Ad Widget .

ದ.ಕ ಜಿಲ್ಲಾ ಪಂಚಾಯತ್, ಕಡಬ ತಾ.ಪಂಚಾಯತ್, ಆಲಂಕಾರು ಗ್ರಾ.ಪಂ‌ಗೆ ನರೇಗಾ ಪ್ರಶಸ್ತಿ| ಹರ್ಷ ವ್ಯಕ್ತಪಡಿಸಿದ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಕಡಬ ತಾಲೂಕು ಪಂಚಾಯತ್ ಮತ್ತು ಅಲಂಕಾರು ಗ್ರಾಮ ಪಂಚಾಯತ್‌ಗಳಿಗೆ 2023-24 ನೇ ಸಾಲಿನ ರಾಜ್ಯ ಮಟ್ಟದ ನರೇಗಾ ಪ್ರಶಸ್ತಿಗಳು ಲಭಿಸಿರುವುದು ಅತ್ಯಂತ ಹೆಮ್ಮೆಯ ವಿಷಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

Ad Widget . Ad Widget . Ad Widget .

ಈ ಮನ್ನಣೆಯು ಮಾನವ ಕೆಲಸದ ದಿನಗಳನ್ನು ಹೆಚ್ಚಿಸುವಲ್ಲಿ ಅತ್ಯುತ್ತಮ, ಮಹಿಳೆಯರ ಭಾಗವಹಿಸುವಿಕೆ, ಕೂಲಿ ಪಾವತಿ, ಕಾಮಗಾರಿ ಮುಕ್ತಾಯಗೊಳಿಸುವಿಕೆ, ಕೃಷಿ ಮತ್ತು ಕೃಷಿಗೆ ಸಂಬಂಧಿಸಿದ ಚಟುವಟಿಕೆಗಳು ಮತ್ತು ಆಡಳಿತದಲ್ಲಿ ಗಮನಾರ್ಹ ಪ್ರಗತಿಗೆ ಸಾಕ್ಷಿಯಾಗಿದೆ ಎಂದಿದ್ದಾರೆ.

Ad Widget . Ad Widget .

ಇಂತಹ ಗಮನಾರ್ಹ ಸಾಧನೆಗಾಗಿ ಶ್ರಮಿಸಿದ ಜಿಲ್ಲೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಸಂಬಂದಪಟ್ಟ ಎಲ್ಲಾ ಅಧಿಕಾರಿಗಳು, ಸಿಬ್ಬಂದಿ ಮತ್ತು ಗ್ರಾಮ ಪಂಚಾಯತಿ ಅಧ್ಯಕ್ಷರು ಹಾಗೂ ಸದಸ್ಯರಿಗೆ ಸಚಿವರು ಅಭಿನಂದನೆ ಸಲ್ಲಿಸಿದ್ದಾರೆ.

Leave a Comment

Your email address will not be published. Required fields are marked *