದಿತ್ತು. ಈ ಹತ್ಯೆಯಲ್ಲಿ ಅತೀಕ್ ಹತ್ಯಾಕೋರರಿಗೆ ಸಹಾಯ ಮಾಡಿದ್ದ ಎನ್ನಲಾಗಿದೆ. ಪೊಲೀಸರು ಈವರೆಗೂ 21 ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅತೀಕ್, ಪ್ರಕರಣದ ಮುಖ್ಯ ಪಿತೂರಿಕಾರ ಮುಸ್ತಫಾ ಪೈಚಾ‌ರ್ ಅವರಿಗೆ ಆಶ್ರಯ ನೀಡಿ ಸಹಾಯ ಮಾಡಿದ್ದ ಎನ್ನಲಾಗಿದೆ. ಮುಸ್ತಫಾ ಈ ಹತ್ಯೆಯನ್ನು ಯೋಜಿಸಿ ನಡೆಸಿದ್ದು

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ| 21ನೇ ಆರೋಪಿ ಅತೀಕ್ ಎನೈಎ ಬಲೆಗೆ Read More »

ತರಕಾರಿ ಲಾರಿ ಪಲ್ಟಿ| 9 ಮಂದಿ ದುರ್ಮರಣ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಬೆಳ್ಳಂ ಬೆಳಗ್ಗೆ ಭೀಕರ ಅಪಘಾತ ಸಂಭವಿಸಿದ್ದು, ತರಕಾರಿ ತುಂಬಿದ ಲಾರಿ ಪಲ್ಟಿಯಾಗಿ 9 ಮಂದಿ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಗುಳ್ಳಾಪುರದಲ್ಲಿ ಘಟ್ಟ ಭಾಗದಲ್ಲಿ ನಡೆದಿದೆ.ಅಪಘಾತದಲ್ಲಿ 9 ಮಂದಿ ಮೃತಪಟ್ಟು, 15 ಕ್ಕೂ ಜನರು ಗಾಯಗೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ತರಕಾರಿ ತುಂಬಿದ್ದ ಲಾರಿಯಲ್ಲಿ 25 ಜನ ಪ್ರಯಾಣಿಸುತ್ತಿದ್ದರು. ಮೃತರು ಹಾವೇರಿ ಭಾಗದವರು ಎಂದು ತಿಳಿದು ಬಂದಿದೆ. ಸವಣೂರಿನಿಂದ ಕುಮಟಾಗೆ ಲಾರಿ ತೆರಳುತ್ತಿದ್ದಾಗ ಚಾಲಕನ ನಿಯಂತ್ರಣ

ತರಕಾರಿ ಲಾರಿ ಪಲ್ಟಿ| 9 ಮಂದಿ ದುರ್ಮರಣ Read More »

