February 2025

ಚಂದ್ರದರ್ಶನ ಗೋಚರಿಸದ ಹಿನ್ನಲೆ| ಮಾ.2ರಿಂದ ರಮ್ಜಾನ್ ಉಪವಾಸ ಆರಂಭ

ಸಮಗ್ರ ನ್ಯೂಸ್: ಪವಿತ್ರ ರಮಝಾನ್ ಮಾಸದ ಚಂದ್ರ ದರ್ಶನವು ಶುಕ್ರವಾರ ಗೋಚರಿಸದೆ ಇರುವುದರಿಂದ ಮಾ.2ರಿಂದ ರಾಜ್ಯಾದ್ಯಂತ ಉಪವಾಸ ವ್ರತ ಆಚರಣೆ ನಡೆಸಲು ನಿರ್ಧರಿಸಲಾಗಿದೆ ಎಂದು ರಾಜ್ಯ ಚಂದ್ರ ದರ್ಶನ ಸಮಿತಿಯ ಸಂಚಾಲಕ ಮೌಲಾನಾ ಮಕ್ಸೂದ್ ಇಮ್ರಾನ್ ರಶಾದಿ ತಿಳಿಸಿದರು. ಶುಕ್ರವಾರ ಸಂಜೆ ನಗರದ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿರುವ ರಾಜ್ಯ ವಕ್ಫ್ ಬೋರ್ಡ್‌ನ ಕೇಂದ್ರ ಕಚೇರಿ(ದಾರುಲ್ ಔಕಾಫ್)ಯಲ್ಲಿ ಅಮೀರೆ ಶರೀಅತ್ ಮೌಲಾನಾ ಸಗೀರ್ ಅಹ್ಮದ್ ಖಾನ್ ರಶಾದಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ರಾಜ್ಯ ಹಾಗೂ ದೇಶದ ವಿವಿಧ ರಾಜ್ಯಗಳಲ್ಲಿ […]

ಚಂದ್ರದರ್ಶನ ಗೋಚರಿಸದ ಹಿನ್ನಲೆ| ಮಾ.2ರಿಂದ ರಮ್ಜಾನ್ ಉಪವಾಸ ಆರಂಭ Read More »

ಷೇರು ಮಾರುಕಟ್ಟೆಯಲ್ಲಿ ತಳಮಳ| ಪಾತಾಳಕ್ಕೆ ಕುಸಿತ ಕಂಡ ಸೆನ್ಸೆಕ್ಸ್, ನಿಪ್ಟಿ| 45 ನಿಮಿಷದಲ್ಲೇ 6 ಲಕ್ಷ ಕೋಟಿ ಲಾಸ್

ಸಮಗ್ರ ನ್ಯೂಸ್: ಭಾರತೀಯ ಷೇರು ಮಾರುಕಟ್ಟೆ ತೀವ್ರ ಕುಸಿತವನ್ನು ಅನುಭವಿಸಿತು, ಸೆನ್ಸೆಕ್ಸ್ ಮತ್ತು ನಿಫ್ಟಿ 50 ಸೂಚ್ಯಂಕಗಳು ಗಮನಾರ್ಹವಾಗಿ ಕುಸಿತದೊಂದಿಗೆ ಪ್ರಾರಂಭವಾದವು. 30 ಪ್ರಮುಖ ಸಂಸ್ಥೆಗಳನ್ನು ಒಳಗೊಂಡಿರುವ ಸೆನ್ಸೆಕ್ಸ್ 1,000 ಕ್ಕೂ ಹೆಚ್ಚು ಅಂಕಗಳ ಕುಸಿತವನ್ನು ಕಂಡಿತು, 73,579.44 ಕ್ಕೆ ಇಳಿಯಿತು. ಅದೇ ಸಮಯದಲ್ಲಿ, 50 ಪ್ರಮುಖ ಸಂಸ್ಥೆಗಳನ್ನು ಒಳಗೊಂಡಿರುವ ನಿಫ್ಟಿ 50 22,224.10 ಅಂಕಗಳಿಗೆ ಕುಸಿಯಿತು. ಈ ಕುಸಿತವು ಬಾಂಬೆ ಸ್ಟಾಕ್ ಎಕ್ಸ್ಚೇಂಜ್ (ಬಿಎಸ್‌ಇ) ನಲ್ಲಿ ಪಟ್ಟಿ ಮಾಡಲಾದ ಕಂಪನಿಗಳ ಮಾರುಕಟ್ಟೆ ಬಂಡವಾಳೀಕರಣದಲ್ಲಿ ತ್ವರಿತ ನಷ್ಟಕ್ಕೆ

