ಸಮಗ್ರ ನ್ಯೂಸ್:
ಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ನ 20ನೇ (IPL 2025) ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ರೋಚಕ ಜಯ ಸಾಧಿಸಿದೆ. ತನ್ನ ನಾಲ್ಕನೇ ಪಂದ್ಯದಲ್ಲಿ ಐದು ಬಾರಿಯ ಚಾಂಪಿಯನ್ ಮುಂಬೈ ತಂಡವನ್ನು ಎದುರಿಸಿದ್ದ ಆರ್ಸಿಬಿ ಕೊನೆಯವರೆಗೂ ರೋಚಕತೆಯಿಂದ ಕೂಡಿದ್ದ ಈ ಪಂದ್ಯವನ್ನು ಕೊನೆಯ ಓವರ್ನಲ್ಲಿ ಗೆದ್ದುಕೊಂಡಿತು.
ಮುಂಬೈ ಗೆಲ್ಲಲು ಕೊನೆಯ ಓವರ್ನಲ್ಲಿ 19 ರನ್ ಬೇಕಿತ್ತು. ಈ ವೇಳೆ 20ನೇ ಓವರ್ ಬೌಲಿಂಗ್ ಮಾಡುವ ಜವಬ್ದಾರಿ ಹೊತ್ತ ಕೃನಾಲ್ ಪಾಂಡ್ಯ ಈ ಓವರ್ನಲ್ಲಿ 3 ವಿಕೆಟ್ ಕಬಳಿಸಿ ತಂಡಕ್ಕೆ 12 ರನ್ಗಳ ಜಯ ತಂದುಕೊಟ್ಟರು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್ಸಿಬಿ 221 ರನ್ ಕಲೆಹಾಕಿದರೆ, ಈ ಗುರಿ ಬೆನ್ನಟ್ಟಿದ ಮುಂಬೈ 209 ರನ್ ಕಲೆಹಾಕಲಷ್ಟೇ ಶಕ್ತವಾಯಿತು.
ವಾಸ್ತವವಾಗಿ 222 ರನ್ಗಳ ಗುರಿ ಬೆನ್ನಟ್ಟಿದ ಮುಂಬೈ ಒಂದು ಹಂತದಲ್ಲಿ ಈ ಪಂದ್ಯವನ್ನು ಗೆಲ್ಲಬಹುದೆಂದು ಭಾವಿಸಲಾಗಿತ್ತು. ಆದರೆ ಕೊನೆಯ ಕ್ಷಣಗಳಲ್ಲಿ ಆರ್ಸಿಬಿ ಬೌಲರ್ಗಳು ಅದ್ಭುತ ಪ್ರದರ್ಶನ ನೀಡಿ ತಮ್ಮ ತಂಡಕ್ಕೆ ಗೆಲುವು ತಂದುಕೊಟ್ಟರು. ಈ ಗೆಲುವು ಆರ್ಸಿಬಿಗೆ ತುಂಬಾ ವಿಶೇಷವಾಗಿದೆ. ಏಕೆಂದರೆ ಈ ತಂಡವು 10 ವರ್ಷಗಳ ನಂತರ ವಾಂಖೆಡೆಯಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಸೋಲಿಸಿದ ಸಾಧನೆ ಮಾಡಿದೆ.
ಕೊನೆಯ ಓವರ್ನಲ್ಲಿ ಮುಂಬೈ ಇಂಡಿಯನ್ಸ್ಗೆ 19 ರನ್ಗಳು ಬೇಕಾಗಿದ್ದವು. ಹಿಂದಿನ ಓವರ್ನಲ್ಲಿ 19 ರನ್ಗಳನ್ನು ನೀಡಿದ್ದ ಸ್ಪಿನ್ನರ್ ಕೃನಾಲ್ ಪಾಂಡ್ಯಗೆ ಆರ್ಸಿಬಿ ಕ್ಯಾಪ್ಟನ್ ರಜತ್ ಪಾಡಿದರ್ ಬೌಲಿಂಗ್ ಮಾಡುವ ಜವಬ್ದಾರಿ ನೀಡಿದರು. ನಾಯಕನ ನಂಬಿಕೆಯನ್ನು ಉಳಿಸಿಕೊಂಡ ಕೃನಾಲ್ ಸತತ ಎರಡು ಎಸೆತಗಳಲ್ಲಿ ವಿಕೆಟ್ ಪಡೆದರು. ಇದಾದ ನಂತರ, ಅವರು ಐದನೇ ಎಸೆತದಲ್ಲಿ ನಮನ್ ಧೀರ್ ಅವರ ವಿಕೆಟ್ ಪಡೆಯುವ ಮೂಲಕ ಪಂದ್ಯವನ್ನು ಕೊನೆಗೊಳಿಸಿದರು.