ಸಮಗ್ರ ನ್ಯೂಸ್: ಉತ್ತರಕನ್ನಡ ಜಿಲ್ಲೆಯಲ್ಲಿ ಗೋ ಕಳ್ಳತನ ಈ ಹಿಂದಿನಿಂದಲ್ಲೂ ನಡೆಯುತ್ತಾ ಬಂದಿದೆ. ಆದರೆ ಈಗ ನಾವು ಸುಮ್ಮನಿರಲು ಸಾಧ್ಯವಿಲ್ಲ. ಇನ್ನೇನಾದ್ರೂ ಈ ಪ್ರಕರಣ ಮುಂದುವರೆದರೆ ಗೋ ಕಳ್ಳರ ಮೇಲೆ ಶೂಟೌಟ್ ಮಾಡಲು ಪೊಲೀಸರಿಗೆ ಆದೇಶ ಮಾಡಬೇಕಾಗುತ್ತದೆ ಎನ್ನುವ ಮೂಲಕ ಗೋ ಕಳ್ಳರಿಗೆ ಖಡಕ್ ಎಚ್ಚರಿಕೆ ರವಾನಿಸಿದ್ದಾರೆ.
ಜಿಲ್ಲೆಯಲ್ಲಿ ಗೋ ಕಳ್ಳತನ ಹೊಸದೆನು ಅಲ್ಲ. ಬಿಜೆಪಿ ಸರಕಾರದಲ್ಲೂ ಸಾಕಷ್ಟು ಗೋ ಕಳ್ಳತನ ಪ್ರಕರಣಗಳಾಗಿವೆ. ಆದರೆ ಅವರು ಸುಮ್ಮನಾಗಿದ್ದರು ಅಂತಾ
ನಾವು ಸುಮ್ಮನಿರೋದಕ್ಕೆ ಆಗಲ್ಲ. ಎಂದಿದ್ದಾರೆ. ಅವರು ಜಿಲ್ಲಾಮಟ್ಟದ ಕೆಡಿಪಿ ಸಭೆಯಲ್ಲಿ ಪಾಲ್ಗೊಂಡು ಬಳಿಕ ನಡೆದ ಸುದ್ದಿಗೋಷ್ಠಿಯಲ್ಲಿ ಗೋ ಕಳ್ಳತನ ವಿಚಾರಕ್ಕೆ ಸಂಬಂಧಿಸಿ ಮಾತನಾಡಿದರು.
ಜಿಲ್ಲೆಯಲ್ಲಿ ಗೋ ಕಳ್ಳತನ ಅನೇಕ ವರ್ಷಗಳಿಂದ ನಡೆದುಕೊಂಡು ಬಂದಿದೆ. ಕುಮಟಾ ಶಾಸಕ ದಿನಕರ ಶೆಟ್ಟಿ ಮುಖ್ಯಮಂತ್ರಿ ಹಾಗೂ ಗೃಹ ಸಚಿವರನ್ನ ಟಿಕೀಸಿದ್ದಾರೆ. ಇವರ ಸರಕಾರ ಇರುವಾಗ ಇದನ್ನೂ ಅಧಿಕ ಗೋವು ಕಳ್ಳತವಾಗಿದೆ. ಆದರೆ ಯಾವುದೇ ರೀತಿಯಾದ ಕ್ರಮವಾಗಿರಲಿಲ್ಲ. ಆದರೆ ಈಗ ನಾವು ಯಾವದೇ ಮುಲಾಜಿಲ್ಲದೆ ಗೋ ಕಳ್ಳರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ.ನಾವು ಹೇಳಿದ್ದನ್ನು ಮಾಡುತ್ತೇವೆ. ಇನ್ನು ಮುಂದೆ ಜಿಲ್ಲೆಯಲ್ಲಿ ಗೋವು ಕಳ್ಳತನ ಮಾಡಿದವರ ಮೇಲೆ ಸೂಕ್ತ ಕ್ರಮ ಜಾರಿ ಮಾಡುವಂತೆ ಸೂಚಿಸಲಾಗಿದೆ ಎಂದರು.