ಷೇರು ಮಾರುಕಟ್ಟೆಯಲ್ಲಿ ತಳಮಳ| ಪಾತಾಳಕ್ಕೆ ಕುಸಿತ ಕಂಡ ಸೆನ್ಸೆಕ್ಸ್, ನಿಪ್ಟಿ| 45 ನಿಮಿಷದಲ್ಲೇ 6 ಲಕ್ಷ ಕೋಟಿ ಲಾಸ್ Read More »

ಮಂಗಳೂರು: ಕಾಂತಾರ ಸಿನಿಮಾ ರೀತಿ ದೈವ ಕಾರ್ಯಕ್ಕೆ ಅಡ್ಡಿ ತಂದ MSEZ ಅಧಿಕಾರಿಗಳು| ದೈವಕ್ಕೆ ಹೂವು, ನೀರು ಇಡಲು ತಗಾದೆ

ಸಮಗ್ರ ನ್ಯೂಸ್: ಮಂಗಳೂರು ವಿಶೇಷ ಆರ್ಥಿಕ ವಲಯದ (SEZ) ವ್ಯಾಪ್ತಿಯಲ್ಲಿರೋ ಕಾಂತೇರಿ ಜುಮಾದಿ ದೇವಸ್ಥಾನದ ಆಚರಣೆಗೆ ಎಂಎಸ್‌ಇಝಡ್ ಅಧಿಕಾರಿಗಳು ತಡೆ ಒಡ್ಡಿದ ಆರೋಪ ಕೇಳಿ ಬಂದಿದೆ. ಮಂಗಳೂರು ಹೊರವಲಯದ ಬಜ್ಪೆ ಗ್ರಾಮದ ನೆಲ್ಲಿದಡಿ ಗುತ್ತುವಿನ ಕಾಂತೇರಿ ಜುಮಾದಿ ದೈವಸ್ಥಾನಕ್ಕೆ 800 ವರ್ಷಗಳ ಇತಿಹಾಸವಿದೆ. ಆದರೆ ಇದೀಗ ನೆಲ್ಲಿದಡಿ ಗುತ್ತಿನ ದೈವಕ್ಕೆ ಹೂವು, ನೀರು ಇಡಲು ಬಿಡುವುದಿಲ್ಲವೆನ್ನುವ ಮೂಲಕ ಎಸ್‌ಇಝೆಡ್ ಅಧಿಕಾರಿಗಳು ವಿವಾದ ಸೃಷ್ಟಿಸಿದ್ದಾರೆ. ತಿಂಗಳ ಸಂಕ್ರಮಣ ಪೂಜೆ ಸಲ್ಲಿಸಲು ಕಿರಿಕ್‌ ಮಾಡಿದ ಎಸ್‌ಇಝಡ್ ಅಧಿಕಾರಿಗಳ ನಡೆಯಿಂದ ಗುತ್ತುವಿನ

ಮಂಗಳೂರು: ಕಾಂತಾರ ಸಿನಿಮಾ ರೀತಿ ದೈವ ಕಾರ್ಯಕ್ಕೆ ಅಡ್ಡಿ ತಂದ MSEZ ಅಧಿಕಾರಿಗಳು| ದೈವಕ್ಕೆ ಹೂವು, ನೀರು ಇಡಲು ತಗಾದೆ Read More »

ಮತ್ತೆ ಹಕ್ಕಿಜ್ವರದ ಆತಂಕ| ಚಿಕನ್ ಸೇವನೆ ಬಗ್ಗೆ‌ ತಜ್ಞರು ಏನಂತಾರೆ? ಇಲ್ಲಿದೆ ಪಿನ್ ಟು ಪಿನ್ ಡೀಟೈಲ್ಸ್

