ಬೆಳ್ತಂಗಡಿ: ಬೈಕ್ ಅಪಘಾತಕ್ಕೆ ಯಕ್ಷಗಾನ ಭಾಗವತ ಬಲಿ

ಸಮಗ್ರ ನ್ಯೂಸ್: ಎರಡು ಬೈಕ್ ಗಳ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಮಂಗಳಾದೇವಿ ಮೇಳದ ಭಾಗವತ ಸತೀಶ್ ಆಚಾರ್ಯ ಸಾವನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ಅಂಡಿಂಜೆಯ ಕಿಲಾರ ಮಾರಿಕಾಂಭ ದೇವಸ್ಥಾನದ ತಿರುವಿನಲ್ಲಿ ನಡೆದಿದೆ.

Ad Widget .

ಅಂಡಿಂಜೆ ಗ್ರಾಮದ ಪಿಯೂಲಿರು ಮನೆ ನಿವಾಸಿ ಮಂಗಳಾದೇವಿ ಯಕ್ಷಗಾನ ಮೇಳದ ಯಕ್ಷಗಾನ ಭಾಗವತರಾದ ಸತೀಶ್ ಆಚಾರ್ಯ ಅಂಡಿಂಜೆ (40) ಸಾವನಪ್ಪಿದವರು.

Ad Widget . Ad Widget .

ಸುಳ್ಯದಲ್ಲಿ ನಡೆದ ಯಕ್ಷಗಾನ ಕಾರ್ಯಕ್ರಮವನ್ನು ಮುಗಿಸಿ ಮುಂಜಾನೆ 4 ಗಂಟೆಗೆ ಸತೀಶ್ ಆಚಾರ್ಯ ಅವರು ತಮ್ಮ ಬೈಕ್‌ನಲ್ಲಿ ನಾರಾವಿಯಿಂದ ಅಂಡಿಂಜೆಗೆ ಬರುತ್ತಿರುವ ಸಂದರ್ಭದಲ್ಲಿ ಅಂಡಿಂಜೆ ಕಿಲಾರ ಮಾರುಗುಡಿ ದೇವಸ್ಥಾನದ ಸಮೀಪದ ತಿರುವು ರಸ್ತೆಯಲ್ಲಿ ಎದುರಿನಿಂದ ಬರುತ್ತಿದ್ದ ಬೈಕ್ ಹಾಗೂ ಇವರು ಹೋಗುತ್ತಿದ್ದ ಬೈಕ್ ಪರಸ್ಪರ ಡಿಕ್ಕಿ ಹೊಡೆದುಕೊಂಡು ಈ ದುರ್ಘಟನೆ ನಡೆದಿದೆ. ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟರು. ಎದುರಿನಿಂದ ಬರುತ್ತಿದ್ದ ಬೈಕ್‌ನಲ್ಲಿದ್ದವರಿಗೂ ಗಾಯವಾಗಿದೆ. ಈ ಬಗ್ಗೆ ವೇಣೂರು ಪೋಲಿಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.

Leave a Comment

Your email address will not be published. Required fields are marked *