ಸುಳ್ಯ: ಸುಳ್ಳು ಸುದ್ದಿ ಪ್ರಸಾರ ಆರೋಪ| ವೆಬ್ ಸೈಟ್ ಹಾಗೂ ಸಂಪಾದಕರ ವಿರುದ್ಧ ದೂರು ದಾಖಲು

ಸಮಗ್ರ ನ್ಯೂಸ್: ಸುಳ್ಳು ಸುದ್ದಿ ಪ್ರಸಾರ ಮಾಡಿದ ಆರೋಪದಲ್ಲಿ, ವೆಬ್‌ ನ್ಯೂಸ್‌ನ ವರದಿಗಾರ ಹಾಗೂ ಸಂಪಾದಕರ ವಿರುದ್ಧ ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad Widget ... ..

ಮಾ.20ರಂದು ರಾತ್ರಿ ಸಂಪಾಜೆ ಗ್ರಾಮದ ಕಲ್ಲುಗುಂಡಿ ಬಳಿ ಧನುಷ್‌ ಪಿ.ಎಸ್‌. ಎಂಬಾತನು ಕಲ್ಲುಗುಂಡಿ ಕಡೆಗೆ ಮಾರುತಿ ಆಮ್ನಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ, ಮಡಿಕೇರಿ ಕಡೆಗೆ ಪ್ರಯಾಣಿಸುತ್ತಿದ್ದ ಕಾರಿನಲ್ಲಿದ್ದವರೊಂದಿಗೆ ಯಾವುದೋ ಕಾರಣಕ್ಕೆ ಮಾತಿನ ಚಕಮಕಿ ನಡೆದಿತ್ತು.

Ad Widget

ಇದನ್ನು ಸುಳ್ಯದ ವೆಬ್‌ಸೈಟೊಂದು, “ಹಿಂದೂ ಹುಡುಗಿಯರ ಜತೆ ಅನ್ಯ ಕೋಮಿನ ಯುವಕರು; ಸಂಪಾಜೆ ತನಕ ತಡರಾತ್ರಿ ಕಾರನ್ನು ಬೆನ್ನಟ್ಟಿದ ಯುವಕ’ ಎಂಬ ಶೀರ್ಷಿಕೆಯಲ್ಲಿ ಪ್ರಸಾರ ಮಾಡಿ ಕೋಮು ಸಾಮರಸ್ಯ ಕೆಡುವ ರೀತಿಯಲ್ಲಿ ಘಟನೆಯನ್ನು ಬಿಂಬಿಸಿದ್ದಾರೆ ಎಂದು ಪ್ರಕರಣ ದಾಖಲಾಗಿದೆ.

Leave a Comment

Your email address will not be published. Required fields are marked *