ರಾಜ್ಯದಲ್ಲಿ ಖೋಟಾನೋಟು ಜಾಲ ಬಯಲಿಗೆ| ಪೊಲೀಸ್ ಸಿಬ್ಬಂದಿಯೇ ಕೃತ್ಯದಲ್ಲಿ ಭಾಗಿ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಖೋಟಾ ನೋಟುಗಳು ಜಾಲ ಹೆಚ್ಚಾಗುತ್ತಲೇ ಇದ್ದು, ಇದೀಗ ರಾಯಚೂರಿನಲ್ಲಿ ಸಕ್ರಿಯವಾಗಿ ತೊಡಗಿದ್ದ ದಂಧೆಯ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಓರ್ವ ಪಿಸಿ ಸೇರಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

Ad Widget . Ad Widget .

ರಾಯಚೂರಿನ ಪಶ್ಚಿಮ ಠಾಣೆ ವ್ಯಾಪ್ತಿಯಲ್ಲಿ ಖೋಟಾ ನೋಟು ಮುದ್ರಿಸಲಾಗುತ್ತಿದೆ ಎಂದು ಖಚಿತ ಮಾಹಿತಿಯ ಮೇರೆಗೆ ಪೊಲೀಸರು ಏಕಾಏಕಿ ದಾಳಿ ನಡೆಸಿದ್ದು, ಈ ವೇಳೆ ಲಕ್ಷಾಂತರ ಮೌಲ್ಯದ ಖೋಟಾ ನೋಟು ಹಾಗೂ ನೋಟು ಮುದ್ರಣಕ್ಕೆ ಬಳಸುತ್ತಿದ್ದ ಬಿಳಿ ಬಣ್ಣದ ಪೇಪರ್ ಗಳನ್ನು ವಶ ಪಡಿಸಿಕೊಳ್ಳಲಾಗಿದೆ.

Ad Widget . Ad Widget .

ಈ ದಾಳಿಯಲ್ಲಿ ರಾಯಚೂರು ಶಸ್ತ್ರಾಸ್ತ್ರ ಮೀಸಲು ಪಡೆಯ ಕಾನ್ಸ್ ಸ್ಟೇಬಲ್ ಮರಿಲಿಂಗ ಸೇರಿದಂತೆ ರಮೇಶ್, ಆದಿ, ಶಿವಲಿಂಗ ಸೇರಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.

Leave a Comment

Your email address will not be published. Required fields are marked *