Ad Widget .

‘ಮರೆಯಲಾರೆವು ನಿಮ್ಮ ತ್ಯಾಗವ’| ಫೆ.14 ಪುಲ್ವಾಮ ದಾಳಿ ಕರಾಳ ದಿನ| ಏನಾಗಿತ್ತು ಅಂದು?

ಸಮಗ್ರ ನ್ಯೂಸ್: 2019ರ ಫೆಬ್ರವರಿ 14 ರಂದು ಭದ್ರತಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ವಾಹನ ಉಗ್ರರು ಆತ್ಮಹತ್ಯಾ ಬಾಂಬರ್ ಮೂಲಕ ದಾಳಿ ಮಾಡಿದ್ದರು. ಈ ಆ ಕರಾಳ ಘಟನೆಯಲ್ಲಿ ಉಗ್ರರದಾಳಿಗೆ ಭಾರತಾಂಬೆಯ ಹೆಮ್ಮೆಯ 40 ಮಂದಿ ಸೈನಿಕರು ಹುತಾತ್ಮರಾಗಿದ್ದರು. ಆ ಕರಾಳ ದಿನಕ್ಕೆ ಇಂದಿಗೆ ಆರು ವರ್ಷ.

Ad Widget . Ad Widget . Ad Widget . Ad Widget .

ಪುಲ್ವಾಮಾ ಜಿಲ್ಲೆಯ ಲೆಥ್ಪೊರ ಪ್ರದೇಶದ ಅವಂತಿಪೊರ್‌ ಬಳಿ ಕಾರೊಂದರಲ್ಲಿ ಅಪಾರ ಪ್ರಮಾಣದ ಸ್ಫೋಟಕ ತುಂಬಿಕೊಂಡು ಬಂದಿದ್ದ ಜೈಷ್-ಎ-ಮೊಹಮ್ಮದ್ ಸಂಘಟನೆಯ ಆತ್ಮಹತ್ಯಾ ದಾಳಿಕೋರ ಆದಿಲ್ ಅಹ್ಮದ್ ದಾರ್ ಎಂಬಾತ ಸಿಆರ್‌ಪಿಎಫ್ ಸೈನಿಕರ ಬೆಂಗಾವಲು ಪಡೆ ವಾಹನಕ್ಕೆ ಡಿಕ್ಕಿ ಹೊಡೆದು 40 ಯೋಧರ ಸಾವಿಗೆ ಕಾರಣನಾದ. ಘಟನೆ ವೇಳೆ ಒಟ್ಟು 70 ಆರ್ಮಿ ಟ್ರಕ್ ಗಳಲ್ಲಿ 2500 ಸಿಆರ್‌ಪಿಎಫ್ ಯೋಧರು ಪ್ರಯಾಣಿಸುತ್ತಿದ್ದರು. ಇಂದು ದೇಶಾದ್ಯಂತ ಪುಲ್ವಾಮಾ ಘಟನೆಯಲ್ಲಿ ಹುತಾತ್ಮರಾದ ಯೋಧರಿಗೆ ಈ ಗೌರವ ಸಲ್ಲಿಸಲಾಗುತ್ತಿದ್ದು, ಈ ಭಯಾನಕ ಘಟನೆಯ ನೆನಪು ಮಾತ್ರ ಇನ್ನು ಮಾಸಿಲ್ಲ…

Ad Widget . Ad Widget .

2019ರ ಫೆಬ್ರವರಿ 14 ರಂದು ನಡೆದಿದ್ದೇನು?
ಸರಿಯಾಗಿ ಆರು ವರ್ಷಗಳ ಹಿಂದೆ, ಫೆಬ್ರವರಿ 14ರ ಅಪರಾಹ್ನ 3 ಗಂಟೆ ಸಮಯ. ಜಮ್ಮುವಿನ ಪುಲ್ವಾಮಾ ಜಿಲ್ಲೆಯಲ್ಲಿ ಜೈಶ್ ಇ ಮೊಹಮ್ಮದ್(ಜೆಇಎಂ) ಸಂಘಟನೆಯ ಉಗ್ರಗಾಮಿಗಳನ್ನು ಮತ್ತು ಸ್ಫೋಟಕಗಳನ್ನು ಹೊತ್ತ ವಾಹನ ಶ್ರೀನಗರ-ಜಮ್ಮು ರಾಷ್ಟ್ರೀಯ ಹೆದ್ದಾರಿಯಲ್ಲಿ ಕೇಂದ್ರ ಮೀಸಲು ಪೊಲೀಸ್ ಪಡೆ(ಸಿಆರ್ ಪಿಎಫ್)ಬೆಂಗಾವಲು ವಾಹನಕ್ಕೆ ಡಿಕ್ಕಿ ಹೊಡೆಯಿತು. ಜೈಷ್ ಎ ಮೊಹಮ್ಮದ್ ಸಂಘಟನೆಯ ಆತ್ಮಹತ್ಯಾ ದಾಳಿಕೋರ ಯೋಧರ ಬೆಂಗಾವಲು ವಾಹನದ ಮೇಲೆ ಡಿಕ್ಕಿ ಹೊಡೆದಾಗ ಸುಮಾರು ಸುಮಾರು 40 ಯೋಧರು ಸ್ಥಳದಲ್ಲಿಯೇ ಹುತಾತ್ಮರಾದರು.