ಸಮಗ್ರ ನ್ಯೂಸ್: ದೇಶದಲ್ಲಿ ಮತ್ತೆ ಹಕ್ಕಿಜ್ವರದ ಭೀತಿ ಎದುರಾಗಿದೆ. ಕಳೆದ ತಿಂಗಳು ನೆರೆಯ ಆಂಧ್ರಪ್ರದೇಶದಲ್ಲಿ ವ್ಯಾಪಕವಾಗಿ ಹರಡಿದ್ದ ಹಕ್ಕಿಜ್ವರ, ಇದೀಗ ಕರ್ನಾಟಕದ ಗಡಿಭಾಗದಲ್ಲೂ ಕಾಣಿಸಿದೆ. ಚಿಕ್ಕಬಳ್ಳಾಪುರದ ವರದಹಳ್ಳಿಯಲ್ಲಿ ಕೋಳಿಗಳು ಏಕಾಏಕಿ ಸಾವನ್ನಪ್ಪಿದ್ದು, ಹಕ್ಕಿಜ್ವರದ ಆತಂಕ ಎದುರಾಗಿದೆ. ಹಕ್ಕಿ ಜ್ವರ ಎಲ್ಲೆಡೆ ಹರಡುತ್ತಿರುವ ಕಾರಣ ಜನರು ಇದೀಗ ಕೋಳಿ ಮಾಂಸ ಹಾಗೂ ಮೊಟ್ಟೆ ತಿನ್ನುವ ವಿಚಾರದಲ್ಲಿ ಆತಂಕ ಎದುರಿಸುತ್ತಿದ್ದಾರೆ. ಈ ಸಮಯದಲ್ಲಿ ಕೋಳಿ ಮಾಂಸ ಹಾಗೂ ಮೊಟ್ಟೆ ತಿನ್ನುವುದು ಸುರಕ್ಷಿತವೇ ಎನ್ನುವ ಭಾವನೆ ಹಲವರಲ್ಲಿದೆ. ಹಕ್ಕಿ ಜ್ವರ ಇರುವಾಗ

ಮತ್ತೆ ಹಕ್ಕಿಜ್ವರದ ಆತಂಕ| ಚಿಕನ್ ಸೇವನೆ ಬಗ್ಗೆ‌ ತಜ್ಞರು ಏನಂತಾರೆ? ಇಲ್ಲಿದೆ ಪಿನ್ ಟು ಪಿನ್ ಡೀಟೈಲ್ಸ್ Read More »

103 ವರ್ಷದ ಅಜ್ಜಿಯ ದೈವಭಕ್ತಿ ಮತ್ತು ದೇಶಭಕ್ತಿ| ಧರ್ಮಸ್ಥಳಕ್ಕೆ ಪಾದಯಾತ್ರೆ

ಸಮಗ್ರ ನ್ಯೂಸ್: ತುಮಕೂರು ಜಿಲ್ಲೆಯ ತಿಪಟೂರು ಮೂಲದ 103 ವರ್ಷದ ಪಾರ್ವತಮ್ಮ ಎಂಬ ಅಜ್ಜಿ, ತಮ್ಮ ಅದ್ಭುತ ಧೈರ್ಯ ಮತ್ತು ಭಕ್ತಿಯಿಂದ ಇಡೀ ದೇಶದ ಗಮನ ಸೆಳೆದಿದ್ದಾರೆ. ದೇಶದ ಸೈನಿಕರ ಸುಖ-ಶಾಂತಿಯಿಗಾಗಿ ಅವರು ಧರ್ಮಸ್ಥಳ ಮಂಜುನಾಥ ಸ್ವಾಮಿಯ ದರ್ಶನಕ್ಕೆ ಪಾದಯಾತ್ರೆ ಕೈಗೊಂಡಿದ್ದು, ಅವರ ದೈವಭಕ್ತಿಯೊಂದಿಗೆ ದೇಶಭಕ್ತಿಯು ಸಹ ತೋರುತ್ತದೆ. ಯೋಧರು ತಮ್ಮ ಕುಟುಂಬ ಮತ್ತು ಬಂಧು-ಬಳಗವನ್ನು ಬಿಟ್ಟು ದೇಶದ ರಕ್ಷಣೆಗೆ ಜೀವ ಮೀಸಲಾಗಿಸುವುದರಿಂದ, ಅವರ ಒಳಿತಿಗಾಗಿ ಪ್ರಾರ್ಥನೆ ಮಾಡುವ ಉದ್ದೇಶದಿಂದ ಪಾರ್ವತಮ್ಮ ಈ ಪಾದಯಾತ್ರೆಯನ್ನು ಆರಂಭಿಸಿದ್ದಾರೆ. ಇಷ್ಟು

