ಸಮಗ್ರ ನ್ಯೂಸ್: ಶತಮಾನದ ಹೊಸ್ತಿಲಲ್ಲಿರುವ ಲಿಟ್ಲ್ ಫ್ಲವರ್
ಹಿ.ಪ್ರಾ. ಶಾಲೆ ದರ್ಬೆ ಪುತ್ತೂರು ಇಲ್ಲಿ ಶಾಲಾ ಸ್ಕೌಟ್, ಗೈಡ್ , ಕಬ್ ಮತ್ತು ಬುಲ್ ಬುಲ್ ವಾರ್ಷಿಕ ಮೇಳವು ಎರಡು ದಿನ ಅದ್ದೂರಿಯಾಗಿ ನೆರವೇರಿತು.
ಮೊದಲ ದಿನ 9.00 ಗಂಟೆಗೆ ಶಾಲಾ ಸಂಚಾಲಕಿ ಭಗಿನಿ ಪ್ರಶಾಂತಿ ಬಿ. ಎಸ್ ಅಧ್ಯಕ್ಷತೆಯಲ್ಲಿ ಧ್ವಜಾರೋಹಣ ನೇರವೇರಿತು. ಶಾಲಾ ಸ್ಕೌಟ್, ಗೈಡ್ , ಕಬ್ ಮತ್ತು ಬುಲ್ ಬುಲ್ ದಳದಿಂದ 350 ಮಕ್ಕಳು ಭಾಗವಹಿಸಿದರು. ಉದ್ಘಾಟನಾ ಸಮಾರಂಭದಲ್ಲಿ ವಿಧಾನ ಪರಿಷತ್ ಸದಸ್ಯರಾಗಿರುವ ಕಿಶೋರ್ ಕುಮಾರ್ ಬೊಟ್ಯಾಡಿ. ದೀಪ ಬೆಳಗಿಸಿ ಉದ್ಘಾಟಿಸಿದರು.
ಕಾರ್ಯಕ್ರಮದ ಕುರಿತು ಮಾತನಾಡಿದ ಇವರು “ ವಿದ್ಯಾರ್ಥಿಗಳಲ್ಲಿ ಎಳವೆಯಲ್ಲಿಯೇ ಶಿಸ್ತು , ಸಂಯಮ , ಸಹಕಾರದ ಜೀವನ, ಸಹೋದರತೆಯ ಭಾವನೆ ಹೀಗೆ ಭಾರತೀಯತೆಯ ಜಾಗೃತಿಗೆ ಇದು ಉತ್ತಮ ವೇದಿಕೆ ಎಂದರು”.
ವೇದಿಕೆಯಲ್ಲಿ ಪುತ್ತೂರು ನಗರ ಸಭೆಯ ಉಪಾಧ್ಯಕ್ಷರಾದ ಬಾಲಚಂದ್ರ ಕೆಮ್ಮಿಂಜೆ, ಪುತ್ತೂರು ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿಗಳಾದ ಚಕ್ರಪಾಣಿ , ಎಲ್. ಟಿ. ಪದವೀಧರೆ ಗೈಡ್ಸ್ ಕ್ಯಾಪ್ಟನ್ ಶ್ರೀಮತಿ ಸುನಿತಾ , ಕೋಸ್ಟಲ್ ಹೋಮ್ ಮಾಲಕರಾದ ಶ್ರೀ ಸಂದೇಶ್ ರೈ ಸಂಪ್ಯ, ರಂಗ ನಿರ್ದೆಶಕ ಉದಯ ಸಾರಂಗ್ , ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷರಾದ ರಾಮಚಂದ್ರ ಭಟ್ , ಮುಖ್ಯ ಶಿಕ್ಷಕಿ ಭಗಿನಿ ವೆನಿಶಾ ಬಿ. ಯಸ್, ಗೈಡ್ಸ್ ಕ್ಯಾಪ್ಟನ್ ಶ್ರೀಮತಿ ವಿಲ್ಮಾ ಫೆರ್ನಾಂಡಿಸ್ , ಮೇಳದ ನಾಯಕ ಸ್ಕೌಟರ್ ಬಾಲಕೃಷ್ಣ ಪೊರ್ದಾಲ್ ಉಪಸ್ಥಿತರಿದ್ದರು.