ಭಾರತ ಹಾಗೂ ಇಂಗ್ಲೆಂಡ್‌ ನಡುವೆ ಟಿ20 ಸರಣಿ/ ನಾಳೆ ಮೊದಲ ಪಂದ್ಯ

ಸಮಗ್ರ ನ್ಯೂಸ್‌: ಭಾರತ ಹಾಗೂ ಇಂಗ್ಲೆಂಡ್‌ ನಡುವೆ ಐದು ಪಂದ್ಯಗಳ ಟಿ20 ಸರಣಿಯು ನಾಳೆಯಿಂದ ಆರಂಭವಾಗಲಿದ್ದು, ಮೊದಲನೇ ಪಂದ್ಯ ಈಡನ್‌ ಗಾರ್ಡನ್ಸ್‌ ಕ್ರೀಡಾಂಗಣದಲ್ಲಿ ನಡೆಯಲಿದೆ. 2024ರ ಐಸಿಸಿ ಟಿ20 ವಿಶ್ವಕಪ್‌ ಸೆಮಿಫೈನಲ್‌ ಪಂದ್ಯದಲ್ಲಿ ಇಂಗ್ಲೆಂಡ್‌ ತಂಡವನ್ನು ಭಾರತ ತಂಡ ಸೋಲಿಸಿತ್ತು. ಇದಾದ ಬಳಿಕ ಇದೇ ಮೊದಲ ಬಾರಿ ಉಭಯ ತಂಡಗಳು ಮುಖಾಮುಖಿಯಾಗುತ್ತಿವೆ. ಐಸಿಸಿ ಟಿ20ಐ ಶ್ರೇಯಾಂಕದಲ್ಲಿ ಸೂರ್ಯಕುಮಾರ್‌ ಯಾದವ್‌ ನಾಯಕತ್ವದ ಭಾರತ ತಂಡ ಅಗ್ರ ಸ್ಥಾನವನ್ನು ಅಲಂಕರಿಸಿದೆ. ಜೋಸ್‌ ಬಟ್ಲರ್‌ ನಾಯಕತ್ವದ ಇಂಗ್ಲೆಂಡ್‌ ತಂಡ ಮೂರನೇ ಸ್ಥಾನದಲ್ಲಿದೆ.

ಭಾರತ ಹಾಗೂ ಇಂಗ್ಲೆಂಡ್‌ ನಡುವೆ ಟಿ20 ಸರಣಿ/ ನಾಳೆ ಮೊದಲ ಪಂದ್ಯ Read More »

ಶಾರ್ಟ್ ಸರ್ಕ್ಯೂಟ್ ಗೆ 7 ಹೋರಿಗಳು ಸಜೀವ ದಹನ

ಸಮಗ್ರ ನ್ಯೂಸ್: ಶಾರ್ಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ ಸಂಭವಿಸಿ ಕೊಟ್ಟಿಗೆಯಲ್ಲಿದ್ದಂತಹ 7 ಹೋರಿಗಳು ಸಜೀವವಾಗಿ ದಹನ ಗೊಂಡಿರುವ ಹೃದಯವಿದ್ರಾವಕ ಘಟನೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಹೇಮಗಾರದಲ್ಲಿ ನಡೆದಿದೆ. ಮನೆಯಲ್ಲಿದ್ದ ವೈರ್‌ಗೆ ಶಾರ್ಟ್ ಸರ್ಕ್ಯೂರ್ಟ್‌ನಿಂದಾಗಿ ಕಿಡಿ ಹೊತ್ತಿದ್ದು, ಕೊಟ್ಟಿಗೆಯ ಅಟ್ಟದ ಮೇಲಿರುವ ಹುಲ್ಲಿಗೆ ಈ ಕಿಡಿ ತಾಗಿ ಬೆಂಕಿ ಹತ್ತಿದೆ. ಹುಲ್ಲಿಗೆ ಬಿದ್ದ ಬೆಂಕಿ ಆವರಿಸಿ ಕೊಟ್ಟಿಗೆಯಲ್ಲಿದ್ದ 7 ಹೋರಿಗಳು ಸಜೀವ ದಹನವಾಗಿದೆ. ಹೇಮಗಾರದ ಮಹೇಶ್ ಹೆಗಡೆ ಎಂಬವರ ಮನೆಯಲ್ಲಿ ಬಾನುವಾರ ತಡರಾತ್ರಿ ಘಟನೆ

ಶಾರ್ಟ್ ಸರ್ಕ್ಯೂಟ್ ಗೆ 7 ಹೋರಿಗಳು ಸಜೀವ ದಹನ Read More »