103 ವರ್ಷದ ಅಜ್ಜಿಯ ದೈವಭಕ್ತಿ ಮತ್ತು ದೇಶಭಕ್ತಿ| ಧರ್ಮಸ್ಥಳಕ್ಕೆ ಪಾದಯಾತ್ರೆ Read More »

ಕೋಟ್ಯಂತರ ಜನರನ್ನು ಸೆಳೆದ ಮಹಾ ಕುಂಭಮೇಳ… ಭಕ್ತರಿಗೆ ಪ್ರಧಾನಿ ಮೋದಿ ಸಂದೇಶ

ಸಮಗ್ರ ನ್ಯೂಸ್: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆದ ಮಹಾಕುಂಭ ಮೇಳ ಇದೀಗ ಮುಕ್ತಾಯಗೊಂಡಿದೆ. ಇದೇ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ ಬ್ಲಾಗ್​ ನಲ್ಲಿ ಬರೆದಿದ್ದು, ಇಂದು ‘ಏಕತೆಯ ಮಹಾ ಯಜ್ಞ ಪೂರ್ಣಗೊಂಡಿದೆ’ ಎಂದು ಹೇಳಿದ್ದಾರೆ. ಹಾಗೇ, ಈ ಬೃಹತ್ ಧಾರ್ಮಿಕ ಆಚರಣೆಯ ಸಮಯದಲ್ಲಿ ಭಕ್ತರು ಯಾವುದಾದರೂ ತೊಂದರೆಗಳನ್ನು ಎದುರಿಸಿದ್ದರೆ ಅದಕ್ಕೆ ಕ್ಷಮೆ ಕೋರುತ್ತೇನೆ ಎಂದು ಮೋದಿ ಹೇಳಿದ್ದಾರೆ. ಮಹಾ ಕುಂಭದಲ್ಲಿ 140 ಕೋಟಿ ದೇಶವಾಸಿಗಳ ನಂಬಿಕೆ 45 ದಿನಗಳ ಕಾಲ ಒಗ್ಗೂಡಿದ್ದರಿಂದ ಈ ಉತ್ಸವ ಅದ್ಭುತವಾಗಿ ಪೂರ್ಣಗೊಂಡಿದೆ.

ಕೋಟ್ಯಂತರ ಜನರನ್ನು ಸೆಳೆದ ಮಹಾ ಕುಂಭಮೇಳ… ಭಕ್ತರಿಗೆ ಪ್ರಧಾನಿ ಮೋದಿ ಸಂದೇಶ Read More »

ನಾಳೆಯಿಂದ(ಮಾ.1) ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ| ಪರೀಕ್ಷೆ ಬರೆಯುವ ಮುನ್ನ ಈ ನಿಯಮಗಳನ್ನು ಗಮನಿಸಿ