ಉದಯ ಸಾರಂಗ್ ಖ್ಯಾತ ರಂಗ ನಿರ್ದೆಶಕರು , ಶಿಕ್ಷಕರು, ಸತ್ಯ ನಾರಾಯಣ ಪ್ರೌಡ ಶಾಲೆ ಪೆರ್ಲ ರವರಿಂದ ಅಭಿನಯ ಗೀತೆ , ಥಿಯೆಟರ್ ಗೇಮ್ಸ್ ಹಾಗೂ ಮನೋರಂಜನಾತ್ಮಕ ಆಟಗಳು ನೇರವೇರಿತು. ಮಧ್ಯಾಹ್ನದ ಬಳಿಕ ಸ್ಕೌಟ್ ವಿದ್ಯಾರ್ಥಿಗಳಿಂದ ಗೂಡು ದೀಪ ರಚನೆ, ಗೈಡ್ಸ್ ವಿದ್ಯಾರ್ಥಿಗಳಿಂದ ನಕ್ಷತ್ರ ರಚನೆ ,ಕಬ್ ವಿದ್ಯಾರ್ಥಿಗಳಿಂದ ರಾಷ್ಟ್ರಧ್ವಜ ರಚನೆ, ಬುಲ್ ಬುಲ್ ವಿದ್ಯಾರ್ಥಿಗಳಿಂದ ಎಲೆಗಳಿಂದ ಆಕೃತಿ ತಯಾರಿ ನಡೆಯಿತು.ನಂತರ ಸ್ಕೌಟ್, ಗೈಡ್ , ಕಬ್ ಮತ್ತು ಬುಲ್ ಬುಲ್ ವಿದ್ಯಾರ್ಥಿಗಳಿಂದ ಬೆಂಕಿ ಬಳಸದ ಅಡುಗೆ ತಯಾರಿ ನಡೆಯಿತು.
ಸಂಜೆ 350 ವಿದ್ಯಾರ್ಥಿಗಳ ನೇತೃತ್ವದಲ್ಲಿ ಆಕರ್ಷಕ ಮೆರವಣಿಗೆ ನಡೆಯಿತು. ಮೆರವಣಿಗೆಯನ್ನು ಶ್ರೀ ರಾಮಚಂದ್ರ ಭಟ್ ಉಪಾಧ್ಯಕ್ಷರು ರಕ್ಷಕ ಶಿಕ್ಷಕ ಸಂಘ ಉದ್ಘಾಟಿಸಿದರು. ದರ್ಬೆ ವೃತ್ತದ ಮೂಲಕ ಚೆಂಡೆ, ವಾದ್ಯ, ಘೋಷಗಳೊಂದಿಗೆ ಆಕರ್ಷಕವಾಗಿ ನೆರವೇರಿತು. ತದನಂತರ ಶಾಲಾ ಸ್ಕೌಟ್, ಗೈಡ್, ಕಬ್ ಮತ್ತು ಬುಲ್ ಬುಲ್ ಮಕ್ಕಳಿಂದ ರಸಮಂಜರಿ ಕಾರ್ಯಕ್ರಮ ನೆರವೇರಿತು.
ಕಾರ್ಯಕ್ರಮದ ಕಡೇಯದಾಗಿ ಶಾಲಾ ಸಂಚಾಲಕಿ ಭಗಿನಿ ಪ್ರಶಾಂತಿ ಬಿ. ಎಸ್ ಅಧ್ಯಕ್ಷತೆಯಲ್ಲಿ ಸಮಾರೋಪ ಸಮಾರಂಭ ನೆರವೇರಿತು. ಸ್ಕೌಟ್, ಗೈಡ್ , ಕಬ್ ಮತ್ತು ಬುಲ್ ಬುಲ್ ವಿದ್ಯಾರ್ಥಿಗಳು ಎರಡು ದಿನದ ಶಿಬಿರದ ಅನುಭವವನ್ನು ಹಂಚಿಕೊಂಡರು. ಎರಡು ದಿನದ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದ ಸ್ವಯಂ ಸೇವಕರನ್ನು ಗೌರವಿಸಲಾಯಿತು. ವೇದಿಕೆಯಲ್ಲಿ ಶಾಲಾ ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷರಾದ ರಾಮಚಂದ್ರ ಭಟ್ , ಶಾಲಾ ಮುಖ್ಯ ಶಿಕ್ಷಕಿ ಭಗಿನಿ ವೆನಿಶಾ ಬಿ. ಯಸ್, ಗೈಡ್ಸ್ ಕ್ಯಾಪ್ಟನ್ ಶ್ರೀಮತಿ ವಿಲ್ಮಾ ಫೆರ್ನಾಂಡಿಸ್ , ಮೇಳದ ನಾಯಕ ಸ್ಕೌಟರ್ ಬಾಲಕೃಷ್ಣ ಪೊರ್ದಾಲ್ , ಗೈಡರ್ ಗಳಾದ ನಳಿನಾಕ್ಷಿ ,ಭವ್ಯ ಯೋಗಿಶ್, ರೇಷ್ಮಾ,ದಿವ್ಯ ಕುಮಾರಿ, ಹರಿಣಾಕ್ಷಿ, ಜೋಸ್ಲಿನ್ ಪಾಯ್ಸ್ ಹಾಗೂ ಜಯಲಕ್ಷ್ಮಿ ಉಪಸ್ಥಿತರಿದ್ದರು.