ಬೆಳ್ತಂಗಡಿ: ಐದು ತಿಂಗಳ‌ ಹಸುಗೂಸು ಕಾಡೊಳಗೆ ಅನಾಥವಾಗಿ ಪತ್ತೆ

ಸಮಗ್ರ ನ್ಯೂಸ್: ಬೆಳ್ತಂಗಡಿ ತಾಲೂಕಿನ ಬೆಳಾಲು ಕೊಡೋಳುಕೆರೆ ಎಂಬಲ್ಲಿ ನಾಲ್ಕು ತಿಂಗಳ ಹೆಣ್ಣು ಮಗುವನ್ನು ಕಾಡಿನ ಮಧ್ಯೆ ಬಿಟ್ಟು ಹೋದ ಘಟನೆ ಶನಿವಾರ (ಮಾ.22) ಬೆಳಗ್ಗೆ ಕಂಡುಬಂದಿದೆ.

Ad Widget .

ಬೆಳಾಲು ಗ್ರಾ.ಪಂ. ವ್ಯಾಪ್ತಿಯ ಮುಂಡ್ರೊಟ್ಟು ರಸ್ತೆಯ ಕೊಡೋಳುಕೆರೆ ಕಾಡಿನಲ್ಲಿ ಮಗುವೊಂದು ಅಳುವ ಶಬ್ಧ ದಾರಿಹೋಕ ಮಹಿಳೆಗೆ ಕೇಳಿದ್ದು, ತಕ್ಷಣ ಅವರು ಮಗುವನ್ನು ಕಂಡು ಸಂಬಂಧ ಪಟ್ಟವರಿಗೆ ತಿಳಿಸಿದ್ದಾರೆ.

Ad Widget . Ad Widget .

ಘಟನಾ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಮತ್ತು ಆರೋಗ್ಯ ಇಲಾಖೆ ದೌಡಾಯಿಸಿದ್ದು, ಮಹಿಳಾ ಮತ್ತು ಮಕ್ಕಳ ಇಲಾಖಾ ಬರುವಿಕೆಗಾಗಿ ಕಾಯುತ್ತಿದ್ದಾರೆ. ಈ ವಿಚಾರವಾಗಿ ಮುಂದೆ ಮಗುವನ್ನು ಸೂಕ್ತ ಚಿಕಿತ್ಸೆ ಒದಗಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಬೆಳಾಲು ಗ್ರಾ.ಪಂ. ಅಧ್ಯಕ್ಷೆ ವಿದ್ಯಾ ಶ್ರೀನಿವಾಸ್ ಗೌಡ ತಿಳಿಸಿದ್ದಾರೆ.

Leave a Comment

Your email address will not be published. Required fields are marked *