ಸಮಗ್ರ ನ್ಯೂಸ್: ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ಮಾರ್ಚ್ 1ರಿಂದ 20ರವರೆಗೆ ನಡೆಯಲಿದ್ದು, ಪರೀಕ್ಷೆ ನಡೆಸಲು ಮಂಡಳಿ ಈಗಾಗಲೇ ಸಕಲ ಸಿದ್ದತೆ ಮಾಡಿಕೊಂಡಿದೆ .ಪರೀಕ್ಷೆ ಬರೆಯುವ ಮುನ್ನ ವಿದ್ಯಾರ್ಥಿಗಳು ಅನುಸರಿಬೇಕಾದ ಸೂಚನೆಗಳು ಇಲ್ಲಿದೆ. 1) ಮುಖ್ಯ ಅಧೀಕ್ಷಕರು ಕ್ಯಾಮರಾ ಹೊಂದಿರದ ಸಾಮಾನ್ಯ ಮೊಬೈಲ್ ಮಾತ್ರ ಇರಿಸಿಕೊಳ್ಳಬಹುದು.2) ಎಲ್ಲಾ ಪರೀಕ್ಷಾ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಮೊಬೈಲ್, ಸ್ಮಾಟ್ ವಾಚ್ ಬಳಕೆ ನಿಷೇಧ3) ಎಲೆಕ್ಟ್ರಾನಿಕ್ ಸಾಮಾಗ್ರಿಗಳನ್ನು ಒಯ್ಯುವುದು ಮತ್ತು ಬಳಸುವುದನ್ನು ನಿಷೇಧಿಸಿದೆ.4) ಪರೀಕ್ಷಾ ಕೇಂದ್ರದೊಳಗೆ ಅನಧಿಕೃತ ವ್ಯಕ್ತಿಗಳ ಪ್ರವೇಶ, ಚಿತ್ರೀಕರಣ

ನಾಳೆಯಿಂದ(ಮಾ.1) ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ| ಪರೀಕ್ಷೆ ಬರೆಯುವ ಮುನ್ನ ಈ ನಿಯಮಗಳನ್ನು ಗಮನಿಸಿ Read More »

ಮಾ.15ರಿಂದ ಒಂದು ತಿಂಗಳು ಶಿರಾಡಿ ಘಾಟ್ ಸಂಚಾರ ಬಂದ್!?

ಸಮಗ್ರ ನ್ಯೂಸ್: ಬೆಂಗಳೂರು- ಮಂಗಳೂರು ರಾಷ್ಟ್ರೀಯ ಹೆದ್ದಾರಿ-75ರ ಶಿರಾಡಿ ಘಾಟಿಯಲ್ಲಿ ಚತುಷ್ಪಥ ರಸ್ತೆ ನಿರ್ಮಾಣ ಕಾಮಗಾರಿಯನ್ನು ಜೂ. 30 ರೊಳಗೆ ಪೂರ್ಣಗೊಳಿಸಲು ನಿರ್ಧರಿಸಿರುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ) ಕನಿಷ್ಠ ಒಂದು ತಿಂಗಳು ಶಿರಾಡಿ ಘಾಟಿಯಲ್ಲಿ ವಾಹನ ಸಂಚಾರ ಸ್ಥಗಿತಗೊಳಿಸಲು ಪ್ರಸ್ತಾವನೆ ಸಲ್ಲಿಸಿದೆ. ಇದಕ್ಕೆ ಸ್ಪಂದಿಸಿ ಹಾಸನ ಜಿಲ್ಲಾಡಳಿತ ಮಾ. 15ರಿಂದ ಎಪ್ರಿಲ್‌ ಅಂತ್ಯದವರೆಗೆ ಶಿರಾಡಿಯಲ್ಲಿ ವಾಹನ ಸಂಚಾರ ನಿರ್ಬಂಧಿಸುವ ಸಾಧ್ಯತೆಯಿದೆ. ಸಂಸದ ಶ್ರೇಯಸ್‌ ಪಟೇಲ್‌ ಗುರುವಾರ ಕಾಮಗಾರಿ ಪರಿವೀಕ್ಷಣೆ ನಡೆಸಿದ ವೇಳೆ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಲು

ಮಾ.15ರಿಂದ ಒಂದು ತಿಂಗಳು ಶಿರಾಡಿ ಘಾಟ್ ಸಂಚಾರ ಬಂದ್!? Read More »