ಈ ದಾಳಿಗೆ ದೇಶಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಯಿತು. ಪಕ್ಷಭೇದ ಮರೆತು ರಾಜಕೀಯ ನಾಯಕರು, ಸಮಾಜದ ಗಣ್ಯರು ಘಟನೆಯನ್ನು ಖಂಡಿಸಿದರು. ಈ ಭೀಕರ ದಾಳಿಗೆ ಇಡೀ ಭಾರತವೇ ಶೋಕ ಸಾಗರದಲ್ಲಿ ಮುಳುಗಿತ್ತು.

ಪ್ರತೀಕಾರ ತೀರಿಸಿಕೊಂಡ ಭಾರತ:
ಇನ್ನು ಪುಲ್ವಾಮಾ ದಾಳಿಗೆ ಪ್ರತಿಯಾಗಿ ಭಾರತೀಯ ವಾಯುಪಡೆಯು 2019ರ ಫೆಬ್ರವರಿ 26ರಂದು ಪಾಕ್‌ ಆಕ್ರಮಿತ ಕಾಶ್ಮೀರದ ಬಾಲಾಕೋಟ್‌ನಲ್ಲಿ ಜೈಶ್ ಎ ಮೊಹಮ್ಮದ್‌ ಉಗ್ರ ಸಂಘಟನೆ ಶಿಬಿರಗಳನ್ನು ಗುರಿಯಾಗಿಸಿಕೊಂಡು ವಾಯುದಾಳಿ ನಡೆಸಿತು. 12 ಮಿರಾಜ್‌- 2000 ಫೈಟರ್‌ ಜೆಟ್‌ಗಳು ಈ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದವು. 350 ಉಗ್ರರ ಶಿಬಿರಗಳನ್ನು ಪುಡಿಗಟ್ಟಲಾಗಿತ್ತು.

ಆದರೆ ದಾಳಿ ನಡೆದು ಆರು ವರ್ಷಗಳು ಕಳೆದರೂ ಜೆಇಎಂ ಮುಖ್ಯಸ್ಥ ಮೌಲಾನಾ ಮಸೂದ್ ಅಜರ್ ಸೇರಿದಂತೆ ಪ್ರಮುಖ ಸಂಚುಕೋರರು ಇಲ್ಲಿಯವರೆಗೂ ಸಿಕ್ಕಿಲ್ಲ. ಈ ದುಷ್ಕೃತ್ಯ ವೆಸಗಿದ ಪಾಪಿಗಳನ್ನು ನಮ್ಮ ವಶಕ್ಕೆ ಒಪ್ಪಿಸಿ ಎಂದು ಭಾರತ ಪತ್ರ ಬರೆದಿದ್ದರೂ, ಪಾಕಿಸ್ತಾನ ಮಾತ್ರ ಯಾವ ಪತ್ರಗಳಿಗೆ ಉತ್ತರಿಸುವ ಗೋಜಿಗೂ ಹೋಗಿಲ್ಲ. ಈ ದಾಳಿಯಲ್ಲಿ ಭಾಗಿಯಾದ 19 ಉಗ್ರರ ಪೈಕಿ 15 ಮಂದಿಯನ್ನು ವಿವಿಧ ಕಾರ್ಯಾಚರಣೆಗಳ ಸಂದರ್ಭದಲ್ಲಿ ಬಂಧಿಸಲಾಗಿದೆ, ಇಲ್ಲವೇ ಹತ್ಯೆ ಮಾಡಲಾಗಿದೆ. ಅಜರ್, ಆತನ ಸಹೋದರ ರಾವುಫ್ ಅಸ್ಗರ್ ಮತ್ತು ಅವನ ಸಂಬಂಧಿ ಅಮ್ಮರ್ ಆಲ್ವಿ ತಲೆಮರೆಸಿಕೊಂಡಿದ್ದಾರೆ.

Leave a Comment

Your email address will not be published. Required fields are marked *