ಛತ್ತೀಸ್ ಘಡ್: ಮಾವೋವಾದಿಗಳ ವಿರುದ್ಧ ಕಾರ್ಯಾಚರಣೆ| 14 ಮಂದಿ ಮಾವೋವಾದಿಗಳು ಸಾವು

ಸಮಗ್ರ ನ್ಯೂಸ್: ಒಡಿಶಾದ ಗಡಿಯಲ್ಲಿರುವ ಛತ್ತೀಸ್ ಗಢದ ಗರಿಯಾಬಂದ್ ಜಿಲ್ಲೆಯ ಅರಣ್ಯದಲ್ಲಿ ನಡೆದ ಮಾವೋವಾದಿ ವಿರೋಧಿ ಕಾರ್ಯಾಚರಣೆಯಲ್ಲಿ ಮಾವೋವಾದಿ ಕಮಾಂಡರ್ ಜೈ ರಾಮ್ ಸೇರಿ ಕನಿಷ್ಠ 14 ಮಂದಿ ಮಾವೋವಾದಿಗಳು ಮೃತಪಟ್ಟಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಸೋಮವಾರ ಕಾರ್ಯಾಚರಣೆಯಲ್ಲಿ ಇಬ್ಬರು ಮಹಿಳಾ ಮಾವೋವಾದಿಗಳು ಮೃತಪಟ್ಟಿದ್ದಾರೆ ಎಂದು ಪೊಲೀಸರು ಹೇಳಿದ್ದರು. ಆದರೆ, ಕಾರ್ಯಾಚರಣೆಯ ನಂತರ ವಶಪಡಿಸಿಕೊಂಡ ಮೃತದೇಹಗಳ ಆಧಾರದ ಮೇಲೆ 14 ಮಂದಿ ಮಾವೋವಾದಿಗಳು ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಈ ಸಂಖ್ಯೆ ಇನ್ನಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ

ಛತ್ತೀಸ್ ಘಡ್: ಮಾವೋವಾದಿಗಳ ವಿರುದ್ಧ ಕಾರ್ಯಾಚರಣೆ| 14 ಮಂದಿ ಮಾವೋವಾದಿಗಳು ಸಾವು Read More »

ಮಂಗಳೂರು ಬ್ಯಾಂಕ್ ದರೋಡೆ ಪ್ರಕರಣ| ಮೂವರು ಆರೋಪಿಗಳು ಸೆರೆ

ಸಮಗ್ರ ನ್ಯೂಸ್: ಮಂಗಳೂರು ಕೋಟೆಕಾರ್ ಸಹಕಾರಿ ಸಂಘದ ತಲಪಾಡಿ ಕೆ.ಸಿ.ರೋಡ್ ಶಾಖೆಗೆ ಕಳೆದ ಶುಕ್ರವಾರ ನುಗ್ಗಿದ ದರೋಡೆಕೋರರು ಸಿಬ್ಬಂದಿಯನ್ನು ಬೆದರಿಸಿ ದರೋಡೆಗೈದು ಪರಾರಿಯಾದವರ ಪೈಕಿ ಮೂವರನ್ನು ಬಂಧಿಸಲಾಗಿದೆ ಎಂದು ಮಂಗಳೂರು ಪೊಲೀಸ್‌ ಕಮಿಷನರ್‌ ತಿಳಿಸಿದ್ದಾರೆ. ಕಾರೊಂದರಲ್ಲಿ ಬಂದ ಐವರು ಮುಸುಕುಧಾರಿಗಳ ತಂಡ ಬ್ಯಾಂಕ್ ಸಿಬ್ಬಂದಿಗೆ ಬಂದೂಕು ಹಾಗೂ ತಲವಾರು ತೋರಿಸಿ ಬೆದರಿಸಿ ಈ ದರೋಡೆ ನಡೆಸಿದ್ದರು. ದರೋಡೆ ಮಾಡಿದ ನಂತರ ಆರೋಪಿಗಳು ತಮಿಳುನಾಡಿನ ತಿರುವನ್ವೇಲಿಗೆ ತೆರಳಿದ್ದರು. ಬಂಧಿತರಿಂದ ತಲ್ವಾರ್, 2 ಪಿಸ್ತೂಲ್ ಹಾಗು ಇತರ ಸೊತ್ತುಗಳನ್ನು ಜಪ್ತಿ

ಮಂಗಳೂರು ಬ್ಯಾಂಕ್ ದರೋಡೆ ಪ್ರಕರಣ| ಮೂವರು ಆರೋಪಿಗಳು ಸೆರೆ Read More »