ತಿರುಪತಿ: ಲಡ್ಡು ಪ್ರಸಾದ ಕಲಬೆರಕೆ ಪ್ರಕರಣ| ನಾಲ್ವರನ್ನು ಬಂಧಿಸಿದ ಸಿಬಿಐ

ಸಮಗ್ರ ನ್ಯೂಸ್: ತಿರುಪತಿ ತಿರುಮಲ ಲಡ್ಡು ಪ್ರಸಾದ ತಯಾರಿಸಲು ಬಳಸುವ ಹಸುವಿನ ತುಪ್ಪದಲ್ಲಿ ಕಲಬೆರಕೆ ಮಾಡಿದ ಆರೋಪದ ಮೇಲೆ ಸಿಬಿಐ ತನಿಖಾ ತಂಡ ನಾಲ್ವರನ್ನು ಬಂಧಿಸಿದೆ.

. Ad Widget . Ad Widget . Ad Widget .

ಬಂಧಿತರಲ್ಲಿ ಭೋಲೆ ಬಾಬಾ ಡೈರಿ (ರೂರ್ಕಿ, ಉತ್ತರಾಖಂಡ್) ಮಾಜಿ ನಿರ್ದೇಶಕರಾದ ಬಿಪಿನ್ ಜೈನ್ ಮತ್ತು ಪೊಮಿಲ್ ಜೈನ್, ವೈಷ್ಣವಿ ಡೈರಿ (ಪೂನಂಬಕ್ಕಂ) ಸಿಇಒ ಅಪೂರ್ವ ವಿನಯ್ ಕಾಂತ್ ಚಾವ್ಡಾ ಮತ್ತು ಎಆರ್ ಡೈರಿ (ದುಂಡಿಗಲ್) ಎಂಡಿ ರಾಜು ರಾಜಶೇಖರನ್ ಸೇರಿದ್ದಾರೆ.

. Ad Widget . Ad Widget . Ad Widget . Ad Widget . Ad Widget . Ad Widget . . Ad Widget . Ad Widget . Ad Widget . Ad Widget .

ತನಿಖಾಧಿಕಾರಿಗಳು ಅಪರಾಧ ಸಂಖ್ಯೆ ೪೭೦/೨೪ ರ ಅಡಿಯಲ್ಲಿ ಆರೋಪಿಗಳನ್ನು ತಿರುಪತಿ ನ್ಯಾಯಾಲಯಕ್ಕೆ ಹಾಜರುಪಡಿಸಿದರು.

ತುಪ್ಪ ಪೂರೈಕೆಯ ಸಮಯದಲ್ಲಿ ಗಂಭೀರ ಉಲ್ಲಂಘನೆಗಳು ಕಂಡುಬಂದಿದ್ದು, ಪ್ರತಿ ಹಂತದಲ್ಲೂ ಅಕ್ರಮಗಳು ನಡೆದಿವೆ ಎಂದು ಟಿಟಿಡಿ ಮೂಲಗಳು ತಿಳಿಸಿವೆ.ವೈಷ್ಣವಿ ಡೈರಿಯ ಪ್ರತಿನಿಧಿಗಳು ತುಪ್ಪ ಪೂರೈಕೆಗಾಗಿ ಎಆರ್ ಡೈರಿ ಹೆಸರಿನಲ್ಲಿ ಟೆಂಡರ್ ಪಡೆದರು.

Leave a Comment

Your email address will not be published. Required fields are marked *