ಚಿಕ್ಕಬಳ್ಳಾಪುರದಲ್ಲಿ ಹಕ್ಕಿ ಜ್ವರ… ಚಿಕನ್ ತಿನ್ನದಂತೆ ಮನವಿ

ಸಮಗ್ರ ನ್ಯೂಸ್: ರಾಜ್ಯದೆಲ್ಲೆಡೆ ಹಕ್ಕಿ ಜ್ವರ ಭೀತಿ ಶುರುವಾಗಿದ್ದು, ಇದೀಗ ಚಿಕ್ಕಬಳ್ಳಾಪುರದ ವರದಹಳ್ಳಿ ಗ್ರಾಮದ ನಾಟಿ ಕೋಳಿಗಳಲ್ಲಿ ಹಕ್ಕಿಜ್ವರ ಪತ್ತೆಯಾಗಿದೆ. ಗ್ರಾಮದ ರೈತ ದ್ಯಾವಪ್ಪ ಎಂಬುವರಿಗೆ ಸೇರಿದ 23 ಕೋಳಿಗಳು ಫೆಬ್ರವರಿ 23ರಂದು ಮೃತಟ್ಟಿದ್ದವು. ಬಳಿಕ ಅದೇ ಗ್ರಾಮದ ರತ್ನಮ್ಮಗೆ ಸೇರಿದ 5 ಕೋಳಿಗಳು ಮೃತಪಟ್ಟಿದ್ದವು. ಇದರಿಂದ ಆತಂಕಗೊಂಡ ದ್ಯಾವಪ್ಪ ಹಾಗೂ ರತ್ನಮ್ಮ ಯಾರೊ ಕೋಳಿಗಳಿಗೆ ವಿಷ ಹಾಕಿದ್ದಾರೆ ಎಂದು ನಂಬಿದ್ದರು. ಸ್ಥಳಕ್ಕೆ ಆಗಮಿಸಿದ ಪಶುಪಾಲಾನಾ ಇಲಾಖೆಯ ವೈದ್ಯರು ಪರಿಶೀಲನೆ ನಡೆಸಿ ಮೃತ ಕೋಳಿಗಳ ಸ್ಯಾಂಪಲ್ ಅನ್ನು

ಚಿಕ್ಕಬಳ್ಳಾಪುರದಲ್ಲಿ ಹಕ್ಕಿ ಜ್ವರ… ಚಿಕನ್ ತಿನ್ನದಂತೆ ಮನವಿ Read More »

ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಸ್ಟೇರಿಂಗ್ ಕಟ್| ತಪ್ಪಿದ ಭಾರೀ ಅನಾಹುತ

ಸಮಗ್ರ ನ್ಯೂಸ್: ಚಾರ್ಮಾಡಿ ಘಾಟ್ ರಸ್ತೆಯ ತಿರುವಿನಲ್ಲೇ ಕೆಎಸ್‌ಆರ್‌ಟಿಸಿ ಬಸ್ಸಿನ ಸ್ಟೇರಿಂಗ್ ಜಾಯಿಂಟ್ ತುಂಡಾಗಿದ್ದರೂ ಚಾಲಕನ ಚಾಕಚಕ್ಯತೆಯಿಂದ ಅಪಾಯದಿಂದ ಪ್ರಯಾಣಿಕರು ಪಾರಾಗಿದ್ದಾರೆ. ಧರ್ಮಸ್ಥಳದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ KA 17-F-1487 ನಂಬರಿನ ಶಿವಮೊಗ್ಗ ವಿಭಾಗದ ಬಸ್ ಚಾರ್ಮಾಡಿ ಘಾಟ್‌ನಲ್ಲಿ ಸಂಚರಿಸುತ್ತಿದ್ದ ವೇಳೆ ಹಠಾತ್‌ ಸ್ಟೀರಿಂಗ್ ಜಾಯಿಂಟ್ ಕಟ್ ಆಗಿತ್ತು. ಆದರೆ, ಚಾಲಕ ಎಚ್ಚರಿಕೆಯಿಂದ ಬಸ್‌ನ್ನು ನಿಯಂತ್ರಣಕ್ಕೆ ತಂದು, ಅಪಘಾತವನ್ನು ತಪ್ಪಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸಮಯೋಚಿತ ನಿರ್ವಹಣೆಯಿಂದ ಪ್ರಯಾಣಿಕರು ಯಾವುದೇ ಗಾಯಗಳಾಗದೆ ಸುರಕ್ಷಿತರಾಗಿದ್ದು, ಪ್ರಯಾಣಿಕರನ್ನು ಬದಲಿ ಬಸ್‌ನಲ್ಲಿ ಕಳಿಸಿಕೊಡಲಾಯಿತು.

ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಸ್ಟೇರಿಂಗ್ ಕಟ್| ತಪ್ಪಿದ ಭಾರೀ ಅನಾಹುತ Read More »